AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಮತ್ತೊಂದು ಗೌರವ: ಸುಡಾನ್​ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನೆ ಕಮಾಂಡರ್​ ಆಗಿ ಭಾರತೀಯ ಸೇನೆಯ ಅಧಿಕಾರಿ ನೇಮಕ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಈ ನೇಮಕ ಮಾಡಿದ್ದಾರೆ

ಭಾರತಕ್ಕೆ ಮತ್ತೊಂದು ಗೌರವ: ಸುಡಾನ್​ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನೆ ಕಮಾಂಡರ್​ ಆಗಿ ಭಾರತೀಯ ಸೇನೆಯ ಅಧಿಕಾರಿ ನೇಮಕ
ಲೆಫ್ಟಿನೆಂಟ್ ಜನರಲ್ ಮೋಹನ್ ಸುಬ್ರಹ್ಮಣ್ಯನ್
TV9 Web
| Edited By: |

Updated on:Jul 07, 2022 | 11:02 AM

Share

ನ್ಯೂಯಾರ್ಕ್​: ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಮೋಹನ್ ಸುಬ್ರಹ್ಮಣ್ಯನ್ ಅವರನ್ನು ದಕ್ಷಿಣ ಸುಡಾನ್​ನಲ್ಲಿ ನೆಲೆನಿಂತಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಕಮಾಂಡರ್ ಆಗಿ ನಿಯೋಜಿಸಲಾಗಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಈ ನೇಮಕ ಮಾಡಿದ್ದಾರೆ. ಈ ಮೊದಲೂ ಸಹ ದಕ್ಷಿಣ ಸುಡಾನ್​ನಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಕಮಾಂಡರ್ ಭಾರತೀಯರೇ ಆಗಿದ್ದರು ಎನ್ನುವುದು ಗಮನಾರ್ಹ ಸಂಗತಿ. ಈ ಹಿಂದೆ ಸುಡಾನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೆಫ್ಟಿನೆಂಟ್ ಜನರಲ್ ಶೈಲೇಶ್ ಟಿನೈಕರ್ ಅವರ ಸ್ಥಾನಕ್ಕೆ ಇದೀಗ ಸುಬ್ರಹ್ಮಣ್ಯನ್ ಬಂದಿದ್ದಾರೆ. ಶೈಲೇಶ್ ಅವರ ಬದ್ಧತೆ, ನಾಯಕತ್ವದ ಗುಣ ಮತ್ತು ಸೇವಾ ಮನೋಭಾವವನ್ನು ಆಂಟೊನಿಯೊ ಗುಟೆರಸ್ ಶ್ಲಾಘಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಶೈಲೇಶ್ ಅವರನ್ನು ಮೇ 2019ರಲ್ಲಿ ಶಾಂತಿಪಾಲನಾ ಪಡೆಯ ಕಮಾಂಡರ್ ಆಗಿ ನೇಮಿಸಲಾಗಿತ್ತು.

ಲೆಫ್ಟಿನೆಂಟ್ ಜನರಲ್ ಸುಬ್ರಹ್ಮಣ್ಯನ್ ಅವರು ಭಾರತೀಯ ಸೇನೆಯಲ್ಲಿ ಸುಮಾರು 36 ವರ್ಷ ಸೇವೆ ಸಲ್ಲಿಸಿದ್ದಾರೆ. ಶಾಂತಿಪಾಲನಾ ಪಡೆಗೆ ನಿಯೋಜನೆಯಾಗುವ ಮೊದಲು ಮಿಲಿಟರಿ ಕಾರ್ಯಾಚರಣೆ ಮತ್ತು ಕಟ್ಟೆಚ್ಚರ ವಿಭಾಗದಲ್ಲಿ ಜನರಲ್ ಆಫೀಸರ್ ಕಮಾಂಡಿಂಗ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸೇನೆಯ ಒಟ್ಟಾರೆ ಸಿದ್ಧತೆಯ ಗುಣಮಟ್ಟದ ಮೇಲೆ ನಿಗಾ ಇರಿಸುತ್ತಿದ್ದರು. ಭಾರತೀಯ ಸೇನೆಯ ಮೌಂಟೇನ್ ಬ್ರಿಗೇಡ್​, ಇನ್​ಫೆಂಟ್ರಿ ಬ್ರಿಗೇಡ್, ಸ್ಟ್ರೈಕ್ ಇನ್​ಫೆಂಟ್ರಿ ಡಿವಿಷನ್, ಖರೀದಿ ಮತ್ತು ನೇಮಕಾತಿ ವಿಭಾಗಗಳ ಉನ್ನತ ಹುದ್ದೆಗಳಲ್ಲಿ ಸುಬ್ರಹ್ಮಣ್ಯನ್ ಕಾರ್ಯನಿರ್ವಹಿಸಿದ್ದರು.

ವಿಯೆಟ್ನಾಂ, ಲಾವೋಸ್ ಮತ್ತು ಕಾಂಬೋಡಿಯಾ ಸೇನೆಗಳ ವಿವಿಧ ಘಟಕಗಳಿಗೆ ಭಾರತೀಯ ಸೇನೆಯ ಪ್ರತಿನಿಧಿಯಾಗಿ ಮಾರ್ಗದರ್ಶನ ಮಾಡಿದ್ದರು. ಸಮಾಜಶಾಸ್ತ್ರ ಮತ್ತು ರಕ್ಷಣಾ ವಿದ್ಯಮಾನಗಳ ನಿರ್ವಹಣೆ ವಿಷಯಗಳಲ್ಲಿ ಎಂಫಿಲ್ ಪದವಿ ಪಡೆದಿದ್ದಾರೆ.

ಶಾಂತಿಪಾಲನಾ ಪಡೆಯಲ್ಲಿ ಭಾರತ

ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಭಾರತವು ಗಮನಾರ್ಹ ಪ್ರಮಾಣದಲ್ಲಿ ಯೋಧರನ್ನು ಕಳಿಸುತ್ತಿದೆ. ದಕ್ಷಿಣ ಸುಡಾನ್​ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯು ಜುಲೈ 2011ರಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಅಲ್ಲಿ ವಿವಿಧ ದೇಶಗಳ 17,982 ಯೋಧರು ಕೆಲಸ ಮಾಡುತ್ತಿದ್ದಾರೆ. ಈ ಪೈಕಿ 2,285 ಮಂದಿ ಭಾರತೀಯರು ಎಂಬುದು ಗಮನಾರ್ಹ ಸಂಗತಿ.

Published On - 11:02 am, Thu, 7 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?