AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
ಯೂಟ್ಯೂಬ್​ನ ನೂತನ ಸಿಇಒ ನೀಲ್ ಮೋಹನ್Image Credit source: Economic Times
ನಯನಾ ರಾಜೀವ್
|

Updated on:Feb 17, 2023 | 7:34 AM

Share

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 17 February 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ