AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Crows: ಕೀನ್ಯಾದಲ್ಲಿ ಕಾಗೆ ಕಾಟ ವಿಪರೀತ; ಕರಟಕ ದಮನಕ್ಕೆ ನಿರ್ಧಾರ ಕೈಗೊಂಡ ಸರ್ಕಾರ, ಏನಿದು ವಿಷಯ?

ಭಾರತದ ಕಾಗೆಗಳು ಮಹಾ ಉಪದ್ರವಿಗಳು ಎಂದು ಕೀನ್ಯಾ ಸರ್ಕಾರ ಹೇಳಿದ್ದು ಈ ವರ್ಷದೊಳಗೆ ಸುಮಾರು 10 ಲಕ್ಷ ಕಾಗೆಗಳನ್ನು ಕೊಲ್ಲಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಇಲ್ಲಿನ ಕಾಗೆಗಳು ಕೋಳಿ ಸಾಕಣೆಗಾರರಿಗೆ, ಕೃಷಿ ಮತ್ತು ಹೋಟೆಲ್ ಉದ್ಯಮಿಗಳಿಗೆ ಸಮಸ್ಯೆ ಸೃಷ್ಟಿಸುವ ಪಕ್ಷಿಗಳು. ಕಾಗೆಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಇಲ್ಲಿನ ಸ್ಥಳೀಯ ಪ್ರಭೇದದ ಹಕ್ಕಿಗಳು ಅಳಿವಿನಂಚಿನಲ್ಲಿವೆ. ಕೀನ್ಯಾದಲ್ಲಿ ಭಾರತದ ಕಾಗೆಗಳು ಹೆಚ್ಚಳವಾಗಿದ್ದು ಹೇಗೆ? ಇವುಗಳ ನಿರ್ನಾಮಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು? ಇಲ್ಲಿದೆ ಮಾಹಿತಿ

Indian Crows: ಕೀನ್ಯಾದಲ್ಲಿ ಕಾಗೆ ಕಾಟ ವಿಪರೀತ; ಕರಟಕ ದಮನಕ್ಕೆ ನಿರ್ಧಾರ ಕೈಗೊಂಡ ಸರ್ಕಾರ, ಏನಿದು ವಿಷಯ?
ಕಾಗೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 25, 2024 | 1:13 PM

Share

ಕಾಗೆಗಳು ತೊಂದರೆ ಉಂಟುಮಾಡುವವುಗಳಲ್ಲ, ಅವುಗಳು ಪರಿಸರವನ್ನು ಸ್ವಚ್ಛಗೊಳಿಸುವ ಪಕ್ಷಿಗಳು. ಕಾಗೆಗಳಲ್ಲಿ ಹಲವು ವಿಧದ ಕಾಗೆಗಳಿದ್ದರೂ ಭಾರತದ ಕಾಗೆ ಅಥವಾ ನಾಡ ಕಾಗೆ (Indian House Crow) ನಮಗೆಲ್ಲರಿಗೂ ಗೊತ್ತು. ಕಪ್ಪು ರೆಕ್ಕ ಪುಕ್ಕ, ಕುತ್ತಿಗೆಯಲ್ಲಿ ಬೂದುಬಣ್ಣದ ಚಿಕ್ಕ ಗರಿಗಳನ್ನು ಹೊಂದಿರುವ ಕಾಗೆಯೇ ಭಾರತ ಕಾಗೆ (Indian Crow). ಆದಾಗ್ಯೂ, ಪೂರ್ವ ಆಫ್ರಿಕಾದ ಕೀನ್ಯಾದ (Kenya) ಸರ್ಕಾರವು ಭಾರತದ ಈ ಕಾಗೆಗಳು ಪರಿಸರ ವ್ಯವಸ್ಥೆಯನ್ನು ನಾಶಪಡಿಸುವ ಪಕ್ಷಿಗಳು ಎಂದು ಹೇಳುತ್ತದೆ. ಅಷ್ಟೇ ಅಲ್ಲ 2024 ರ ಅಂತ್ಯದ ವೇಳೆಗೆ ದೇಶದಲ್ಲಿ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ಸರ್ಕಾರ ಸಿದ್ಧತೆ ನಡೆಸಿದೆ. ಭಾರತದ ಕಾಗೆಗಳು ಆಕ್ರಮಣಕಾರಿಯಾಗಿದ್ದು ತಮ್ಮ ದೇಶದಲ್ಲಿ ಸ್ಥಳೀಯ ಪ್ರಾಣಿಗಳಿಗೆ ತೀವ್ರವಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬುದು ಕೀನ್ಯಾ ಇದಕ್ಕೆ ಕೊಟ್ಟ ಕಾರಣ. ಅಷ್ಟಕ್ಕೂ ಭಾರತೀಯ ಕಾಗೆಗಳು ಕೀನ್ಯಾದಲ್ಲಿ ಇಷ್ಟೊಂದು ಉಪದ್ರವಿಗಳಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ ಭಾರತೀಯ ಕಾಗೆಗಳು ಕೀನ್ಯಾದಲ್ಲಿ ವನ್ಯಜೀವಿಗಳಿಗೆ ಸಾಕಷ್ಟು ತೊಂದರೆ ನೀಡುತ್ತಿವೆ ಎಂದು ಕೀನ್ಯಾ ವನ್ಯಜೀವಿ ಸೇವೆ (ಕೆಡಬ್ಲ್ಯೂಎಸ್) ಅಧಿಕಾರಿಗಳು ಹೇಳಿದ್ದಾರೆ. ಈ ಕಾಗೆಗಳು ಪ್ರವಾಸಿಗರಿಗೆ ತೊಂದರೆ ನೀಡುವುದರ ಜತೆಗೆ ಇತರ ಸ್ಥಳೀಯ ಪಕ್ಷಿ ಪ್ರಭೇದಗಳಿಗೂ ಕಂಟಕವಾಗಿದೆ. ಇದು ಹೋಟೆಲ್ ಮಾಲೀಕರಿಗೆ ಮಾತ್ರವಲ್ಲ ರೈತರಿಗೂ ಸಮಸ್ಯೆಯನ್ನುಂಟು ಮಾಡಿದೆ ಎಂದು ಕೆಡಬ್ಲ್ಯೂಎಸ್ ಮಹಾನಿರ್ದೇಶಕರ ಪ್ರತಿನಿಧಿಯಾಗಿರುವ ವನ್ಯಜೀವಿ ಮತ್ತು ಸಮುದಾಯ ಸೇವೆಗಳ ನಿರ್ದೇಶಕ ಚಾರ್ಲ್ಸ್ ಮುಸ್ಯೋಕಿ ಹೇಳಿದ್ದಾರೆ. ಭಾರತೀಯ ಕಾಗೆಗಳು ಕೀನ್ಯಾದ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಕರಾವಳಿ ಪ್ರವಾಸೋದ್ಯಮ ಮತ್ತು ಕೃಷಿಗೆ ಇವು ಪ್ರಮುಖ ಸವಾಲುಗಳಾಗಿವೆ. ಇಲ್ಲಿನ ಜನರ ಮನವಿಯನ್ನು ಸರ್ಕಾರ ನಿರ್ಲಕ್ಷಿಸುವಂತಿಲ್ಲ ಎಂದು...

Published On - 5:23 pm, Tue, 16 July 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್