AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Navy: ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ 19 ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ

INS Sumitra: ಭಾರತೀಯ ಯುದ್ಧನೌಕೆ INS ಸುಮಿತ್ರಾ ಸೋಮಾಲಿಯಾದ ಪೂರ್ವ ಕರಾವಳಿಯಲ್ಲಿ ಎರಡು ಕಾರ್ಯಚರಣೆಯನ್ನು ನಡೆಸಿದೆ. ಸೋಮಾಲಿದಲ್ಲಿ ಕಡಲ್ಗಳ್ಳರು ಪಾಕಿಸ್ತಾನಿಗಳಿದ್ದ ಮೀನುಗಾರಿಕಾ ಹಡಗುನ್ನು ಅಪಹರಿಸಿದ್ದರು. ಹಡಗನಲ್ಲಿದ್ದ 19 ಪಾಕಿಸ್ತಾನ ನಾವಿಕರನ್ನು ಭಾರತೀಯ ಯುದ್ಧನೌಕೆ INS ಸುಮಿತ್ರಾ ರಕ್ಷಿಸಿದೆ. ಇದು 36 ಗಂಟೆಗಳಲ್ಲಿ ಭಾರತೀಯ ಯುದ್ಧನೌಕೆ ನಡೆಸಿದ ಎರಡನೇ ಕಾರ್ಯಚರಣೆಯಾಗಿದೆ.

Indian Navy: ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ 19 ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ
ಅಕ್ಷಯ್​ ಪಲ್ಲಮಜಲು​​
|

Updated on:Jan 30, 2024 | 12:24 PM

Share

ಸೋಮಾಲಿಯಾದ ( Somali) ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಪಾಕಿಸ್ತಾನಿಗಳಿದ್ದ ಮೀನುಗಾರಿಕಾ ಹಡಗುನ್ನು ಅಪಹರಿಸಿದ್ದರು. ಇದೀಗ ಆ ಹಡಗನಲ್ಲಿದ್ದ 19 ಪಾಕಿಸ್ತಾನ ನಾವಿಕರನ್ನು ಭಾರತೀಯ ಯುದ್ಧನೌಕೆ INS ಸುಮಿತ್ರಾ ರಕ್ಷಿಸಿದೆ. ಇದು 36 ಗಂಟೆಗಳಲ್ಲಿ ಭಾರತೀಯ ಯುದ್ಧನೌಕೆ ನಡೆಸಿದ ಎರಡನೇ ಕಾರ್ಯಚರಣೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹನ್ನೊಂದು ಶಸ್ತ್ರಸಜ್ಜಿತ ಕಡಲ್ಗಳ್ಳರು ಇರಾನಿ ಧ್ವಜವುಳ್ಳ ಹಡಗನ್ನು ಅಪಹರಿಸಿದ್ದು, 19 ಪಾಕಿಸ್ತಾನ ನಾವಿಕರನ್ನು ಒತ್ತೆಯಾಳುಗಳಾಗಿ ಇರಿಸಿದರು. ಈ ಬಗ್ಗೆ ಮಾಹಿತಿ ಪಡೆದ ಭಾರತೀಯ ಯುದ್ಧನೌಕೆ ಕಡಲ್ಗಳ್ಳರು ವಶದಲ್ಲಿದ್ದ ಹಡಗನ್ನು ತಡೆದು, 19 ಪಾಕಿಸ್ತಾನ ಒತ್ತೆಯಾಳುಗಳನ್ನು ರಕ್ಷಿಸಿದ್ದಾರೆ.

ಮತ್ತೊಂದು ಕಡೆ ಅರಬ್ಬೀ ಸಮುದ್ರದ ಸೊಮಾಲಿ ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಮೀನುಗಾರಿಕಾ ಹಡಗು ಇಮಾನ್​​​ನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ರಕ್ಷಣೆ ಮಾಡಿದೆ. ಈ ಹಡಗಿನಲ್ಲಿ 17 ಜನ ಭಾರತೀಯ ಮೀನುಗಾರರಿದ್ದರು ಎಂದು ಹೇಳಲಾಗಿದೆ. ಈ ಪ್ರದೇಶದಲ್ಲಿ ಭಾರತೀಯ ನೌಕಪಡೆಗಳು ಭದ್ರತೆಯನ್ನು ಹೆಚ್ಚಿಸಿದ್ದು, ಭಾರತಕ್ಕೆ ಹೋಗುವ ವ್ಯಾಪಾರಿ ಹಡಗುಗಳ ಮೇಲೆ ಹೆಚ್ಚಿನ ಕಾಳಜಿಯನ್ನು ವಹಿಸಲಾಗಿದೆ.

ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ 36 ಗಂಟೆಗಳಲ್ಲಿ ಎರಡು ಕಾರ್ಯಚರಣೆಯನ್ನು ಮಾಡಿದೆ. ಈ ಕಾರ್ಯಚರಣೆಯಲ್ಲಿ ಒಟ್ಟು 36 ಜನರನ್ನು ರಕ್ಷಣೆ ಮಾಡಿದೆ (17 ಭಾರತೀಯರು ಹಾಗೂ 19 ಪಾಕಿಸ್ತಾನದ ನಾವಿಕರನ್ನು ರಕ್ಷಣೆ ಮಾಡಲಾಗಿದೆ) ಯುದ್ಧನೌಕೆ ಐಎನ್‌ಎಸ್ ಸುಮಿತ್ರಾದ ನಿರಂತರ ಹಾಗೂ ಕ್ಷಿಪ್ರ ಪ್ರಯತ್ನದಿಂದ ಈ ಕಾರ್ಯಚರಣೆ ಯಶಸ್ವಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಮುದ್ರ ಮಟ್ಟದಲ್ಲಿ ಇಂತಹ ಕೃತ್ಯಗಳು ಹೆಚ್ಚಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು INS ಸುಮಿತ್ರಾ ಭಾರತೀಯ ನೌಕಾಪಡೆಯ ಸ್ಥಳೀಯ ಕಡಲಾಚೆಯ ಗಸ್ತು ನೌಕೆಯಾಗಿದ್ದು, ಸೋಮಾಲಿಯಾ ಮತ್ತು ಗಲ್ಫ್ ಆಫ್ ಅಡೆನ್‌ನ ಪೂರ್ವದಲ್ಲಿ ಕಡಲ್ಗಳ್ಳತನ ಮತ್ತು ಕಡಲ ಭದ್ರತಾ ಕಾರ್ಯಾಚರಣೆಗಳಿಗಾಗಿ ನಿಯೋಜಿಸಲಾಗಿದೆ.

ಇದನ್ನೂ ಓದಿ: ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಮೀನುಗಾರಿಕಾ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ INS ಸುಮಿತ್ರ

ಬ್ರಿಟಿಷ್ ಹಡಗಿನ ಮೇಲೆ ಯೆಮೆನ್‌ನ ಹೌತಿ ಬಂಡುಕೋರರ ದಾಳಿ

ಬ್ರಿಟಿಷ್ ತೈಲ ಟ್ಯಾಂಕರ್​​ಗಳನ್ನು ಹೊತ್ತು ಬರುತ್ತಿದ್ದ ಮಾರ್ಲಿನ್ ಲುವಾಂಡಾ ಹಡಗಿನ ಮೇಲೆ ಜ.26 ಯೆಮೆನ್‌ನ ಹೌತಿ ಬಂಡುಕೋರರು ದಾಳಿಯ ಮಾಡಿದ್ದರು. ಈ ಹಡಗಿನಲ್ಲಿ 21 ಭಾರತೀಯ ಸಿಬ್ಬಂದಿಗಳು ಹಾಗೂ ಒಬ್ಬ ಬಾಂಗ್ಲಾದೇಶದ ಸಿಬ್ಬಂದಿ ಇದ್ದರು ಎಂದು ಹೇಳಲಾಗಿತ್ತು. ಮಾರ್ಲಿನ್ ಲುವಾಂಡಾ ಹಡಗು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಬಗ್ಗೆ ಭಾರತೀಯ ನೌಕದಳಕ್ಕೆ ಕರೆ ಬಂದಿದೆ. ಈ ಕರೆಗೆ ಸ್ಪಂದಿಸಿ ಭಾರತೀಯ ನೌಕಾಪಡೆಯು (Indian Navy) ತನ್ನ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ – INS ವಿಶಾಖಪಟ್ಟಣಂನ್ನು ಏಡೆನ್ ಕೊಲ್ಲಿಯಲ್ಲಿ ನಿಯೋಜಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Tue, 30 January 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು