AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
ಯೂಟ್ಯೂಬ್​ನ ನೂತನ ಸಿಇಒ ನೀಲ್ ಮೋಹನ್Image Credit source: Economic Times
ನಯನಾ ರಾಜೀವ್
|

Updated on:Feb 17, 2023 | 7:34 AM

Share

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 17 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ