AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
ಯೂಟ್ಯೂಬ್​ನ ನೂತನ ಸಿಇಒ ನೀಲ್ ಮೋಹನ್Image Credit source: Economic Times
ನಯನಾ ರಾಜೀವ್
|

Updated on:Feb 17, 2023 | 7:34 AM

Share

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 17 February 23

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!