AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಪ್ರಧಾನಿ ಮೋದಿಯನ್ನು ನಿಂದಿಸಿ, ಭಾರತೀಯ ಪತ್ರಕರ್ತರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಹಲ್ಲೆ

ಪಂಜಾಬ್​ನಲ್ಲಿ ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ವಿರುದ್ಧ ಶೋಧ ಕಾರ್ಯಾಚರಣೆ ಶುರುವಾದ ವಿಶ್ವಾದ್ಯಂತ ವಾಸಿಸುವ ಖಲಿಸ್ತಾನಿ ಬೆಂಬಲಿಗರು ಭಯಭೀತರಾಗಿದ್ದಾರೆ.

ಅಮೆರಿಕದಲ್ಲಿ ಪ್ರಧಾನಿ ಮೋದಿಯನ್ನು ನಿಂದಿಸಿ, ಭಾರತೀಯ ಪತ್ರಕರ್ತರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಹಲ್ಲೆ
ಖಲಿಸ್ತಾನಿ ಬೆಂಬಲಿಗರು
ನಯನಾ ರಾಜೀವ್
|

Updated on: Mar 26, 2023 | 9:41 AM

Share

ಪಂಜಾಬ್​ನಲ್ಲಿ ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ವಿರುದ್ಧ ಶೋಧ ಕಾರ್ಯಾಚರಣೆ ಶುರುವಾದ ವಿಶ್ವಾದ್ಯಂತ ವಾಸಿಸುವ ಖಲಿಸ್ತಾನಿ ಬೆಂಬಲಿಗರು ಭಯಭೀತರಾಗಿದ್ದಾರೆ. ಅಮೆರಿಕದಲ್ಲಿರುವ ಭಾರತದ ದೂತಾವಾಸ ಹಾಗೂ ಬ್ರಿಟನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೂ ದಾಳಿ ನಡೆಸಿದ್ದಾರೆ. ಅಮೆರಿಕದಲ್ಲಿ ಭಾರತೀಯ ಪತ್ರಕರ್ತ ಲಲಿತ್ ಕೆ ಝಾ ಅವರು ಖಲಿಸ್ತಾನಿ ಬೆಂಬಲಗರ ರ್ಯಾಲಿ ವೇಳೆ ಪ್ರಶ್ನೆಗಳನ್ನು ಕೇಳಿದಾಗ ಪ್ರಧಾನಿ ಮೋದಿಯವರನ್ನು ನಿಂದಿಸಲು ಪ್ರಾರಂಭಿಸಿದ್ದರು. ನಂತರ ಮಾತಿನ ಚಕಮಕಿ ನಡೆಯಿತು, ಇ ವಿಡಿಯೋವನ್ನು ಪತ್ರಕರ್ತರೊಬ್ಬರು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಭಾರತೀಯ ರಾಯಭಾರಿ ಕಚೇರಿ ಎದುರು ಖಲಿಸ್ತಾನಿ ಬೆಂಬಲಿಗರು ರ್ಯಾಲಿ ನಡೆಸುತ್ತಿದ್ದರು, ಆ ವೇಳೆ ಪ್ರಶ್ನೆಗಳನ್ನು ಕೇಳಿದಾಗ ಅವರು ಕ್ಯಾಮರಾವನ್ನು ಆಫ್ ಮಾಡಿ ಎಂದು ಹೇಳತೊಡಗಿದರು. ಮಾರ್ಚ್​ 25 ರಂದು ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಖಲಿಸ್ತಾನಿ ಬೆಂಬಲಿಗರು ಪತ್ರಕರ್ತರ ಕಿವಿಗೆ ಕೋಲುಗಳಿಂದ ಹೊಡೆದಿದ್ದಾರೆ. ಇದಾದ ತಕ್ಷಣ ಪೊಲೀಸ್ ಸಹಾಯವಾಣಿಗೆ ಕರೆ ಮಾಡಲಾಗಿದ್ದು, ತಕ್ಷಣ ಪೊಲೀಸರು ಆಗಮಿಸಿ ಅವರನ್ನು ರಕ್ಷಿಸಿದ್ದಾರೆ.

ಇದಕ್ಕೆ ಕೆಲವು ದಿನಗಳ ಮೊದಲು, ಖಲಿಸ್ತಾನ್ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತದ ದೂತಾವಾಸವನ್ನು ಧ್ವಂಸಗೊಳಿಸಿದರು. ಮಾರ್ಚ್ 20 ರಂದು ಪ್ರತ್ಯೇಕತಾವಾದಿಗಳು ರಾಯಭಾರಿ ರಾಯಭಾರಿ ಕಚೇರಿಯೊಳಗೆ ಪ್ರವೇಶಿಸಿ ಅಲ್ಲಿದ್ದ ತಡೆಗೋಡೆ ಮುರಿದರು.

ಈ ಸಂದರ್ಭದಲ್ಲಿ, ಅವರು ರಾಯಭಾರಿ ಕಚೇರಿಯನ್ನು ಹಾಳುಮಾಡುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದರು ಮತ್ತು ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರನ್ನು ನಿಂದಿಸಿದರು. ಪ್ರತಿಭಟನಾಕಾರರಲ್ಲಿ ಎಲ್ಲಾ ವಯೋಮಾನದವರಿದ್ದರು ಎಂದು ಲಲಿತ್ ಝಾ ಎಎನ್‌ಐಗೆ ತಿಳಿಸಿದ್ದಾರೆ.

ಅವರು ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದರು. ಅವರು DC-ಮೇರಿಲ್ಯಾಂಡ್-ವರ್ಜೀನಿಯಾ (DMV) ಪ್ರದೇಶದ ವಿವಿಧ ಭಾಗಗಳಿಂದ ಬಂದವರಾಗಿದ್ದರು, ಹಿಂದಿ ಮತ್ತು ಇಂಗ್ಲಿಷ್ ಭಾಷೆ ಬಳಸಿ ಭಾಷಣ ಮಾಡುತ್ತಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ