AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ INS ಸುಮಿತ್ರ

ಸೊಮಾಲಿ ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಮೀನುಗಾರಿಕಾ ಹಡಗು ಇಮಾನ್​​​ನ್ನು ಇಂದು ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ಸುರಕ್ಷಿತವಾಗಿ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳ ಹೇಳಿದ್ದಾರೆ. ಅಧಿಕಾರಿಗಳು ನೀಡಿದ ಹೇಳಿಕೆ ಪ್ರಕಾರ, ಇರಾನ್ ಮೀನುಗಾರಿಕಾ ಹಡಗು ಎಂವಿ ಇಮಾನ್​​​ನ್ನು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದರು.

ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ INS ಸುಮಿತ್ರ
Indian Navy INS Sumitra
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 29, 2024 | 3:33 PM

ಅರಬ್ಬೀ ಸಮುದ್ರದಲ್ಲಿ ಸೊಮಾಲಿ ( Somali) ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಮೀನುಗಾರಿಕಾ ಹಡಗು ಇಮಾನ್​​​ನ್ನು ಇಂದು (ಜ.29) ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ (INS Sumitra) ಸುರಕ್ಷಿತವಾಗಿ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳ ಹೇಳಿದ್ದಾರೆ. ಅಧಿಕಾರಿಗಳು ನೀಡಿದ ಹೇಳಿಕೆ ಪ್ರಕಾರ, ಇರಾನ್ ಮೀನುಗಾರಿಕಾ ಹಡಗು ಎಂವಿ ಇಮಾನ್​​​ನ್ನು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದರು. ಈ ಹಡಗಿನಲ್ಲಿ 17 ಜನ ಭಾರತೀಯ ಮೀನುಗಾರರಿದ್ದರು ಎಂದು ಹೇಳಲಾಗಿದೆ.

ಇದೀಗ ಈ ಪ್ರದೇಶದಲ್ಲಿ ಭಾರತೀಯ ನೌಕಪಡೆಗಳು ಭದ್ರತೆಯನ್ನು ಹೆಚ್ಚಿಸಿದ್ದು, ಭಾರತಕ್ಕೆ ಹೋಗುವ ವ್ಯಾಪಾರಿ ಹಡಗುಗಳ ಮೇಲೆ  ಹೆಚ್ಚಿನ ಕಾಳಜಿಯನ್ನು ವಹಿಸಲಾಗಿದೆ ಎಂದು ಹೇಳಿದೆ. ಅಪಾಯ ಇರುವ ಅಥವಾ ದಾಳಿ ನಡೆಸುವ ಪ್ರದೇಶಗಳಲ್ಲಿ 10 ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂತಹ ದಾಳಿಗಳು ನಡೆಯುವುದು ಕಡಿಮೆಯಾಗಿತ್ತು. ಆದರೆ ಇಸ್ರೇಲ್​​-ಹಮಾಸ್​​​ ಯುದ್ಧದ ನಂತರ ಇಂತಹ ದಾಳಿಗಳು ಹೆಚ್ಚಾಗಿದೆ ಎಂದು ಹೇಳಲಾಗಿದೆ. ಇರಾನ್ ಬೆಂಬಲಿತ ಯೆಮೆನ್‌ನ ಹೌತಿ ಮಿಲಿಷಿಯಾ ಭಯೋತ್ಪಾದನೆ ಸಂಘಟನೆಗಳು ವಾಣಿಜ್ಯ ಹಡಗುಗಳನ್ನು ಗುರಿಯಾಗಿ ದಾಳಿಯನ್ನು ನಡೆಸಿದೆ. ಅದರಲ್ಲೂ ಭಾರತಕ್ಕೆ ಬರುವ ಹಡಗುಗಳನ್ನು ಟಾರ್ಗೆಟ್​​​ ಮಾಡುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 21 ಭಾರತೀಯರಿದ್ದ ಬ್ರಿಟಿಷ್ ಹಡಗಿನ ಮೇಲೆ ಹೌತಿ ಬಂಡುಕೋರರ ದಾಳಿ, ಸಹಾಯಕ್ಕೆ ಧಾವಿಸಿದ ಭಾರತೀಯ ನೌಕಾಪಡೆ

ಬ್ರಿಟಿಷ್ ಹಡಗಿನ ಮೇಲೆ ಯೆಮೆನ್‌ನ ಹೌತಿ ಬಂಡುಕೋರರ ದಾಳಿ

ಬ್ರಿಟಿಷ್ ತೈಲ ಟ್ಯಾಂಕರ್​​ಗಳನ್ನು ಹೊತ್ತು ಬರುತ್ತಿದ್ದ ಮಾರ್ಲಿನ್ ಲುವಾಂಡಾ ಹಡಗಿನ ಮೇಲೆ ಜ.26 ಯೆಮೆನ್‌ನ ಹೌತಿ ಬಂಡುಕೋರರು ದಾಳಿಯ ಮಾಡಿದ್ದರು. ಈ ಹಡಗಿನಲ್ಲಿ 21 ಭಾರತೀಯ ಸಿಬ್ಬಂದಿಗಳು ಹಾಗೂ ಒಬ್ಬ ಬಾಂಗ್ಲಾದೇಶದ ಸಿಬ್ಬಂದಿ ಇದ್ದರು ಎಂದು ಹೇಳಲಾಗಿತ್ತು. ಮಾರ್ಲಿನ್ ಲುವಾಂಡಾ ಹಡಗು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಬಗ್ಗೆ ಭಾರತೀಯ ನೌಕದಳಕ್ಕೆ ಕರೆ ಬಂದಿದೆ. ಈ ಕರೆಗೆ ಸ್ಪಂದಿಸಿ ಭಾರತೀಯ ನೌಕಾಪಡೆಯು (Indian Navy) ತನ್ನ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ – INS ವಿಶಾಖಪಟ್ಟಣಂನ್ನು ಏಡೆನ್ ಕೊಲ್ಲಿಯಲ್ಲಿ ನಿಯೋಜಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Mon, 29 January 24

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್