AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ವಾಷಿಂಗ್ಟನ್ ರೆಸ್ಟೊರೆಂಟ್‌ನ ಹೊರಗೆ ದಾಳಿ; ಭಾರತ ಮೂಲದ ವ್ಯಕ್ತಿ ಸಾವು

ತನಿಖಾಧಿಕಾರಿಗಳ ಪ್ರಕಾರ, ಫೆಬ್ರವರಿ 2 ರಂದು 15 ನೇ ಸ್ಟ್ರೀಟ್ ನಾರ್ತ್‌ವೆಸ್ಟ್‌ನ 1100 ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು ಬೆಳಿಗ್ಗೆ 2 ಗಂಟೆಯ ಸುಮಾರಿಗೆ ಶೋಟೊ ರೆಸ್ಟೋರೆಂಟ್‌ ಹೊರಗೆ ನಡೆದ ಘಟನೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ವಿವೇಕ್ ತನೇಜಾ ಮತ್ತು ಅಪರಿಚಿತ ವ್ಯಕ್ತಿ ಜತೆ ನಡೆದ ವಾಗ್ವಾದ, ಹಲ್ಲೆಗೆ ತಿರುಗಿದ್ದು ಈ ಜಗಳದಲ್ಲಿ ವಿವೇಕ್ ಗಂಭೀರ ಗಾಯಗೊಂಡಿದ್ದರು. ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಅಮೆರಿಕದ ವಾಷಿಂಗ್ಟನ್ ರೆಸ್ಟೊರೆಂಟ್‌ನ ಹೊರಗೆ ದಾಳಿ; ಭಾರತ ಮೂಲದ ವ್ಯಕ್ತಿ ಸಾವು
ವಿವೇಕ್ ತನೇಜಾ
ರಶ್ಮಿ ಕಲ್ಲಕಟ್ಟ
|

Updated on: Feb 10, 2024 | 2:20 PM

Share

ವಾಷಿಂಗ್ಟನ್ ಫೆಬ್ರುವರಿ 10: ಅಮೆರಿಕದ ವಾಷಿಂಗ್ಟನ್ (Washington) ರೆಸ್ಟೊರೆಂಟ್‌ನ ಹೊರಗೆ ನಡೆದ ದಾಳಿಯಲ್ಲಿ 41 ವರ್ಷದ ಭಾರತ ಮೂಲದ ವ್ಯಕ್ತಿಯೊಬ್ಬರು(Indian-origin)  ಸಾವಿಗೀಡಾಗಿದ್ದಾರೆ. ವಾಷಿಂಗ್ಟನ್ ಡೌನ್‌ಟೌನ್‌ನಲ್ಲಿರುವ ರೆಸ್ಟೋರೆಂಟ್‌ನ ಹೊರಗೆ ನಡೆದ ವಾಗ್ವಾದದ ಸಂದರ್ಭದಲ್ಲಿ ಈ ವ್ಯಕ್ತಿ ತೀವ್ರ ಗಾಯಗೊಂಡಿದ್ದರು. ತನಿಖಾಧಿಕಾರಿಗಳ ಪ್ರಕಾರ, ಫೆಬ್ರವರಿ 2 ರಂದು 15 ನೇ ಸ್ಟ್ರೀಟ್ ನಾರ್ತ್‌ವೆಸ್ಟ್‌ನ 1100 ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು ಬೆಳಿಗ್ಗೆ 2 ಗಂಟೆಯ ಸುಮಾರಿಗೆ ಶೋಟೊ ರೆಸ್ಟೋರೆಂಟ್‌ (Shoto Restaurant) ಹೊರಗೆ ನಡೆದ ಘಟನೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಅಧಿಕಾರಿಗಳು ಬಂದಾಗ ಅವರಿಗೆ ಪಾದಚಾರಿ ಮಾರ್ಗದಲ್ಲಿ ಭಾರತೀಯ ವಿವೇಕ್ ತನೇಜಾ ಬಿದ್ದಿರುವುದು ಕಾಣಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಪ್ರಾಥಮಿಕ ತನಿಖೆಯಲ್ಲಿ ತನೇಜಾ ಮತ್ತು ಅಪರಿಚಿತ ವ್ಯಕ್ತಿ ಜಗಳವಾಡಿದ್ದು ಅದು ಹಲ್ಲೆಗೆ ತಿರುಗಿದೆ ಎಂದು ಸಿಬಿಎಸ್‌ನೊಂದಿಗೆ ಸಂಯೋಜಿತವಾಗಿರುವ ವಾಷಿಂಗ್ಟನ್,ಡಿಸಿಯಲ್ಲಿನ ದೂರದರ್ಶನ ಕೇಂದ್ರವಾದ WUSA ಹೇಳಿದೆ. ತನೇಜಾ ಕೆಳಗೆ ಬಿದ್ದಿದ್ದು ಆತನ ತಲೆ ಪಾದಚಾರಿ ಮಾರ್ಗಕ್ಕೆ ಬಡಿದಿತ್ತು. ತೀವ್ರ ಗಾಯಗೊಂಡಿದ್ದ ಅವರು ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಈಗ ತನೇಜಾ ಅವರ ಸಾವನ್ನು ಕೊಲೆ ಎಂದು ತನಿಖೆ ನಡೆಸುತ್ತಿದ್ದಾರೆ.

ತನೇಜಾ ಅವರು ಡೈನಮೋ ಟೆಕ್ನಾಲಜೀಸ್‌ನ ಸಹ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದರು. ಕಂಪನಿಯ ವೆಬ್‌ಸೈಟ್‌ನ ಪ್ರಕಾರ, ತನೇಜಾ ಅವರು ಡೈನಮೋದ ಕಾರ್ಯತಂತ್ರದ, ಬೆಳವಣಿಗೆ ಮತ್ತು ಪಾಲುದಾರಿಕೆಯ ಉಪಕ್ರಮಗಳನ್ನು ಮುನ್ನಡೆಸುತ್ತಾರೆ. ತನೇಜಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ.

ಫೆಬ್ರವರಿ 2 ರಂದು ನಾರ್ತ್‌ವೆಸ್ಟ್‌ನ 15 ನೇ ಸ್ಟ್ರೀಟ್‌ನ 1100 ಬ್ಲಾಕ್‌ನಲ್ಲಿ ಸಂಭವಿಸಿದ ನರಹತ್ಯೆಯಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಯನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ (MPD) ಸಾರ್ವಜನಿಕರ ಸಹಾಯವನ್ನು ಕೋರುತ್ತಿದೆ. ಎಂಪಿಡಿ ದಾಖಲೆಗಳ ಪ್ರಕಾರ, ದಾಳಿ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಬಂದಾಗ ಮಾರಣಾಂತಿಕ ಗಾಯಗಳಿಂದ ಬಳಲುತ್ತಿರುವ ವ್ಯಕ್ತಿಯನ್ನು ಕಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದರು. ಆ ವ್ಯಕ್ತಿ ಫೆಬ್ರವರಿ 7 ರಂದು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ:ಷಿಕಾಗೋದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿ ಮೇಲೆ ದಾಳಿ; ಅಟ್ಟಾಡಿಸಿ ಹೊಡೆದು ಫೋನ್ ದೋಚಿದ ದುಷ್ಕರ್ಮಿಗಳು

ಜಿಲ್ಲೆಯಲ್ಲಿನ ಪ್ರತಿ ನರಹತ್ಯೆಗೆ ಜವಾಬ್ದಾರರಾಗಿರುವ ವ್ಯಕ್ತಿ ಅಥವಾ ವ್ಯಕ್ತಿಗಳ ಬಂಧನ ಮತ್ತು ಶಿಕ್ಷೆಗೆ ಕಾರಣವಾಗುವ ಮಾಹಿತಿಯನ್ನು ಒದಗಿಸುವ ವ್ಯಕ್ತಿಗಳಿಗೆ MPD ಬಹುಮಾನವನ್ನು ನೀಡುವುದಾಗಿ ಘೋಷಿಸಿದೆ.

ಈ ವಾರದ ಆರಂಭದಲ್ಲಿ, ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿ ಸೈಯದ್ ಮಜಾಹಿರ್ ಅಲಿ ಮೇಲೆ ದಾಳಿ ನಡೆದಿತ್ತು. ಇದಕ್ಕೂ ಮೊದಲು, ಜಾರ್ಜಿಯಾ ರಾಜ್ಯದ ಲಿಥೋನಿಯಾ ನಗರದಲ್ಲಿ 25 ವರ್ಷದ ಭಾರತೀಯ ವಿದ್ಯಾರ್ಥಿ ವಿವೇಕ್ ಸೈನಿ ಮೇಲೆ ನಿರಾಶ್ರಿತ ಮಾದಕ ವ್ಯಸನಿಯಿಂದ ಮಾರಣಾಂತಿಕ ಹಲ್ಲೆ ನಡೆಸಲಾಯಿತು. ಈ ವರ್ಷ ಅಮೆರಿಕದಲ್ಲಿ ನಾಲ್ವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾಪೆ ಎಂದು ವರದಿಯಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ