AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವನ್ನು ಹೀಗಳೆಯಲು ಸಿದ್ಧವಾಗಿದೆ USCIRF: ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರಶ್ನಿಸುವ ತಂಡದಲ್ಲಿ ಭಾರತ ವಿರೋಧಿ ಷಡ್ಯಂತ್ರ

ಕಳೆದ ಎರಡು ವರ್ಷಗಳಿಂದ ಮಾಡಿದಂತೆ ಈ ವರ್ಷವೂ ಅನುಸರಿಸಿಕೊಂಡು ಬಂದಿರುವಂತೆ ಈ ಬಾರಿಯೂ ಭಾರತವನ್ನು ಈ ವರದಿಯು ತೇಜೋವಧೆ ಮಾಡಲಿದೆ ಎಂದು ವಿಶ್ಲೇಷಿಸಲಾಗಿದೆ.

ಭಾರತವನ್ನು ಹೀಗಳೆಯಲು ಸಿದ್ಧವಾಗಿದೆ USCIRF: ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರಶ್ನಿಸುವ ತಂಡದಲ್ಲಿ ಭಾರತ ವಿರೋಧಿ ಷಡ್ಯಂತ್ರ
ಬೆಂಗಳೂರು ಕರಗ ಸೌಹಾರ್ದದ ಪ್ರತೀಕವೂ ಹೌದು
TV9 Web
| Edited By: |

Updated on:Apr 26, 2022 | 8:42 AM

Share

ವಾಷಿಂಗ್​ಟನ್: ಅಮೆರಿಕದ ಜಾಗತಿಕ ಧಾರ್ಮಿಕ ಸ್ವಾತಂತ್ರ್ಯ ವೇದಿಕೆಯ (United States Commission on International Religious Freedom – USCIRF) ವಾರ್ಷಿಕ ವರದಿ ಇನ್ನೇನು ಬಿಡುಗಡೆಯಾಗಲಿದೆ. ಕಳೆದ ಎರಡು ವರ್ಷಗಳಿಂದ ಮಾಡಿದಂತೆ ಈ ವರ್ಷವೂ ಅನುಸರಿಸಿಕೊಂಡು ಬಂದಿರುವಂತೆ ಈ ಬಾರಿಯೂ ಭಾರತವನ್ನು ಈ ವರದಿಯು ತೇಜೋವಧೆ ಮಾಡಲಿದೆ ಎಂದು ವಿಶ್ಲೇಷಿಸಲಾಗಿದೆ. ಭಾರತಕ್ಕೆ ‘ನಿರ್ದಿಷ್ಟ ಕಾಳಜಿಯ ದೇಶ’ (Country of Particular Concern – CPC) ಎನ್ನುವ ಕಳಂಕಿತ ಸ್ಥಾನಮಾನ ನೀಡಬೇಕು ಎಂದು ಕಳೆದ ಎರಡು ವರ್ಷಗಳಿಂದಲೂ ಭಾರತ ವಿರೋಧಿ ಗುಂಪುಗಳು ಪ್ರಯತ್ನ ಪಡುತ್ತಲೇ ಇವೆ. ಎರಡು ವರ್ಷಗಳಿಂದ ನಡೆಯುತ್ತಿರುವ ಇಂಥ ಪ್ರಯತ್ನಗಳು ಈ ಬಾರಿ ಏನಾಗಲಿವೆ ಎನ್ನುವುದು ಇನ್ನು ಒಂದು ದಿನದಲ್ಲಿ ತಿಳಿದುಬರಲಿದೆ. ಜಾಗತಿಕ ಮಟ್ಟದಲ್ಲಿ ಪ್ರಭಾವಶಾಲಿಯಾಗಿರುವ ಭಾರತ ವಿರೋಧಿ ಗುಂಪುಗಳು ಈ ವರ್ಷವೂ ಭಾರತಕ್ಕೆ ಮಸಿಬಳಿಯಲು ಸಂಘಟಿತ ಪ್ರಯತ್ನ ಮಾಡುತ್ತಿವೆ ಎಂಬ ಮಾತು ಕೇಂದ್ರ ಸರ್ಕಾರದ ಉನ್ನತ ವಲಯದಲ್ಲಿ ಕೇಳಿ ಬರುತ್ತಿದೆ.

ಜಾಗತಿಕ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯ ಅಡಿಯಲ್ಲಿ 1998ರಲ್ಲಿ ಜಾಗತಿಕ ಧಾರ್ಮಿಕ ಸ್ವಾತಂತ್ರ್ಯ ವೇದಿಕೆಯನ್ನು ಆರಂಭಿಸಲಾಯಿತು. ಅಮೆರಿಕ ಹೊರತುಪಡಿಸಿ ಇತರ ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಪರಿಶೀಲಿಸುವುದು ಈ ವೇದಿಕೆಯ ಉದ್ದೇಶವಾಗಿತ್ತು. ಈ ವೇದಿಕೆಯ ವರದಿಗಳನ್ನು ಭಾರತವು ಮೊದಲಿನಿಂದಲು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಭಾರತದ ಬಗ್ಗೆ ಈ ವೇದಿಕೆಯ ವರದಿಗಳು ಸದಾ ಪೂರ್ವಗ್ರಹದಿಂದಲೇ ಕೂಡಿರುತ್ತಿದ್ದವು. ಈ ವರದಿಗಳನ್ನು ಪರಿಶೀಲಿಸಿದರೆ ಅಮೆರಿಕದಲ್ಲಿ ಭಾರತ ವಿರೋಧಿ ಗುಂಪುಗಳು ಎಷ್ಟು ಪ್ರಬಲವಾಗಿವೆ ಎಂಬುದು ಅರ್ಥವಾಗುತ್ತದೆ.

ಈ ವಾರದ ಆರಂಭದಲ್ಲಿ ಅಮೆರಿಕ ಮೂಲದ ಹಲವು ನಾಗರಿಕ ಹಕ್ಕು ಹೋರಾಟ ಸಂಘಟನೆಗಳು ಜಾಗತಿಕ ಸ್ವಾತಂತ್ರ್ಯ ವೇದಿಕೆಗೆ ಪತ್ರ ಬರೆದು, ‘ಭಾರತದಲ್ಲಿ ವಿಶ್ವದಲ್ಲಿಯೇ ಅತ್ಯಂತ ಕೆಟ್ಟದಾಗಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳಲಾಗುತ್ತಿದೆ. ಭಾರತವನ್ನು ನಿರ್ದಿಷ್ಟ ಕಾಳಜಿಯ ದೇಶಗಳ ಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿದ್ದವು.

ಈ ಮನವಿ ಪತ್ರಕ್ಕೆ ಸಹಿಹಾಕಿದ್ದ ಬಹುತೇಕ ಸಂಘಟನೆಗಳ ಬದ್ಧತೆ ಮತ್ತು ಹಿನ್ನೆಲೆಯ ಬಗ್ಗೆಯೇ ಭಾರತೀಯ ಅಧಿಕಾರಿಗಳಿಗೆ ಪ್ರಶ್ನೆಗಳಿವೆ. ಆದರೆ ಒಮ್ಮೆ ಈ ಕಳಂಕಿತ ಪಟ್ಟಿಯಲ್ಲಿ ದೇಶದ ಹೆಸರು ಸೇರಿದರೆ ಹಲವು ರೀತಿಯ ಪ್ರತಿಕೂಲ ಪರಿಣಾಮಗಳು ಎದುರಾಗಬಹುದು. ಇಂಥ ದೇಶಗಳ ಮೇಲೆ ಹಲವು ರೀತಿಯ ಆರ್ಥಿಕ ದಿಗ್ಬಂಧನಗಳನ್ನು ಹೇರಲು ಅಮೆರಿಕ ಅಧ್ಯಕ್ಷರಿಗೆ ಅವಕಾಶ ಇರುತ್ತದೆ. ಇದರ ಜೊತೆಗೆ ವಿಶ್ವದ ವಿವಿಧೆಡೆ ಪ್ರಭಾವಶಾಲಿಗಳಾಗಿರುವ ಲಾಬಿಗಾರರು ಗುಂಪು ಈ ಪಟ್ಟಿಯನ್ನೇ ನೆಪ ಮಾಡಿಕೊಂಡು ದೇಶದಲ್ಲಿ ಹೂಡಿಕೆ ಮಾಡದಿರುವಂತೆ ಉದ್ಯಮಿಗಳ ಮನವೊಲಿಸಬಹುದು.

ಧಾರ್ಮಿಕ ಸ್ವಾತಂತ್ರ್ಯ ಆತಂಕದಲ್ಲಿದೆ ಎಂಬ ಅಮೆರಿಕ ಸರ್ಕಾರದ ಅಧಿಕೃತ ಪಟ್ಟಿಯ ಮೊದಲ 10 ಹೆಸರುಗಳಲ್ಲಿ ಭಾರತವನ್ನು ಸೇರಿಸಲು ಅಮೆರಿಕದ ವಿದೇಶಾಂಗದ ಸೆಕ್ರಟರಿ ಆಫ್ ಸ್ಟೇಟ್ ಆಗಿದ್ದ ಮೈಕ್ ಪಾಂಪಿಯೊ (2020) ಮತ್ತು ಆಂಟೊನಿ ಬ್ಲಿಂಕೆನ್ (2021) ಹಿಂಜರಿದಿದ್ದರು. 2021ರಲ್ಲಿ ಭಾರತದ ವಿರುದ್ಧ ವೀಸಾ ನಿರ್ಬಂಧ ಸೇರಿದಂತೆ ಹಲವು ರೀತಿಯ ಕಠಿಣ ಕ್ರಮ ಜರುಗಿಸುವಂತೆ ಧಾರ್ಮಿಕ ಸ್ವಾತಂತ್ರ್ಯ ವೇದಿಕೆ (USCIRF) ಒತ್ತಾಯ ಮಾಡಿತ್ತು. ಈ ವರ್ಷವೂ ಇಂಥದ್ದೇ ಬೆಳವಣಿಗೆ ಆಗಬಹುದು ಎಂದು ಕೆಲ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇದೇ ಕಾರಣಕ್ಕೆ ಭಾರತದ ನೆಲದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಪ್ಪಾಗಿ ಅರ್ಥೈಸಿ, ಭಾರತದಲ್ಲಿ ತೀವ್ರತರದ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ನಡೆಯುತ್ತಿದೆ ಎಂದು ವಾದಿಸುವವರನ್ನು ಹಣಕೊಟ್ಟು ಪಾಶ್ಚಿಮಾತ್ಯ ದೇಶಗಳಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಧಾರ್ಮಿಕ ಸ್ವಾತಂತ್ರ್ಯ ಕಿತ್ತುಕೊಂಡ ವಿಧೇಯಕ: ಮತಾಂತರ ನಿಷೇಧ ಕಾಯ್ದೆಗೆ ಕ್ರೈಸ್ತ ಒಕ್ಕೂಟ ವಿರೋಧ

ಇದನ್ನೂ ಓದಿ: ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​

Published On - 3:54 pm, Mon, 25 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?