AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ಲಂಡನ್‌ನಲ್ಲಿ ಖಲಿಸ್ತಾನಿ ಹಿಂಸಾಚಾರದ ವಿರುದ್ಧ ಭಾರತೀಯರ ಪ್ರತಿಭಟನೆ

ಹೇಳಿಕೆಗಳನ್ನು ಬಿಡುಗಡೆ ಮಾಡುವ ಬದಲು ಸರ್ಕಾರ ಮತ್ತು ಮೇಯರ್ ಕ್ರಮವನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ

Watch: ಲಂಡನ್‌ನಲ್ಲಿ ಖಲಿಸ್ತಾನಿ ಹಿಂಸಾಚಾರದ ವಿರುದ್ಧ ಭಾರತೀಯರ ಪ್ರತಿಭಟನೆ
ಲಂಡನ್ ನಲ್ಲಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on: Mar 21, 2023 | 9:51 PM

Share

ಲಂಡನ್‌ನಲ್ಲಿರುವ (London) ಭಾರತೀಯ ಹೈಕಮಿಷನ್‌ನ (Indian High Commission) ಮೇಲೆ ಹಾರುತ್ತಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿರುವುದರ ವಿರುದ್ಧ ಪ್ರಬಲ ಪ್ರತಿಭಟನೆಯನ್ನು ದಾಖಲಿಸಿದ ಭಾರತೀಯ ವಲಸಿಗರು ಈ ಬಗ್ಗೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕಚೇರಿಯ ಹೊರಗೆ ಜಮಾಯಿಸಿದ್ದಾರೆ. ಭಾರತೀಯ ಧ್ವಜವನ್ನು ಅಗೌರವಿಸಿದ ಖಲಿಸ್ತಾನಿ ಬೆಂಬಲಿಗರ (Khalistani violence) ವಿರುದ್ಧ ತ್ವರಿತವಾಗಿ ಕ್ರಮಕೈಗೊಳ್ಳುವಂತೆ ಬ್ರಿಟಿಷ್ ಸರ್ಕಾರ ಮತ್ತು ಲಂಡನ್ ಮೇಯರ್ ಸಾದಿಕ್ ಖಾನ್ ಅವರಲ್ಲಿ ಭಾರತೀಯ ವಲಸಿಗರು ಒತ್ತಾಯಿಸಿದ್ದಾರೆ.ಖಲಿಸ್ತಾನಿ ಪರ ಚಟುವಟಿಕೆ ವಿರುದ್ಧ ಬ್ರಿಟನ್‌ನಲ್ಲಿರುವ ಎನ್‌ಆರ್‌ಐಗಳಿಂದ ದೊಡ್ಡ ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಗುತ್ತಿರುವುದನ್ನು ವಿರೋಧಿಸಿ ಭಾರಿ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಭಾರತೀಯ ಧ್ವಜಗಳನ್ನು ಬೀಸುತ್ತಿರುವುದು ಕಂಡುಬಂದಿದೆ.

ಹೇಳಿಕೆಗಳನ್ನು ಬಿಡುಗಡೆ ಮಾಡುವ ಬದಲು ಸರ್ಕಾರ ಮತ್ತು ಮೇಯರ್ ಕ್ರಮವನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ. ಮತ್ತೊಬ್ಬ ಪ್ರತಿಭಟನಾಕಾರರು ‘ಅವಮಾನಕರ’ ಕೃತ್ಯದ ಬಗ್ಗೆ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದು ಧ್ವಜ ಕೆಳಗಿಳಿಸಿದರ ವಿರುದ್ಧ ಸಮುದಾಯವು ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದ್ದಾರೆ.

ಬ್ರಿಟಿಷ್ ಪೊಲೀಸ್ ಅಧಿಕಾರಿಯೊಬ್ಬರು ‘ಸ್ಲಮ್‌ಡಾಗ್ ಮಿಲಿಯನೇರ್’ ಚಿತ್ರದ ‘ಜೈ ಹೋ’ ಹಾಡಿಗೆ ವಲಸೆಗಾರರ ಜೊತೆ ಹೆಜ್ಜೆಹಾಕಿದ್ದು ಕಂಡುಬಂದಿದೆ.

ಖಲಿಸ್ತಾನಿ ಚಳವಳಿಯನ್ನು ಖಂಡಿಸಿದ ಪ್ರತಿಭಟನಾಕಾರರ ವಿಡಿಯೊಗಳನ್ನು ಪಿಟಿಐ ಸುದ್ದಿ ಸಂಸ್ಥೆ ಹಂಚಿಕೊಂಡಿದೆ. ಇದು ಎಂದಿಗೂ ಗೆಲ್ಲುವುದಿಲ್ಲ ಏಕೆಂದರೆ ಇದು ಭಯೋತ್ಪಾದನೆಯನ್ನು ಆಧರಿಸಿದ ಆಂದೋಲನವಾಗಿದೆ” ಎಂದು ಫ್ರೆಂಡ್ಸ್ ಆಫ್ ಇಂಡಿಯಾ ಸೊಸೈಟಿ ಇಂಟರ್ನ್ಯಾಷನಲ್ (FISI) ನ ಜಯು ಶಾ ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲಿಷ್ ಪರೀಕ್ಷಾ ಹಗರಣ: ವೀಸಾ ಹಿಂಪಡೆದುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುಕೆ ಪ್ರಧಾನಿ ರಿಷಿ ಸುನಕ್‌ಗೆ ಭಾರತೀಯ ವಿದ್ಯಾರ್ಥಿಗಳ ಮನವಿ

ಸಿಖ್ಖರಿಗಾಗಿ ಉದ್ದೇಶಿತ ಸ್ವತಂತ್ರ ರಾಷ್ಟ್ರವಾದ ಖಲಿಸ್ತಾನದ ರಚನೆಗಾಗಿ ಹೋರಾಡುತ್ತಿರುವ ತೀವ್ರಗಾಮಿ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಕಾರ್ಯಾಚರಣೆ ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿದೆ. ಸೋಮವಾರ, ಸಿಖ್ ಸಮುದಾಯದ ಸದಸ್ಯರು ದೆಹಲಿಯ ಯುಕೆ ಮಿಷನ್ ಹೊರಗೆ ಪ್ರತಿಭಟನೆ ನಡೆಸುವ ಮೂಲಕ ಭಾರತದೊಂದಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ನವದೆಹಲಿಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿಭಟನೆಯನ್ನು ಸಲ್ಲಿಸಲು ಅತ್ಯಂತ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿದೆ.

ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಮಂಗಳವಾರ ಟ್ವೀಟ್‌ನಲ್ಲಿ ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲಿನ ದಾಳಿಯನ್ನು ‘ಅವಮಾನಕರ’ ಎಂದು ಟೀಕಿಸಿದ್ದಾರೆ.ಭಾರತದ ಹೈಕಮಿಷನ್‌ನ ಜನರು ಮತ್ತು ಆವರಣದ ವಿರುದ್ಧ ಇಂದು ಅವಮಾನಕರ ಕೃತ್ಯಗಳನ್ನು ನಾನು ಖಂಡಿಸುತ್ತೇನೆ. ಇದು ಒಪ್ಪುವಂಥದ್ದಲ್ಲ ಎಂದಿದ್ದಾರೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?