Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಾತನ್ನು ಗೌರವಿಸುತ್ತೇವೆ ಜೈಶಂಕರ್​​, ಖಂಡಿತ 17 ಭಾರತೀಯರನ್ನು ಬಿಡುಗಡೆ ಮಾಡುತ್ತೇವೆ ಎಂದ ಇರಾನ್

ಇರಾನ್​​ ವಶದಲ್ಲಿರುವ ಇಸ್ರೇಲ್​​ ಹಡಗಿನಲ್ಲಿದ್ದ 17 ಭಾರತೀಯರನ್ನು ಭಾರತ ಅಧಿಕಾರಿಗಳು ಭೇಟಿ ಮಾಡಲು ಇರಾನ್​​ ಅವಕಾಶ ನೀಡಿದೆ. ಭಾನುವಾರದಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿ ಭಾರತದ ವಿದೇಶಾಂಗ ಸಚಿವ ಜೈಶಂಕರ್​​ ಮಾತನಾಡಿದ್ದಾರೆ. ಇದೀಗ ಅವರ ಮಾತಿಗೆ ಗೌರವ ನೀಡಿ. ಭಾರತ ಅಧಿಕಾರಿಗಳು 17 ಸಿಬ್ಬಂದಿಗಳನ್ನು ಭೇಟಿಯಾಗಲು ಅವಕಾಶ ನೀಡಿದೆ. ಇಂದು ಸಂಜೆಯೊಳಗೆ ಅವರನ್ನು ಬಿಡುಗಡೆ ಮಾಡುವ ಸಾಧ್ಯ ಇದೆ.

ನಿಮ್ಮ ಮಾತನ್ನು ಗೌರವಿಸುತ್ತೇವೆ ಜೈಶಂಕರ್​​, ಖಂಡಿತ 17 ಭಾರತೀಯರನ್ನು ಬಿಡುಗಡೆ ಮಾಡುತ್ತೇವೆ ಎಂದ ಇರಾನ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 15, 2024 | 12:45 PM

ಇರಾನ್, (Iran) ಹಾರ್ಮುಜ್ ಜಲಮಾರ್ಗದ ಬಳಿ ಇಸ್ರೇಲ್​​ ಧ್ವಜವಿದ್ದ ಸರಕು ಸಾಗಿಸುವ ಹುಡಗನ್ನು ವಶಪಡಿಸಿಕೊಂಡಿತ್ತು. ಇದರಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದು, ಇದೀಗ ಅವರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಹಾಗೂ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತದ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​​ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ್ದಾರೆ. ಜೈಶಂಕರ್​​ ಅವರ ಮಾತನ್ನು ಗೌರವಿಸಿ ಇರಾನ್ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಭೇಟಿ ಮಾಡಲು ಅವಕಾಶ ನೀಡಿದೆ.

ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಎಸ್ ಜೈಶಂಕರ್ ಅವರು ಭಾನುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸಮಯದಲ್ಲಿ 17 ಭಾರತೀಯ ಸಿಬ್ಬಂದಿಗಳನ್ನು ಭಾರತ ಭೇಟಿ ಮಾಡಬಹುದು ಎಂದು ಹೇಳಿದ್ದಾರೆ. ಈ ಮಾತುಕತೆಯಲ್ಲಿ MSC ಏರೀಸ್‌ ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಕೂಡ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮೀರ್-ಅಬ್ದುಲ್ಲಾಹಿಯಾನ್ ಖಂಡಿತವಾಗಿ ಜೈಶಂಕರ್​​ ನಿಮ್ಮ ಮನವಿಯನ್ನು ಗೌರವಿಸುತ್ತೇವೆ. ಈಗಾಗಗಲೇ ನಾವು ವಶಪಡಿಸಿಕೊಂಡಿರುವ ಹಡಗಿನ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದೇವೆ. ನಿಮ್ಮ ಅಧಿಕಾರಿಗಳು ಹಡಗಿನಲ್ಲಿದ್ದ 17 ಭಾರತೀಯರನ್ನು ಭೇಟಿಯಾಗಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಇರಾನ್​​​​ ಈ ಕ್ರಮದಿಂದ ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ

ಈಗಾಗಲೇ ಇರಾನ್ ಮತ್ತು ಇಸ್ರೇಲ್​​ ನಡುವೆ ಯುದ್ಧ ಸ್ಥಿತಿ ಇದೆ. ಈ ಕಾರಣದಿಂದ ಇರಾನ್​​​ ಇಸ್ರೇಲ್​​ನ ಈ ಹಡಗನ್ನು ವಶಪಡಿಸಿಕೊಂಡಿದೆ. ಆದರೆ ಅದರಲ್ಲಿರುವ ಎಲ್ಲ ಸಿಬ್ಬಂದಿ ಯೋಗಕ್ಷೇಮ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಪ್ರಕಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳು ಎಂದು ಗುರುತಿಸಿದೆ. ಇದರ ಜತೆಗೆ ಭಾರತ ಇರಾನ್​​ ವಶದಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್​​ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಇಸ್ರೇಲ್​ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್​ ದಾಳಿ

ಇಸ್ರೇಲ್​ ಮೇಲೆ ಇರಾನ್ ಏ.13ರಂದು ಕ್ಷಿಪಣಿ ಹಾಗೂ ಡ್ರೋನ್​ ದಾಳಿ ನಡೆಸಿತ್ತು. ಕಿಲ್ಲರ್ ಡ್ರೋನ್​ಗಳು, ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ ಇರಾನ್ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ದಾಳಿಗಳನ್ನು ನಡೆಸಿದೆ. ಸಿರಿಯಾದ ರಾಜಧಾನಿ ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಸೇನೆಯು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಇಸ್ರೇಲ್ ಮೇಲೆ ದಾಳಿ ಮಾಡಿದೆ. ಇರಾನ್ ಇಸ್ರೇಲ್ ಮೇಲೆ 100ಕ್ಕೂಹೆಚ್ಚು ಡ್ರೋನ್​ಗಳನ್ನು ಹಾರಿಸಿದೆ. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ