AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರಿಗೆ ಕೂಡಲೇ ಭಾರತಕ್ಕೆ ವಾಪಸ್​ ಹೋಗುವಂತೆ ಸೂಚನೆ; ವಿಶೇಷ ವಿಮಾನ ವ್ಯವಸ್ಥೆ

ಈಗಾಗಲೇ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಜೂ.29 ಮತ್ತು ಜು.24ರಂದು ಎರಡು ಭದ್ರತಾ ಸಲಹೆ ನೀಡಿದೆ. ಅವರೆಡೂ ಮಾನ್ಯವಾಗಿರುತ್ತವೆ ಎಂದು ಈಗ ಹೊರಡಿಸಿರುವ ಮೂರನೇ ಸೆಕ್ಯೂರಿಟಿ ಅಡ್ವೈಸರಿಯಲ್ಲಿ ಉಲ್ಲೇಖಿಸಿದೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರಿಗೆ ಕೂಡಲೇ ಭಾರತಕ್ಕೆ ವಾಪಸ್​ ಹೋಗುವಂತೆ ಸೂಚನೆ; ವಿಶೇಷ ವಿಮಾನ ವ್ಯವಸ್ಥೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Aug 10, 2021 | 6:55 PM

Share

ದೆಹಲಿ: ಅಪ್ಘಾನಿಸ್ತಾನ ಅಪಾಯದಲ್ಲಿದೆಯಾ? ಇತ್ತೀಚೆಗೆ ಅಲ್ಲಿ ನಡೆಯುತ್ತಿರುವ ಗುಂಡು, ಬಾಂಬ್​ ದಾಳಿಗಳು, ಹತ್ಯೆಗಳನ್ನು ನೋಡಿದರೆ ಇದೇ ಭಾವನೆ ಬರುತ್ತದೆ. ಈಗ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭದ್ರತಾ ಸಲಹೆ (Security advisoryಯೊಂದನ್ನು ನೀಡಿದೆ. ಅಫ್ಘಾನಿಸ್ತಾನ (Afghanistan)ದಲ್ಲಿ ಉದ್ಯೋಗ ಮಾಡುತ್ತಿರುವ ಭಾರತೀಯರು ಆದಷ್ಟು ಶೀಘ್ರವೇ ಭಾರತಕ್ಕೆ ವಾಪಸ್ ತೆರಳುವಂತೆ ಹೇಳಿದೆ. ಭಾರತದ ಕಂಪನಿಗಳಿಗೆ ಈ ಭದ್ರತಾ ಅಡ್ವೈಸರಿಯನ್ನು ಕಳಿಸಿದ್ದು, ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ನಿಮ್ಮ ಕಂಪನಿಗಳ ಉದ್ಯೋಗಿಗಳನ್ನು ವಾಪಸ್ ಕರೆಸಿಕೊಳ್ಳಲು ಕೂಡಲೇ ವ್ಯವಸ್ಥೆ ಮಾಡಿ ಎಂದು ತಿಳಿಸಿದೆ.

ಈಗಾಗಲೇ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಜೂ.29 ಮತ್ತು ಜು.24ರಂದು ಎರಡು ಭದ್ರತಾ ಸಲಹೆ ನೀಡಿದೆ. ಅವರೆಡೂ ಮಾನ್ಯವಾಗಿರುತ್ತವೆ ಎಂದು ಈಗ ಹೊರಡಿಸಿರುವ ಮೂರನೇ ಸೆಕ್ಯೂರಿಟಿ ಅಡ್ವೈಸರಿಯಲ್ಲಿ ಉಲ್ಲೇಖಿಸಿದೆ. ಆದಷ್ಟು ಬೇಗ ಭಾರತೀಯರು ತಮ್ಮ ದೇಶ ಸೇರಿಕೊಳ್ಳಬೇಕು ಎಂದಿದೆ. ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಪ್ರಾಂತ್ಯಗಳು, ನಗರಗಳಿಂದ ವಿಮಾನ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಯಾವುದೇ ಕಾರಣಕ್ಕೆ ಅಪ್ಘಾನಿಸ್ತಾನಕ್ಕೆ ಬಂದಿರುವ ಭಾರತೀಯರು ವಾಪಸ್​ ಹೊರಟುಬಿಡಿ ಎಂದು ಹೇಳಿದೆ.

ಹಾಗೇ, ಇಂದು ಮುಂಜಾನೆ ಮಜರ್​ ಇ ಶರೀಫ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಜನರಲ್ ಕೂಡ ಇದನ್ನೇ ಮನವಿ ಮಾಡಿದ್ದರು. ಭಾರತಕ್ಕೆ ತೆರಳಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಆದಷ್ಟು ಶೀಘ್ರವೇ ಹೊರಟು ಬಿಡಿ ಎಂದಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಹೋರಾಟಗಾರರ ಚಟುವಟಿಕೆ ಮಿತಿಮೀರುತ್ತಿದೆ. ಹೀಗಾಗಿ ಭಾರತೀಯ ಪ್ರಜೆಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ತೆರಳಲೇಬೇಕು ಎಂದು ಧೂತಾವಾಸ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಅಪರಾಧ ಹಿನ್ನೆಲೆಯ ಮಾಹಿತಿ ಪ್ರಕಟಿಸದ 8 ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಿದ ಸುಪ್ರೀಂಕೋರ್ಟ್​

Published On - 6:54 pm, Tue, 10 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು