AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Bank: ವಿಶ್ವಬ್ಯಾಂಕ್​ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ

ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ.

World Bank: ವಿಶ್ವಬ್ಯಾಂಕ್​ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ
ಅಜಯ್ ಬಂಗಾ
Ganapathi Sharma
|

Updated on: May 03, 2023 | 11:05 PM

Share

ನವದೆಹಲಿ: ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ. ಹವಾಮಾನ ಬದಲಾವಣೆಯಂಥ ಸವಾಲಿನ ಸಂದರ್ಭದಲ್ಲಿ ಅಜಯ್ ಬಂಗಾ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಸವಾಲು ಎದುರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ವಿಶ್ವಬ್ಯಾಂಕ್ ಗ್ರೂಪ್ ವಿಕಸನ ಪ್ರಕ್ರಿಯೆಯಲ್ ಲಿಬಂಗಾ ಅವರೊಂದಿಗೆ ಕೆಲಸ ಮಾಡಲು ಮಂಡಳಿಯು ಎದುರು ನೋಡುತ್ತಿದೆ ಎಂದು ಅದು ತಿಳಿಸಿದೆ. ಬಂಗಾ ಅವರ ಅಧಿಕಾರಾವಧಿ ಐದು ವರ್ಷಗಳದ್ದಾಗಿರಲಿದೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಎದುರಿಸುತ್ತಿರುವ ಕಠಿಣ ಬೆಳವಣಿಗೆಯ ಸವಾಲುಗಳನ್ನು ನಿಭಾಯಿಸುವ ಗುರಿಯನ್ನು ವಿಶ್ವಬ್ಯಾಂಕ್ ಹೊಂದಿದೆ. ಸಮೂಹದ ಎಲ್ಲಾ ಮಹತ್ವಾಕಾಂಕ್ಷೆಗಳು ಮತ್ತು ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಂಗಾ ಅವರೊಂದಿಗೆ ಕೆಲಸ ಮಾಡಲು ಎದುರುನೋಡುತ್ತಿದ್ದೇವೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ವಿಶ್ವ ಬ್ಯಾಂಕ್ ಅಧ್ಯಕ್ಷರ ಹುದ್ದೆಗೆ ಏಕೈಕ ನಾಮನಿರ್ದೇಶತರಾಗಿದ್ದ ಬಂಗಾ ಜೂನ್ ಎರಡರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹುದ್ದೆಯಿಂದ ನಿರ್ಗಮಿಸಲಿರುವ ಡೇವಿಡ್ ಮಾಲ್ಪಾಸ್ ಅವರು ಬಂಗಾಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಇದನ್ನೂ ಓದಿ: Vladimir Putin: ವ್ಲಾಡಿಮಿರ್ ಪುಟಿನ್‌ ಹತ್ಯೆಗೆ ಉಕ್ರೇನ್ ಯತ್ನ ನಡೆಸಿದೆ: ರಷ್ಯಾ ಆರೋಪ

ಇದರೊಂದಿಗೆ, ಅಭಿವೃದ್ಧಿ ಹೊಂದುತ್ತಿರುವ ಮತ್ತು ಉದಯೋನ್ಮುಖ ಆರ್ಥಿಕತೆಗಳಿಂದ ಕೂಡಿರುವ ವಿಶ್ವಬ್ಯಾಂಕ್​ನ ಅಧ್ಯಕ್ಷ ಸ್ಥಾನದ ಮೇಲೆ ಅಮೆರಿಕದ ಹಿಡಿತ ನಿರಂತರವಾಗಿ ಮುಂದುವರಿದಿದೆ ಎಂಬ ಇತರ ದೇಶಗಳ ಅಸಮಾಧಾನ ಹೆಚ್ಚುತ್ತಿರುವ ಹೊರತಾಗಿಯೂ, ಭಾರತದಲ್ಲಿ ಸಿಖ್ ಕುಟುಂಬದಲ್ಲಿ ಜನಿಸಿದ ಮತ್ತು ಅಮೆರಿಕ ಪ್ರಜೆಯಾಗಿರುವ 63 ವರ್ಷದ ಬಂಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದರೊಂದಿಗೆ ಅಮೆರಿಕದ ಹಿಡಿತ ಮತ್ತೆ ಮುಂದುವರಿದಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ