AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರಿಗೆ ಕೂಡಲೇ ಭಾರತಕ್ಕೆ ವಾಪಸ್​ ಹೋಗುವಂತೆ ಸೂಚನೆ; ವಿಶೇಷ ವಿಮಾನ ವ್ಯವಸ್ಥೆ

ಈಗಾಗಲೇ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಜೂ.29 ಮತ್ತು ಜು.24ರಂದು ಎರಡು ಭದ್ರತಾ ಸಲಹೆ ನೀಡಿದೆ. ಅವರೆಡೂ ಮಾನ್ಯವಾಗಿರುತ್ತವೆ ಎಂದು ಈಗ ಹೊರಡಿಸಿರುವ ಮೂರನೇ ಸೆಕ್ಯೂರಿಟಿ ಅಡ್ವೈಸರಿಯಲ್ಲಿ ಉಲ್ಲೇಖಿಸಿದೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರಿಗೆ ಕೂಡಲೇ ಭಾರತಕ್ಕೆ ವಾಪಸ್​ ಹೋಗುವಂತೆ ಸೂಚನೆ; ವಿಶೇಷ ವಿಮಾನ ವ್ಯವಸ್ಥೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 10, 2021 | 6:55 PM

Share

ದೆಹಲಿ: ಅಪ್ಘಾನಿಸ್ತಾನ ಅಪಾಯದಲ್ಲಿದೆಯಾ? ಇತ್ತೀಚೆಗೆ ಅಲ್ಲಿ ನಡೆಯುತ್ತಿರುವ ಗುಂಡು, ಬಾಂಬ್​ ದಾಳಿಗಳು, ಹತ್ಯೆಗಳನ್ನು ನೋಡಿದರೆ ಇದೇ ಭಾವನೆ ಬರುತ್ತದೆ. ಈಗ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭದ್ರತಾ ಸಲಹೆ (Security advisoryಯೊಂದನ್ನು ನೀಡಿದೆ. ಅಫ್ಘಾನಿಸ್ತಾನ (Afghanistan)ದಲ್ಲಿ ಉದ್ಯೋಗ ಮಾಡುತ್ತಿರುವ ಭಾರತೀಯರು ಆದಷ್ಟು ಶೀಘ್ರವೇ ಭಾರತಕ್ಕೆ ವಾಪಸ್ ತೆರಳುವಂತೆ ಹೇಳಿದೆ. ಭಾರತದ ಕಂಪನಿಗಳಿಗೆ ಈ ಭದ್ರತಾ ಅಡ್ವೈಸರಿಯನ್ನು ಕಳಿಸಿದ್ದು, ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ನಿಮ್ಮ ಕಂಪನಿಗಳ ಉದ್ಯೋಗಿಗಳನ್ನು ವಾಪಸ್ ಕರೆಸಿಕೊಳ್ಳಲು ಕೂಡಲೇ ವ್ಯವಸ್ಥೆ ಮಾಡಿ ಎಂದು ತಿಳಿಸಿದೆ.

ಈಗಾಗಲೇ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಜೂ.29 ಮತ್ತು ಜು.24ರಂದು ಎರಡು ಭದ್ರತಾ ಸಲಹೆ ನೀಡಿದೆ. ಅವರೆಡೂ ಮಾನ್ಯವಾಗಿರುತ್ತವೆ ಎಂದು ಈಗ ಹೊರಡಿಸಿರುವ ಮೂರನೇ ಸೆಕ್ಯೂರಿಟಿ ಅಡ್ವೈಸರಿಯಲ್ಲಿ ಉಲ್ಲೇಖಿಸಿದೆ. ಆದಷ್ಟು ಬೇಗ ಭಾರತೀಯರು ತಮ್ಮ ದೇಶ ಸೇರಿಕೊಳ್ಳಬೇಕು ಎಂದಿದೆ. ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಪ್ರಾಂತ್ಯಗಳು, ನಗರಗಳಿಂದ ವಿಮಾನ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಯಾವುದೇ ಕಾರಣಕ್ಕೆ ಅಪ್ಘಾನಿಸ್ತಾನಕ್ಕೆ ಬಂದಿರುವ ಭಾರತೀಯರು ವಾಪಸ್​ ಹೊರಟುಬಿಡಿ ಎಂದು ಹೇಳಿದೆ.

ಹಾಗೇ, ಇಂದು ಮುಂಜಾನೆ ಮಜರ್​ ಇ ಶರೀಫ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಜನರಲ್ ಕೂಡ ಇದನ್ನೇ ಮನವಿ ಮಾಡಿದ್ದರು. ಭಾರತಕ್ಕೆ ತೆರಳಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಆದಷ್ಟು ಶೀಘ್ರವೇ ಹೊರಟು ಬಿಡಿ ಎಂದಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಹೋರಾಟಗಾರರ ಚಟುವಟಿಕೆ ಮಿತಿಮೀರುತ್ತಿದೆ. ಹೀಗಾಗಿ ಭಾರತೀಯ ಪ್ರಜೆಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ತೆರಳಲೇಬೇಕು ಎಂದು ಧೂತಾವಾಸ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಅಪರಾಧ ಹಿನ್ನೆಲೆಯ ಮಾಹಿತಿ ಪ್ರಕಟಿಸದ 8 ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಿದ ಸುಪ್ರೀಂಕೋರ್ಟ್​

Published On - 6:54 pm, Tue, 10 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು