AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾಕ್‌ ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ಗಲ್ಫ್ ಯುದ್ಧಕ್ಕೆ ಮತ್ತೋರ್ವ ಭಾರತೀಯ ಬಲಿ

ಇರಾಕ್‌ನ ಕರಾವಳಿ ಬಳಿ ಇರಾನ್ ರಾತ್ರೋರಾತ್ರಿ ಎರಡು ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆಸಿದೆ. ಅದರಲ್ಲಿ ಒಂದು ಅಮೆರಿಕದ ಕಂಪನಿಯ ಒಡೆತನದ್ದು. ಈ ದಾಳಿಯಲ್ಲಿ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ. ಇದು ಸುಮಾರು 2 ವಾರಗಳಿಂದ ನಡೆಯುತ್ತಿರುವ ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದ ಈಗಾಗಲೇ ಉಂಟಾಗಿರುವ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಒಂದು ಲೀಟರ್ ತೈಲ ಕೂಡ ಹಾದುಹೋಗಲು ಅನುಮತಿ ನೀಡುವುದಿಲ್ಲ ಎಂದು ಎಚ್ಚರಿಸಿದ ನಂತರ ಇರಾನ್ ನೇರವಾಗಿ ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ಇರಾಕ್‌ ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ಗಲ್ಫ್ ಯುದ್ಧಕ್ಕೆ ಮತ್ತೋರ್ವ ಭಾರತೀಯ ಬಲಿ
Iran Oil Tanker Fire
ಸುಷ್ಮಾ ಚಕ್ರೆ
|

Updated on:Mar 12, 2026 | 10:47 AM

Share

ಟೆಹ್ರಾನ್, ಮಾರ್ಚ್ 12: ಇರಾಕ್‌ನ ಖೋರ್ ಅಲ್ ಜುಬೈರ್ ಬಂದರಿನ ಬಳಿ ಇರಾನ್​ನ ಹಡಗು ಅಮೆರಿಕದ ಒಡೆತನದ ಕಚ್ಚಾ ತೈಲ ಟ್ಯಾಂಕರ್ (Oil Tanker) ಸಫೀಯಾ ವಿಷ್ಣುವನ್ನು (Safesea Vishnu) ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದರ ಜೊತೆಗೆ ಮಾಲ್ಡೀವ್ಸ್​​ನ ಇನ್ನೊಂದು ಟ್ಯಾಂಕರ್ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧ ಮತ್ತೋರ್ವ ಭಾರತೀಯನನ್ನು ಬಲಿ ತೆಗೆದುಕೊಂಡಿದೆ. ಈ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಪ್ರಾಣ ಕಳೆದುಕೊಂಡಿದ್ದು, ಹಡಗಿನಲ್ಲಿದ್ದ ಉಳಿದ 27 ಸಿಬ್ಬಂದಿಯನ್ನು ರಕ್ಷಿಸಿ ಬಸ್ರಾಗೆ ಸ್ಥಳಾಂತರಿಸಲಾಗಿದೆ.

ಜಾಗತಿಕ ಕಡಲ ಕಾರ್ಯಪಡೆಯ ಶೇ. 15ಕ್ಕಿಂತ ಹೆಚ್ಚು ಜನರು ಭಾರತೀಯರು ಇರುವುದರಿಂದ, ಮುಂದಿನ ಯಾವುದೇ ದಾಳಿಯಲ್ಲಿ ಇನ್ನಷ್ಟು ಭಾರತೀಯ ಪ್ರಜೆಗಳು ಅಪಾಯಗಳಿವೆ ಎಂದು ಮೂಲಗಳು ಎಚ್ಚರಿಸಿವೆ.

ಇದನ್ನೂ ಓದಿ: ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು

ಮೂಲಗಳ ಪ್ರಕಾರ, ಸಫೆಸಿಯಾ ವಿಷ್ಣು 2007ರಲ್ಲಿ ನಿರ್ಮಿಸಲಾದ ಕಚ್ಚಾ ತೈಲ ಟ್ಯಾಂಕರ್ ಆಗಿದೆ. ಈ ಹಡಗು 228.6 ಮೀಟರ್ ಉದ್ದ, 32.57 ಮೀಟರ್ ಅಗಲವಿದ್ದು, ಮಾರ್ಷಲ್ ದ್ವೀಪಗಳ ಧ್ವಜದ ಅಡಿಯಲ್ಲಿ ಸಾಗುತ್ತದೆ. ಇದು 42,010 ಒಟ್ಟು ಟನ್ ಮತ್ತು 73,976 ಡೆಡ್‌ವೈಟ್ ಟನ್ ಹೊಂದಿದೆ.

ಮಾರ್ಚ್ 1 ಮತ್ತು 2ರಂದು ಇರಾನಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಒಮನ್ ಕರಾವಳಿಯಲ್ಲಿ MV MKD ವ್ಯೋಮ್ ಮತ್ತು MV ಸ್ಕೈಲೈಟ್ ಎಂಬ ವ್ಯಾಪಾರಿ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದವು. ಈ ದಾಳಿಗಳಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು, ಒಬ್ಬ ವ್ಯಕ್ತಿಯ ಸ್ಥಿತಿ ಇನ್ನೂ ಗಂಭೀರವಾಗಿದೆ.

ಇದನ್ನೂ ಓದಿ: ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್

ಯುನೈಟೆಡ್ ಅರಬ್ ಎಮಿರೇಟ್ಸ್, ಸೌದಿ ಅರೇಬಿಯಾ ಮತ್ತು ಕುವೈತ್ ಸೇರಿದಂತೆ ಗಲ್ಫ್ ದೇಶಗಳಲ್ಲಿ ಸುಮಾರು 9ರಿಂದ 10 ಮಿಲಿಯನ್ ಭಾರತೀಯರು ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ. ಇರಾನ್ ಯುಎಸ್ ನೆಲೆಗಳು ಮತ್ತು ತೈಲ ಸೌಲಭ್ಯಗಳನ್ನು ಹೊಂದಿರುವ ಗಲ್ಫ್ ಸಹಕಾರ ಮಂಡಳಿಯ ರಾಜ್ಯಗಳನ್ನು ಗುರಿಯಾಗಿಸಿಕೊಂಡು 1,000ಕ್ಕೂ ಹೆಚ್ಚು ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿರುವುದರಿಂದ ಅಲ್ಲಿನ ಭಾರತೀಯ ಸಮುದಾಯವು ಹೆಚ್ಚಿನ ಅಪಾಯವನ್ನು ಎದುರಿಸುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:40 am, Thu, 12 March 26

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ