AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singapore New President: ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ

Tharman Shanmugaratnam: ಭಾರತ ಮೂಲದ  ಥರ್ಮನ್ ಷಣ್ಮುಗರತ್ನಂ ಸಿಂಗಾಪುರ(Singapore)ದ ನೂತನ ಅಧ್ಯಕ್ಷ(President))ರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷರಾಗಿದ್ದ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಂಡಿತು. ಈಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮುನ್ನ 66 ವರ್ಷದ ಷಣ್ಮುಗರತ್ನಂ ಅವರು ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಜಯ ದಾಖಲಿಸಿದ್ದರು. ಅವರು ಚೀನಾದ ಕೋಕ್ ಸಾಂಗ್ ಮತ್ತು ಟಾನ್ ಕಿನ್ ಲಿಯಾನ್ ಅವರನ್ನು ದೊಡ್ಡ ಅಂತರದಿಂದ ಸೋಲಿಸಿದ್ದರು.

Singapore New President: ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ
ಸಿಂಗಾಪುರದ ಅಧ್ಯಕ್ಷ ಥರ್ಮನ್
ನಯನಾ ರಾಜೀವ್
|

Updated on: Sep 15, 2023 | 11:02 AM

Share

ಭಾರತ ಮೂಲದ  ಥರ್ಮನ್ ಷಣ್ಮುಗರತ್ನಂ(Tharman Shanmugaratnam) ಸಿಂಗಾಪುರ(Singapore)ದ ನೂತನ ಅಧ್ಯಕ್ಷ(President))ರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧ್ಯಕ್ಷರಾಗಿದ್ದ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13 ರಂದು ಕೊನೆಗೊಂಡಿತು. ಈಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮುನ್ನ 66 ವರ್ಷದ ಷಣ್ಮುಗರತ್ನಂ ಅವರು ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಜಯ ದಾಖಲಿಸಿದ್ದರು. ಅವರು ಚೀನಾದ ಕೋಕ್ ಸಾಂಗ್ ಮತ್ತು ಟಾನ್ ಕಿನ್ ಲಿಯಾನ್ ಅವರನ್ನು ದೊಡ್ಡ ಅಂತರದಿಂದ ಸೋಲಿಸಿದ್ದರು.

ಕೊಕ್‌ಗೆ ಶೇ.15.2 ಹಾಗೂ ತಾನ್‌ಗೆ ಶೇ.13.88ರಷ್ಟು ಮತಗಳು ಲಭಿಸಿವೆ. ಅದೇ ವೇಳೆ ಷಣ್ಮುಗರತ್ನಂ ಶೇ.70.4 ಅಂದರೆ 17,46,427 ಮತಗಳನ್ನು ಪಡೆದಿದ್ದಾರೆ. ಸೆಪ್ಟೆಂಬರ್ 1ರಂದು ಸಿಂಗಾಪುರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆದಿತ್ತು.

ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ವಿಶ್ವದಾದ್ಯಂತ ಭಾರತದ ಧ್ವಜವನ್ನು ಹಾರಿಸುತ್ತಿರುವ ಭಾರತೀಯರ ಪಟ್ಟಿಗೆ ಥರ್ಮನ್ ಷಣ್ಮುಗರತ್ನಂ ಕೂಡ ಸೇರಿಕೊಂಡಿದ್ದಾರೆ. ವರದಿಯೊಂದರ ಪ್ರಕಾರ ವಿಶ್ವ ರಾಜಕೀಯದಲ್ಲಿ ಭಾರತೀಯರ ಪ್ರಾಬಲ್ಯ ನಿರಂತರವಾಗಿ ಹೆಚ್ಚುತ್ತಿದೆ.

ಅಮೆರಿಕ, ಇಂಗ್ಲೆಂಡ್ ಸೇರಿದಂತೆ 15 ದೇಶಗಳಲ್ಲಿ ಭಾರತೀಯ ಮೂಲದ 200ಕ್ಕೂ ಹೆಚ್ಚು ಜನರನ್ನು ನಾಯಕತ್ವ ವರ್ಗಕ್ಕೆ ಸೇರಿಸಲಾಗಿದೆ. ಇವರಲ್ಲಿ 60 ಮಂದಿ ಕ್ಯಾಬಿನೆಟ್ ಸಚಿವರವರೆಗಿನ ಸ್ಥಾನಗಳನ್ನು ಪಡೆದಿದ್ದಾರೆ.

ಮತ್ತಷ್ಟು ಓದಿ:UK PM Rishi Sunak: ರಿಷಿ ಸುನಕ್​ರನ್ನು ಬ್ರಿಟನ್​ನ ಅಧಿಕೃತ ಪ್ರಧಾನ ಮಂತ್ರಿಯಾಗಿ ನೇಮಿಸಿದ ಕಿಂಗ್ ಚಾರ್ಲ್ಸ್ III

ಈ ಮೊದಲು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಯುಎಸ್ ಉಪಾಧ್ಯಕ್ಷ ಕಮಲಾ ಹ್ಯಾರಿಸ್, ಯುಎಸ್ ಎಂಪಿ ರಾಜಾ ಕೃಷ್ಣಮೂರ್ತಿ, ರೋ ಖನ್ನಾ, ಪ್ರಮೀಳಾ ಜೈಪಾಲ್, ಥಾನೇದಾರ್, ಮುಂತಾದ ಅನೇಕ ಹೆಸರುಗಳಿವೆ.

ಭಾರತೀಯರ ಪ್ರಭಾವವನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಥರ್ಮನ್ ಷಣ್ಮುಗರತ್ನಂ ಅವರ ಹೆಸರೂ ಸೇರ್ಪಡೆಯಾಗಿದೆ. ಅವರ ಅಜ್ಜ 19 ನೇ ಶತಮಾನದಲ್ಲಿ ತಮಿಳುನಾಡಿನಿಂದ ವಲಸೆ ಬಂದು ಸಿಂಗಾಪುರದಲ್ಲಿ ನೆಲೆಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!