AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಪ್ರಧಾನಿ ಮೋದಿಯನ್ನು ನಿಂದಿಸಿ, ಭಾರತೀಯ ಪತ್ರಕರ್ತರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಹಲ್ಲೆ

ಪಂಜಾಬ್​ನಲ್ಲಿ ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ವಿರುದ್ಧ ಶೋಧ ಕಾರ್ಯಾಚರಣೆ ಶುರುವಾದ ವಿಶ್ವಾದ್ಯಂತ ವಾಸಿಸುವ ಖಲಿಸ್ತಾನಿ ಬೆಂಬಲಿಗರು ಭಯಭೀತರಾಗಿದ್ದಾರೆ.

ಅಮೆರಿಕದಲ್ಲಿ ಪ್ರಧಾನಿ ಮೋದಿಯನ್ನು ನಿಂದಿಸಿ, ಭಾರತೀಯ ಪತ್ರಕರ್ತರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಹಲ್ಲೆ
ಖಲಿಸ್ತಾನಿ ಬೆಂಬಲಿಗರು
ನಯನಾ ರಾಜೀವ್
|

Updated on: Mar 26, 2023 | 9:41 AM

Share

ಪಂಜಾಬ್​ನಲ್ಲಿ ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ವಿರುದ್ಧ ಶೋಧ ಕಾರ್ಯಾಚರಣೆ ಶುರುವಾದ ವಿಶ್ವಾದ್ಯಂತ ವಾಸಿಸುವ ಖಲಿಸ್ತಾನಿ ಬೆಂಬಲಿಗರು ಭಯಭೀತರಾಗಿದ್ದಾರೆ. ಅಮೆರಿಕದಲ್ಲಿರುವ ಭಾರತದ ದೂತಾವಾಸ ಹಾಗೂ ಬ್ರಿಟನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೂ ದಾಳಿ ನಡೆಸಿದ್ದಾರೆ. ಅಮೆರಿಕದಲ್ಲಿ ಭಾರತೀಯ ಪತ್ರಕರ್ತ ಲಲಿತ್ ಕೆ ಝಾ ಅವರು ಖಲಿಸ್ತಾನಿ ಬೆಂಬಲಗರ ರ್ಯಾಲಿ ವೇಳೆ ಪ್ರಶ್ನೆಗಳನ್ನು ಕೇಳಿದಾಗ ಪ್ರಧಾನಿ ಮೋದಿಯವರನ್ನು ನಿಂದಿಸಲು ಪ್ರಾರಂಭಿಸಿದ್ದರು. ನಂತರ ಮಾತಿನ ಚಕಮಕಿ ನಡೆಯಿತು, ಇ ವಿಡಿಯೋವನ್ನು ಪತ್ರಕರ್ತರೊಬ್ಬರು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಭಾರತೀಯ ರಾಯಭಾರಿ ಕಚೇರಿ ಎದುರು ಖಲಿಸ್ತಾನಿ ಬೆಂಬಲಿಗರು ರ್ಯಾಲಿ ನಡೆಸುತ್ತಿದ್ದರು, ಆ ವೇಳೆ ಪ್ರಶ್ನೆಗಳನ್ನು ಕೇಳಿದಾಗ ಅವರು ಕ್ಯಾಮರಾವನ್ನು ಆಫ್ ಮಾಡಿ ಎಂದು ಹೇಳತೊಡಗಿದರು. ಮಾರ್ಚ್​ 25 ರಂದು ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಖಲಿಸ್ತಾನಿ ಬೆಂಬಲಿಗರು ಪತ್ರಕರ್ತರ ಕಿವಿಗೆ ಕೋಲುಗಳಿಂದ ಹೊಡೆದಿದ್ದಾರೆ. ಇದಾದ ತಕ್ಷಣ ಪೊಲೀಸ್ ಸಹಾಯವಾಣಿಗೆ ಕರೆ ಮಾಡಲಾಗಿದ್ದು, ತಕ್ಷಣ ಪೊಲೀಸರು ಆಗಮಿಸಿ ಅವರನ್ನು ರಕ್ಷಿಸಿದ್ದಾರೆ.

ಇದಕ್ಕೆ ಕೆಲವು ದಿನಗಳ ಮೊದಲು, ಖಲಿಸ್ತಾನ್ ಬೆಂಬಲಿಗರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತದ ದೂತಾವಾಸವನ್ನು ಧ್ವಂಸಗೊಳಿಸಿದರು. ಮಾರ್ಚ್ 20 ರಂದು ಪ್ರತ್ಯೇಕತಾವಾದಿಗಳು ರಾಯಭಾರಿ ರಾಯಭಾರಿ ಕಚೇರಿಯೊಳಗೆ ಪ್ರವೇಶಿಸಿ ಅಲ್ಲಿದ್ದ ತಡೆಗೋಡೆ ಮುರಿದರು.

ಈ ಸಂದರ್ಭದಲ್ಲಿ, ಅವರು ರಾಯಭಾರಿ ಕಚೇರಿಯನ್ನು ಹಾಳುಮಾಡುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದರು ಮತ್ತು ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರನ್ನು ನಿಂದಿಸಿದರು. ಪ್ರತಿಭಟನಾಕಾರರಲ್ಲಿ ಎಲ್ಲಾ ವಯೋಮಾನದವರಿದ್ದರು ಎಂದು ಲಲಿತ್ ಝಾ ಎಎನ್‌ಐಗೆ ತಿಳಿಸಿದ್ದಾರೆ.

ಅವರು ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದರು. ಅವರು DC-ಮೇರಿಲ್ಯಾಂಡ್-ವರ್ಜೀನಿಯಾ (DMV) ಪ್ರದೇಶದ ವಿವಿಧ ಭಾಗಗಳಿಂದ ಬಂದವರಾಗಿದ್ದರು, ಹಿಂದಿ ಮತ್ತು ಇಂಗ್ಲಿಷ್ ಭಾಷೆ ಬಳಸಿ ಭಾಷಣ ಮಾಡುತ್ತಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!