AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ […]

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ
ಆಯೇಷಾ ಬಾನು
|

Updated on:Aug 05, 2020 | 9:11 AM

Share

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ ಬಳಿಯ ಕಾಲುವೆಯೊಂದರ ಬಳಿ ಹಾಕಲಾಗಿದ್ದು, ಅದನ್ನು ದಾರಿಹೋಕರು ಪತ್ತೆ ಹಚ್ಚಿ, ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಶರ್ಮಿಷ್ಠಾಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಫಾರ್ಮಸಿಸ್ಟ್ ಮತ್ತು ಸಂಶೋಧಕರಾಗಿ ಕೆಲಸ ಮಾಡುತ್ತಿರುವುದಾಗಿ ಫಾಕ್ಸ್ 4 ನ್ಯೂಸ್ ವರದಿ ಮಾಡಿದೆ. ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Published On - 9:05 am, Wed, 5 August 20

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ