AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Danish Siddiqui: ಅಫ್ಘಾನ್ ಸೇನೆ- ತಾಲಿಬಾನ್ ಉಗ್ರರ ಸಂಘರ್ಷದಲ್ಲಿ ಭಾರತದ ಫೋಟೋ ಜರ್ನಲಿಸ್ಟ್​ ಡ್ಯಾನಿಶ್​ ಸಿದ್ಧಿಕಿ ಹತ್ಯೆ

ಅಫ್ಘಾನಿಸ್ತಾನ ಸೇನೆ ಮತ್ತು ತಾಲಿಬಾನ್ ಉಗ್ರರ ನಡುವೆ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತದ ಫೋಟೋಜರ್ನಲಿಸ್ಟ್ ಡ್ಯಾನಿಶ್​ ಸಿದ್ಧಿಕಿ ಹತ್ಯೆಗೀಡಾಗಿದ್ದಾರೆ.

Danish Siddiqui: ಅಫ್ಘಾನ್ ಸೇನೆ- ತಾಲಿಬಾನ್ ಉಗ್ರರ ಸಂಘರ್ಷದಲ್ಲಿ ಭಾರತದ ಫೋಟೋ ಜರ್ನಲಿಸ್ಟ್​ ಡ್ಯಾನಿಶ್​ ಸಿದ್ಧಿಕಿ ಹತ್ಯೆ
ಡ್ಯಾನಿಶ್ ಸಿದ್ಧಿಕಿ
TV9 Web
| Edited By: |

Updated on:Jul 16, 2021 | 2:23 PM

Share

ನವದೆಹಲಿ: ಅಫ್ಘಾನಿಸ್ತಾನದಲ್ಲಿ ನಡೆದ ಸಂಘರ್ಷದಲ್ಲಿ ಭಾರತದ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್​ ಡ್ಯಾನಿಶ್ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ. ಅಫ್ಘಾನ್​ನ ಕಂದಹಾರ್ ನಗರದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ವರದಿ ಮಾಡಲು ತೆರಳಿದ್ದರು. ಅಫ್ಘಾನಿಸ್ತಾನ ಸೇನೆಯ ವಿಶೇಷ ದಳ ಮತ್ತು ತಾಲಿಬಾನ್ ಉಗ್ರರ ನಡುವೆ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ ಡ್ಯಾನಿಶ್​ ಸಿದ್ಧಿಕಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಡ್ಯಾನಿಶ್ ಸಿದ್ಧಿಕಿ ಸಾವಿಗೆ ಅಫ್ಘಾನಿಸ್ತಾನದ ಭಾರತೀಯ ರಾಯಭಾರಿ ಫರೀದ್ ಮಮುಂಡ್ಜೆ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತನಂತಿದ್ದ ಡ್ಯಾನಿಶ್​ ಸಿದ್ಧಿಕಿಯನ್ನು ನಿನ್ನೆ ಹತ್ಯೆ ಮಾಡಲಾಗಿದೆ. ಭಾರತೀಯ ಪತ್ರಕರ್ತನಾಗಿದ್ದ ಈತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು. ಅಫ್ಘಾನ್ ಸೇನಾಪಡೆಯ ಜೊತೆಗೆ ವರದಿಗೆ ಹೋಗಿದ್ದಾಗ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಆತ ಕಬೂಲ್​ಗೆ ತೆರಳುವ 2 ವಾರಗಳಿಗೂ ಮೊದಲು ನಾನು ಆತನನ್ನು ಭೇಟಿಯಾಗಿದ್ದೆ. ಆತನ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

Reuter ಸುದ್ದಿ ಮಾಧ್ಯಮದಲ್ಲಿ ಫೋಟೋ ಜರ್ನಲಿಸ್ಟ್ ಆಗಿದ್ದ ಡ್ಯಾನಿಶ್​ ಸಿದ್ಧಿಕಿ ಅಫ್ಘಾನಿಸ್ತಾನದ ಸೇನಾ ಪಡೆ ಮತ್ತು ತಾಲಿಬಾನ್ ನಡುವೆ ನಡೆಯುತ್ತಿದ್ದ ದಾಳಿಯ ವೇಳೆ ಅಲ್ಲಿದ್ದರು. 2018ರಲ್ಲಿ ಡ್ಯಾನಿಶ್​ ರೋಹಿಂಗ್ಯ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ತೆಗೆದ ಫೋಟೋ ಮತ್ತು ಡಾಕ್ಯುಮೆಂಟರಿಗೆ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ಅಫ್ಘಾನ್ ಸೇನಾಪಡೆ ಮತ್ತು ತಾಲಿಬಾನ್ ಉಗ್ರರ ನಡುವಿನ ಸಂಘರ್ಷದ ಬಗ್ಗೆ ವಿಶೇಷ ವರದಿ ಮಾಡಲು ತೆರಳಿದ್ದಾಗ ನಿನ್ನೆ ರಾತ್ರಿ ಡ್ಯಾನಿಶ್ ಸಿದ್ಧಿಕಿ ಹತ್ಯೆಗೀಡಾಗಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ಪೌರತ್ವ ನಿಷೇಧ ಕಾಯ್ದೆಯ ವೇಳೆ ನಡೆದ ಗಲಭೆ ಸಂದರ್ಭದಲ್ಲೂ ಡ್ಯಾನಿಶ್ ಸಿದ್ಧಿಕಿ ಸೆರೆಹಿಡಿದಿದ್ದ ಫೋಟೋಗಳು ಮೆಚ್ಚುಗೆಗೆ ಪಾತ್ರವಾಗಿದ್ದವು.

(Indian photojournalist Danish Siddiqui killed in Afghanistan’s Kandahar Clashes)

Published On - 2:21 pm, Fri, 16 July 21

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !