AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ INS ಸುಮಿತ್ರ

ಸೊಮಾಲಿ ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಮೀನುಗಾರಿಕಾ ಹಡಗು ಇಮಾನ್​​​ನ್ನು ಇಂದು ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ಸುರಕ್ಷಿತವಾಗಿ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳ ಹೇಳಿದ್ದಾರೆ. ಅಧಿಕಾರಿಗಳು ನೀಡಿದ ಹೇಳಿಕೆ ಪ್ರಕಾರ, ಇರಾನ್ ಮೀನುಗಾರಿಕಾ ಹಡಗು ಎಂವಿ ಇಮಾನ್​​​ನ್ನು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದರು.

ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ INS ಸುಮಿತ್ರ
Indian Navy INS Sumitra
ಅಕ್ಷಯ್​ ಪಲ್ಲಮಜಲು​​
|

Updated on:Jan 29, 2024 | 3:33 PM

Share

ಅರಬ್ಬೀ ಸಮುದ್ರದಲ್ಲಿ ಸೊಮಾಲಿ ( Somali) ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಮೀನುಗಾರಿಕಾ ಹಡಗು ಇಮಾನ್​​​ನ್ನು ಇಂದು (ಜ.29) ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ (INS Sumitra) ಸುರಕ್ಷಿತವಾಗಿ ರಕ್ಷಿಸಿದೆ ಎಂದು ರಕ್ಷಣಾ ಅಧಿಕಾರಿಗಳ ಹೇಳಿದ್ದಾರೆ. ಅಧಿಕಾರಿಗಳು ನೀಡಿದ ಹೇಳಿಕೆ ಪ್ರಕಾರ, ಇರಾನ್ ಮೀನುಗಾರಿಕಾ ಹಡಗು ಎಂವಿ ಇಮಾನ್​​​ನ್ನು ಸೊಮಾಲಿ ಕಡಲ್ಗಳ್ಳರು ಅಪಹರಿಸಿದ್ದರು. ಈ ಹಡಗಿನಲ್ಲಿ 17 ಜನ ಭಾರತೀಯ ಮೀನುಗಾರರಿದ್ದರು ಎಂದು ಹೇಳಲಾಗಿದೆ.

ಇದೀಗ ಈ ಪ್ರದೇಶದಲ್ಲಿ ಭಾರತೀಯ ನೌಕಪಡೆಗಳು ಭದ್ರತೆಯನ್ನು ಹೆಚ್ಚಿಸಿದ್ದು, ಭಾರತಕ್ಕೆ ಹೋಗುವ ವ್ಯಾಪಾರಿ ಹಡಗುಗಳ ಮೇಲೆ  ಹೆಚ್ಚಿನ ಕಾಳಜಿಯನ್ನು ವಹಿಸಲಾಗಿದೆ ಎಂದು ಹೇಳಿದೆ. ಅಪಾಯ ಇರುವ ಅಥವಾ ದಾಳಿ ನಡೆಸುವ ಪ್ರದೇಶಗಳಲ್ಲಿ 10 ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂತಹ ದಾಳಿಗಳು ನಡೆಯುವುದು ಕಡಿಮೆಯಾಗಿತ್ತು. ಆದರೆ ಇಸ್ರೇಲ್​​-ಹಮಾಸ್​​​ ಯುದ್ಧದ ನಂತರ ಇಂತಹ ದಾಳಿಗಳು ಹೆಚ್ಚಾಗಿದೆ ಎಂದು ಹೇಳಲಾಗಿದೆ. ಇರಾನ್ ಬೆಂಬಲಿತ ಯೆಮೆನ್‌ನ ಹೌತಿ ಮಿಲಿಷಿಯಾ ಭಯೋತ್ಪಾದನೆ ಸಂಘಟನೆಗಳು ವಾಣಿಜ್ಯ ಹಡಗುಗಳನ್ನು ಗುರಿಯಾಗಿ ದಾಳಿಯನ್ನು ನಡೆಸಿದೆ. ಅದರಲ್ಲೂ ಭಾರತಕ್ಕೆ ಬರುವ ಹಡಗುಗಳನ್ನು ಟಾರ್ಗೆಟ್​​​ ಮಾಡುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 21 ಭಾರತೀಯರಿದ್ದ ಬ್ರಿಟಿಷ್ ಹಡಗಿನ ಮೇಲೆ ಹೌತಿ ಬಂಡುಕೋರರ ದಾಳಿ, ಸಹಾಯಕ್ಕೆ ಧಾವಿಸಿದ ಭಾರತೀಯ ನೌಕಾಪಡೆ

ಬ್ರಿಟಿಷ್ ಹಡಗಿನ ಮೇಲೆ ಯೆಮೆನ್‌ನ ಹೌತಿ ಬಂಡುಕೋರರ ದಾಳಿ

ಬ್ರಿಟಿಷ್ ತೈಲ ಟ್ಯಾಂಕರ್​​ಗಳನ್ನು ಹೊತ್ತು ಬರುತ್ತಿದ್ದ ಮಾರ್ಲಿನ್ ಲುವಾಂಡಾ ಹಡಗಿನ ಮೇಲೆ ಜ.26 ಯೆಮೆನ್‌ನ ಹೌತಿ ಬಂಡುಕೋರರು ದಾಳಿಯ ಮಾಡಿದ್ದರು. ಈ ಹಡಗಿನಲ್ಲಿ 21 ಭಾರತೀಯ ಸಿಬ್ಬಂದಿಗಳು ಹಾಗೂ ಒಬ್ಬ ಬಾಂಗ್ಲಾದೇಶದ ಸಿಬ್ಬಂದಿ ಇದ್ದರು ಎಂದು ಹೇಳಲಾಗಿತ್ತು. ಮಾರ್ಲಿನ್ ಲುವಾಂಡಾ ಹಡಗು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಬಗ್ಗೆ ಭಾರತೀಯ ನೌಕದಳಕ್ಕೆ ಕರೆ ಬಂದಿದೆ. ಈ ಕರೆಗೆ ಸ್ಪಂದಿಸಿ ಭಾರತೀಯ ನೌಕಾಪಡೆಯು (Indian Navy) ತನ್ನ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ – INS ವಿಶಾಖಪಟ್ಟಣಂನ್ನು ಏಡೆನ್ ಕೊಲ್ಲಿಯಲ್ಲಿ ನಿಯೋಜಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Mon, 29 January 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು