AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರಿಗೆ ಕೂಡಲೇ ಭಾರತಕ್ಕೆ ವಾಪಸ್​ ಹೋಗುವಂತೆ ಸೂಚನೆ; ವಿಶೇಷ ವಿಮಾನ ವ್ಯವಸ್ಥೆ

ಈಗಾಗಲೇ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಜೂ.29 ಮತ್ತು ಜು.24ರಂದು ಎರಡು ಭದ್ರತಾ ಸಲಹೆ ನೀಡಿದೆ. ಅವರೆಡೂ ಮಾನ್ಯವಾಗಿರುತ್ತವೆ ಎಂದು ಈಗ ಹೊರಡಿಸಿರುವ ಮೂರನೇ ಸೆಕ್ಯೂರಿಟಿ ಅಡ್ವೈಸರಿಯಲ್ಲಿ ಉಲ್ಲೇಖಿಸಿದೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರಿಗೆ ಕೂಡಲೇ ಭಾರತಕ್ಕೆ ವಾಪಸ್​ ಹೋಗುವಂತೆ ಸೂಚನೆ; ವಿಶೇಷ ವಿಮಾನ ವ್ಯವಸ್ಥೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 10, 2021 | 6:55 PM

Share

ದೆಹಲಿ: ಅಪ್ಘಾನಿಸ್ತಾನ ಅಪಾಯದಲ್ಲಿದೆಯಾ? ಇತ್ತೀಚೆಗೆ ಅಲ್ಲಿ ನಡೆಯುತ್ತಿರುವ ಗುಂಡು, ಬಾಂಬ್​ ದಾಳಿಗಳು, ಹತ್ಯೆಗಳನ್ನು ನೋಡಿದರೆ ಇದೇ ಭಾವನೆ ಬರುತ್ತದೆ. ಈಗ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭದ್ರತಾ ಸಲಹೆ (Security advisoryಯೊಂದನ್ನು ನೀಡಿದೆ. ಅಫ್ಘಾನಿಸ್ತಾನ (Afghanistan)ದಲ್ಲಿ ಉದ್ಯೋಗ ಮಾಡುತ್ತಿರುವ ಭಾರತೀಯರು ಆದಷ್ಟು ಶೀಘ್ರವೇ ಭಾರತಕ್ಕೆ ವಾಪಸ್ ತೆರಳುವಂತೆ ಹೇಳಿದೆ. ಭಾರತದ ಕಂಪನಿಗಳಿಗೆ ಈ ಭದ್ರತಾ ಅಡ್ವೈಸರಿಯನ್ನು ಕಳಿಸಿದ್ದು, ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ನಿಮ್ಮ ಕಂಪನಿಗಳ ಉದ್ಯೋಗಿಗಳನ್ನು ವಾಪಸ್ ಕರೆಸಿಕೊಳ್ಳಲು ಕೂಡಲೇ ವ್ಯವಸ್ಥೆ ಮಾಡಿ ಎಂದು ತಿಳಿಸಿದೆ.

ಈಗಾಗಲೇ ಅಪ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಜೂ.29 ಮತ್ತು ಜು.24ರಂದು ಎರಡು ಭದ್ರತಾ ಸಲಹೆ ನೀಡಿದೆ. ಅವರೆಡೂ ಮಾನ್ಯವಾಗಿರುತ್ತವೆ ಎಂದು ಈಗ ಹೊರಡಿಸಿರುವ ಮೂರನೇ ಸೆಕ್ಯೂರಿಟಿ ಅಡ್ವೈಸರಿಯಲ್ಲಿ ಉಲ್ಲೇಖಿಸಿದೆ. ಆದಷ್ಟು ಬೇಗ ಭಾರತೀಯರು ತಮ್ಮ ದೇಶ ಸೇರಿಕೊಳ್ಳಬೇಕು ಎಂದಿದೆ. ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಪ್ರಾಂತ್ಯಗಳು, ನಗರಗಳಿಂದ ವಿಮಾನ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಯಾವುದೇ ಕಾರಣಕ್ಕೆ ಅಪ್ಘಾನಿಸ್ತಾನಕ್ಕೆ ಬಂದಿರುವ ಭಾರತೀಯರು ವಾಪಸ್​ ಹೊರಟುಬಿಡಿ ಎಂದು ಹೇಳಿದೆ.

ಹಾಗೇ, ಇಂದು ಮುಂಜಾನೆ ಮಜರ್​ ಇ ಶರೀಫ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಜನರಲ್ ಕೂಡ ಇದನ್ನೇ ಮನವಿ ಮಾಡಿದ್ದರು. ಭಾರತಕ್ಕೆ ತೆರಳಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಆದಷ್ಟು ಶೀಘ್ರವೇ ಹೊರಟು ಬಿಡಿ ಎಂದಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಹೋರಾಟಗಾರರ ಚಟುವಟಿಕೆ ಮಿತಿಮೀರುತ್ತಿದೆ. ಹೀಗಾಗಿ ಭಾರತೀಯ ಪ್ರಜೆಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ತೆರಳಲೇಬೇಕು ಎಂದು ಧೂತಾವಾಸ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಅಪರಾಧ ಹಿನ್ನೆಲೆಯ ಮಾಹಿತಿ ಪ್ರಕಟಿಸದ 8 ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಿದ ಸುಪ್ರೀಂಕೋರ್ಟ್​

Published On - 6:54 pm, Tue, 10 August 21

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ