AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ.

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
ಯೂಟ್ಯೂಬ್​ನ ನೂತನ ಸಿಇಒ ನೀಲ್ ಮೋಹನ್Image Credit source: Economic Times
ನಯನಾ ರಾಜೀವ್
|

Updated on:Feb 17, 2023 | 7:34 AM

Share

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 17 February 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ