AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Back To India: ಅಮೆರಿಕದಲ್ಲಿ ಮುಂದುವರಿದ ಜನಾಂಗೀಯ ನಿಂದನೆ; ಭಾರತ ಮೂಲದ ಸಂಸದೆಗೆ ಅವಮಾನ

‘ನೀನು ನಿನ್ನ ದೇಶಕ್ಕೆ ವಾಪಸ್ ಹೋಗದಿದ್ದರೆ ಇಲ್ಲಿ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ’ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ.

Go Back To India: ಅಮೆರಿಕದಲ್ಲಿ ಮುಂದುವರಿದ ಜನಾಂಗೀಯ ನಿಂದನೆ; ಭಾರತ ಮೂಲದ ಸಂಸದೆಗೆ ಅವಮಾನ
ಜನಾಂಗೀಯ ನಿಂದನೆಗೆ ಒಳಗಾದ ಅಮೆರಿಕದ ಸಂಸದೆ ಪ್ರಮೀಳ
TV9 Web
| Edited By: |

Updated on: Sep 09, 2022 | 4:14 PM

Share

ಬೆಂಗಳೂರು: ಅಮೆರಿಕದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತೀಯರನ್ನು ನಿಂದಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಅಮೆರಿಕದ ಜನಪ್ರತಿನಿಧಿ (Congresswoman) ಪ್ರಮೀಳ ಜಯಪಾಲ್ ಸಹ ಇಂಥದ್ದೇ ಅವಮಾನವನ್ನು ಅನುಭವಿಸಿದ್ದಾರೆ. ಚೆನ್ನೈನಲ್ಲಿ ಜನಿಸಿದ ಜಯಪಾಲ್ ತಮ್ಮ ಅನುಭವವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಅವರಿಗೆ ಆಡಿಯೊ ಮೆಸೇಜ್ ಮೂಲಕ ವ್ಯಕ್ತಿಯೊಬ್ಬರು ಕಳಿಸಿದ್ದ ವಾಯ್ಸ್ ಮೆಸೇಜ್ ಟ್ವೀಟ್ ಮಾಡಿದ್ದಾರೆ. ಪ್ರಮೀಳ ಜಯಪಾಲ್ ಅವರು ಅಮೆರಿಕದ ಪ್ರಜಾಪ್ರತಿನಿಧಿ ಸಭೆಯಲ್ಲಿ ಸೀಟಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಅಸಭ್ಯ ಮತ್ತು ಅಶ್ಲೀಲ ನಿಂದನೆ ಇದ್ದ ಕಾರಣ ಆಡಿಯೊ ಮೆಸೇಜ್​ ಅನ್ನು ಹಲವು ಕಡೆ ಮ್ಯೂಟ್ ಮಾಡಲಾಗಿದೆ. ‘ನೀನು ನಿನ್ನ ದೇಶಕ್ಕೆ ವಾಪಸ್ ಹೋಗದಿದ್ದರೆ ಇಲ್ಲಿ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ’ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ‘ಸಾಮಾನ್ಯವಾಗಿ ರಾಜಕೀಯ ನಾಯಕರು ತಮಗೆ ಆದ ಅವಮಾನವನ್ನು ಹಂಚಿಕೊಳ್ಳುವುದಿಲ್ಲ. ಆದರೆ ನಾನು ಈ ವಿಷಯವನ್ನು ಬಹಿರಂಗಪಡಿಸಲು ನಿರ್ಧರಿಸಿದೆ. ಏಕೆಂದರೆ ಹಿಂಸಾಚಾರವನ್ನು ಸಾಮಾನ್ಯ ಸ್ಥಿತಿ ಎಂದು ಒಪ್ಪಿಕೊಳ್ಳಲು ಆಗುವುದಿಲ್ಲ’ ಎಂದು ಡೆಮಾಕ್ರಟಿಕ್ ಪಕ್ಷದ ನಾಯಕಿ ಟ್ವೀಟ್​ನಲ್ಲಿ ಹೇಳಿದ್ದಾರೆ.

ಸೀಟಲ್​ನಲ್ಲಿರುವ ಅವರ ಮನೆಯ ಎದುರು ಪಿಸ್ತೂಲ್​ನೊಂದಿಗೆ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದ. ನಂತರ ಪೊಲೀಸರು ಅವನನ್ನು ಬಂಧಿಸಿದ್ದರು. ಇದು ಒಂದು ತಿಂಗಳಲ್ಲಿ ಅಮೆರಿಕದಲ್ಲಿ ಭಾರತ ಮೂಲದವರ ಮೇಲೆ ನಡೆಯುತ್ತಿರುವ ಮೂರನೇ ಜನಾಂಗೀಯ ನಿಂದನೆ ಪ್ರಕರಣವಾಗಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಳೆದ ಆಗಸ್ಟ್ 21ರಂದು ಭಾರತ ಮೂಲದ ಕೃಷ್ಣನ್ ಜಯರಾಮನ್ ಎನ್ನುವವರ ಮೇಲೆ ಇದೇ ರೀತಿಯ ಜನಾಂಗೀಯ ನಿಂದನೆ, ದಾಳಿ ನಡೆದಿತ್ತು. ಈ ಘಟನೆಯಾದ ಒಂದು ದಿನದ ನಂತರ ಅಮೆರಿಕದ ಡಲ್ಲಾಸ್​ ನಗರದಲ್ಲಿ ಭಾರತ ಮೂಲದ ಮಹಿಳೆಯ ಮೇಲೆ ಜನಾಂಗೀಯ ನಿಂದನೆ ವರದಿಯಾಗಿತ್ತು.

ಇದನ್ನೂ ಓದಿ: Racial Abuse: ಅಮೆರಿಕದಲ್ಲಿ ಮತ್ತೆ ಭಾರತೀಯನ ಜನಾಂಗೀಯ ನಿಂದನೆ, ಕೊಳಕ ಹಿಂದೂ ಪದ ಬಳಕೆಗೆ ವ್ಯಾಪಕ ಆಕ್ರೋಶ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್