AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಹೆಚ್ಚಂತೆ!

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಅತಿ ಹೆಚ್ಚು ಅಂತ ವಿಶ್ವಸಂಸ್ಥೆ ವರದಿ ಹೇಳಿದೆ. ಸುಮಾರು 1.75 ಕೋಟಿ ಭಾರತೀಯರು ಪ್ರಪಂಚದ ನಾನಾ ದೇಶಗಳಲ್ಲಿ ಹಂಚಿ ಹೋಗಿದ್ದಾರೆ ಎಂದಿದೆ. ಒಟ್ಟಾರೆ ಜಗತ್ತಿನ ಸುಮಾರು 27 ಕೋಟಿ ಮಂದಿ ತಮ್ಮ ದೇಶವನ್ನ ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ ಅಂತ ವಿಶ್ವಸಂಸ್ಥೆ ಹೇಳಿದೆ. ಹವಾಮಾನ ಬದಲಾವಣೆಯ ಆತಂಕ: ಹವಾಮಾನ ಬದಲಾವಣೆ ಹಾಗೂ ಅದರ ಪರಿಣಾಮಗಳ ಕುರಿತು ವರದಿಯೊಂದು ಬಿಡುಗಡೆಯಾಗಿದ್ದು, ಕ್ಲೈಮೆಟ್ ಚೆಂಜ್​ನಿಂದ ಆಗ್ತ್ತಿರುವ ಸಮಸ್ಯೆಗಳ ಚಿತ್ರಣವನ್ನ ಹೊರಗೆಡವಲಾಗಿದೆ. ಪ್ರಪಂಚದ ಕೆಲವೆಡೆ ಅತಿವೃಷ್ಟಿ […]

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಹೆಚ್ಚಂತೆ!
ಸಾಧು ಶ್ರೀನಾಥ್​
|

Updated on:Nov 29, 2019 | 10:44 AM

Share

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಅತಿ ಹೆಚ್ಚು ಅಂತ ವಿಶ್ವಸಂಸ್ಥೆ ವರದಿ ಹೇಳಿದೆ. ಸುಮಾರು 1.75 ಕೋಟಿ ಭಾರತೀಯರು ಪ್ರಪಂಚದ ನಾನಾ ದೇಶಗಳಲ್ಲಿ ಹಂಚಿ ಹೋಗಿದ್ದಾರೆ ಎಂದಿದೆ. ಒಟ್ಟಾರೆ ಜಗತ್ತಿನ ಸುಮಾರು 27 ಕೋಟಿ ಮಂದಿ ತಮ್ಮ ದೇಶವನ್ನ ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ ಅಂತ ವಿಶ್ವಸಂಸ್ಥೆ ಹೇಳಿದೆ.

ಹವಾಮಾನ ಬದಲಾವಣೆಯ ಆತಂಕ: ಹವಾಮಾನ ಬದಲಾವಣೆ ಹಾಗೂ ಅದರ ಪರಿಣಾಮಗಳ ಕುರಿತು ವರದಿಯೊಂದು ಬಿಡುಗಡೆಯಾಗಿದ್ದು, ಕ್ಲೈಮೆಟ್ ಚೆಂಜ್​ನಿಂದ ಆಗ್ತ್ತಿರುವ ಸಮಸ್ಯೆಗಳ ಚಿತ್ರಣವನ್ನ ಹೊರಗೆಡವಲಾಗಿದೆ. ಪ್ರಪಂಚದ ಕೆಲವೆಡೆ ಅತಿವೃಷ್ಟಿ ಉಂಟಾಗುತ್ತಿದ್ರೆ ಮತ್ತೆ ಕೆಲವು ಪ್ರದೇಶಗಳಲ್ಲಿ ತೀವ್ರ ಬರ ಎದುರಾಗಿದೆ. ದೃವ ಪ್ರದೇಶದ ಮಂಜು ಕರಗುತ್ತಿರುವುದೂ ಉಲ್ಲೇಖವಾಗಿದೆ.

ಅತಿವೃಷ್ಟಿಗೆ ತತ್ತರಿಸಿದ ಕ್ಯಾಲಿಫೋರ್ನಿಯಾ: ಕಂಡು ಕೇಳರಿಯದ ಕಾಡ್ಗಿಚ್ಚಿಗೆ ಸಿಲುಕಿದ್ದ ಅಮೆರಿಕದ ಕ್ಯಾಲಿಫೋರ್ನಿಯಾ, ಈಗ ಅತಿವೃಷ್ಟಿಗೆ ತುತ್ತಾಗಿದೆ. ಬಿರುಗಾಳಿ ಹೊಡೆತಕ್ಕೆ ಕ್ಯಾಲಿಫೋರ್ನಿಯಾದ ಕೆಲವೆಡೆ ವಿಪರೀತ ಮಂಜು ಬೀಳುತ್ತಿದ್ದರೆ ಮತ್ತು ಕೆಲವು ಕಡೆ ಭಾರಿ ಪ್ರಮಾಣದ ಮಳೆಯಾಗಿದೆ. ಮತ್ತೊಂದ್ಕಡೆ ಇಷ್ಟುದಿನ ಮುಚ್ಚಿದ್ದ ಹೈವೇಯನ್ನ ತಾತ್ಕಾಲಿಕವಾಗಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ.

ಭೀಕರ ಬರಕ್ಕೆ ಪ್ರಾಣಿಗಳು ಬಲಿ: ಜಿಂಬಾಬ್ವೆ ಇತಿಹಾಸದಲ್ಲೇ ಅತಿ ಕರಾಳ ಪರಿಸ್ಥಿತಿಯನ್ನ ಎದರಿಸುತ್ತಿದೆ. ಭೀಕರ ಕ್ಷಾಮಕ್ಕೆ ತುತ್ತಾದ ಜಿಂಬಾಬ್ವೆಯಲ್ಲೀಗ ಅರಣ್ಯ ಸಂಪೂರ್ಣ ಒಣಗಿ ಹೋಗಿದೆ. ಇನ್ನು ನೀರಿನ ಮೂಲವೇ ಇಲ್ಲದೆ ಆನೆ, ಕಾಡುಕೋಣ ಸೇರಿದಂತೆ ಹಲವಾರು ಪ್ರಾಣಿಗಳು ಪ್ರಾಣಬಿಟ್ಟಿವೆ. ಪರಿಹಾರ ಕಾರ್ಯಕ್ಕೂ ಹಣವಿಲ್ಲದೆ ಜಿಂಬಾಬ್ವೆ ಸರ್ಕಾರ ಪರದಾಡುತ್ತಿದೆ.

Published On - 7:55 am, Fri, 29 November 19

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್