AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Bank: ವಿಶ್ವಬ್ಯಾಂಕ್​ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ

ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ.

World Bank: ವಿಶ್ವಬ್ಯಾಂಕ್​ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ
ಅಜಯ್ ಬಂಗಾ
Ganapathi Sharma
|

Updated on: May 03, 2023 | 11:05 PM

Share

ನವದೆಹಲಿ: ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅಜಯ್ ಬಂಗಾ (Ajay Banga) ಮುಂದಿನ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ವಿಶ್ವ ಬ್ಯಾಂಕ್ (World Bank) ಬುಧವಾರ ತಿಳಿಸಿದೆ. ಹವಾಮಾನ ಬದಲಾವಣೆಯಂಥ ಸವಾಲಿನ ಸಂದರ್ಭದಲ್ಲಿ ಅಜಯ್ ಬಂಗಾ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಸವಾಲು ಎದುರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ವಿಶ್ವಬ್ಯಾಂಕ್ ಗ್ರೂಪ್ ವಿಕಸನ ಪ್ರಕ್ರಿಯೆಯಲ್ ಲಿಬಂಗಾ ಅವರೊಂದಿಗೆ ಕೆಲಸ ಮಾಡಲು ಮಂಡಳಿಯು ಎದುರು ನೋಡುತ್ತಿದೆ ಎಂದು ಅದು ತಿಳಿಸಿದೆ. ಬಂಗಾ ಅವರ ಅಧಿಕಾರಾವಧಿ ಐದು ವರ್ಷಗಳದ್ದಾಗಿರಲಿದೆ.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಎದುರಿಸುತ್ತಿರುವ ಕಠಿಣ ಬೆಳವಣಿಗೆಯ ಸವಾಲುಗಳನ್ನು ನಿಭಾಯಿಸುವ ಗುರಿಯನ್ನು ವಿಶ್ವಬ್ಯಾಂಕ್ ಹೊಂದಿದೆ. ಸಮೂಹದ ಎಲ್ಲಾ ಮಹತ್ವಾಕಾಂಕ್ಷೆಗಳು ಮತ್ತು ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಂಗಾ ಅವರೊಂದಿಗೆ ಕೆಲಸ ಮಾಡಲು ಎದುರುನೋಡುತ್ತಿದ್ದೇವೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ವಿಶ್ವ ಬ್ಯಾಂಕ್ ಅಧ್ಯಕ್ಷರ ಹುದ್ದೆಗೆ ಏಕೈಕ ನಾಮನಿರ್ದೇಶತರಾಗಿದ್ದ ಬಂಗಾ ಜೂನ್ ಎರಡರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹುದ್ದೆಯಿಂದ ನಿರ್ಗಮಿಸಲಿರುವ ಡೇವಿಡ್ ಮಾಲ್ಪಾಸ್ ಅವರು ಬಂಗಾಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಇದನ್ನೂ ಓದಿ: Vladimir Putin: ವ್ಲಾಡಿಮಿರ್ ಪುಟಿನ್‌ ಹತ್ಯೆಗೆ ಉಕ್ರೇನ್ ಯತ್ನ ನಡೆಸಿದೆ: ರಷ್ಯಾ ಆರೋಪ

ಇದರೊಂದಿಗೆ, ಅಭಿವೃದ್ಧಿ ಹೊಂದುತ್ತಿರುವ ಮತ್ತು ಉದಯೋನ್ಮುಖ ಆರ್ಥಿಕತೆಗಳಿಂದ ಕೂಡಿರುವ ವಿಶ್ವಬ್ಯಾಂಕ್​ನ ಅಧ್ಯಕ್ಷ ಸ್ಥಾನದ ಮೇಲೆ ಅಮೆರಿಕದ ಹಿಡಿತ ನಿರಂತರವಾಗಿ ಮುಂದುವರಿದಿದೆ ಎಂಬ ಇತರ ದೇಶಗಳ ಅಸಮಾಧಾನ ಹೆಚ್ಚುತ್ತಿರುವ ಹೊರತಾಗಿಯೂ, ಭಾರತದಲ್ಲಿ ಸಿಖ್ ಕುಟುಂಬದಲ್ಲಿ ಜನಿಸಿದ ಮತ್ತು ಅಮೆರಿಕ ಪ್ರಜೆಯಾಗಿರುವ 63 ವರ್ಷದ ಬಂಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದರೊಂದಿಗೆ ಅಮೆರಿಕದ ಹಿಡಿತ ಮತ್ತೆ ಮುಂದುವರಿದಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!