Danish Siddiqui: ಅಫ್ಘಾನ್ ಸೇನೆ- ತಾಲಿಬಾನ್ ಉಗ್ರರ ಸಂಘರ್ಷದಲ್ಲಿ ಭಾರತದ ಫೋಟೋ ಜರ್ನಲಿಸ್ಟ್​ ಡ್ಯಾನಿಶ್​ ಸಿದ್ಧಿಕಿ ಹತ್ಯೆ

ಅಫ್ಘಾನಿಸ್ತಾನ ಸೇನೆ ಮತ್ತು ತಾಲಿಬಾನ್ ಉಗ್ರರ ನಡುವೆ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತದ ಫೋಟೋಜರ್ನಲಿಸ್ಟ್ ಡ್ಯಾನಿಶ್​ ಸಿದ್ಧಿಕಿ ಹತ್ಯೆಗೀಡಾಗಿದ್ದಾರೆ.

Danish Siddiqui: ಅಫ್ಘಾನ್ ಸೇನೆ- ತಾಲಿಬಾನ್ ಉಗ್ರರ ಸಂಘರ್ಷದಲ್ಲಿ ಭಾರತದ ಫೋಟೋ ಜರ್ನಲಿಸ್ಟ್​ ಡ್ಯಾನಿಶ್​ ಸಿದ್ಧಿಕಿ ಹತ್ಯೆ
ಡ್ಯಾನಿಶ್ ಸಿದ್ಧಿಕಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 16, 2021 | 2:23 PM

ನವದೆಹಲಿ: ಅಫ್ಘಾನಿಸ್ತಾನದಲ್ಲಿ ನಡೆದ ಸಂಘರ್ಷದಲ್ಲಿ ಭಾರತದ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಫೋಟೋ ಜರ್ನಲಿಸ್ಟ್​ ಡ್ಯಾನಿಶ್ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ. ಅಫ್ಘಾನ್​ನ ಕಂದಹಾರ್ ನಗರದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ವರದಿ ಮಾಡಲು ತೆರಳಿದ್ದರು. ಅಫ್ಘಾನಿಸ್ತಾನ ಸೇನೆಯ ವಿಶೇಷ ದಳ ಮತ್ತು ತಾಲಿಬಾನ್ ಉಗ್ರರ ನಡುವೆ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ ಡ್ಯಾನಿಶ್​ ಸಿದ್ಧಿಕಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಡ್ಯಾನಿಶ್ ಸಿದ್ಧಿಕಿ ಸಾವಿಗೆ ಅಫ್ಘಾನಿಸ್ತಾನದ ಭಾರತೀಯ ರಾಯಭಾರಿ ಫರೀದ್ ಮಮುಂಡ್ಜೆ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತನಂತಿದ್ದ ಡ್ಯಾನಿಶ್​ ಸಿದ್ಧಿಕಿಯನ್ನು ನಿನ್ನೆ ಹತ್ಯೆ ಮಾಡಲಾಗಿದೆ. ಭಾರತೀಯ ಪತ್ರಕರ್ತನಾಗಿದ್ದ ಈತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು. ಅಫ್ಘಾನ್ ಸೇನಾಪಡೆಯ ಜೊತೆಗೆ ವರದಿಗೆ ಹೋಗಿದ್ದಾಗ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಆತ ಕಬೂಲ್​ಗೆ ತೆರಳುವ 2 ವಾರಗಳಿಗೂ ಮೊದಲು ನಾನು ಆತನನ್ನು ಭೇಟಿಯಾಗಿದ್ದೆ. ಆತನ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

Reuter ಸುದ್ದಿ ಮಾಧ್ಯಮದಲ್ಲಿ ಫೋಟೋ ಜರ್ನಲಿಸ್ಟ್ ಆಗಿದ್ದ ಡ್ಯಾನಿಶ್​ ಸಿದ್ಧಿಕಿ ಅಫ್ಘಾನಿಸ್ತಾನದ ಸೇನಾ ಪಡೆ ಮತ್ತು ತಾಲಿಬಾನ್ ನಡುವೆ ನಡೆಯುತ್ತಿದ್ದ ದಾಳಿಯ ವೇಳೆ ಅಲ್ಲಿದ್ದರು. 2018ರಲ್ಲಿ ಡ್ಯಾನಿಶ್​ ರೋಹಿಂಗ್ಯ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ತೆಗೆದ ಫೋಟೋ ಮತ್ತು ಡಾಕ್ಯುಮೆಂಟರಿಗೆ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ಅಫ್ಘಾನ್ ಸೇನಾಪಡೆ ಮತ್ತು ತಾಲಿಬಾನ್ ಉಗ್ರರ ನಡುವಿನ ಸಂಘರ್ಷದ ಬಗ್ಗೆ ವಿಶೇಷ ವರದಿ ಮಾಡಲು ತೆರಳಿದ್ದಾಗ ನಿನ್ನೆ ರಾತ್ರಿ ಡ್ಯಾನಿಶ್ ಸಿದ್ಧಿಕಿ ಹತ್ಯೆಗೀಡಾಗಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ಪೌರತ್ವ ನಿಷೇಧ ಕಾಯ್ದೆಯ ವೇಳೆ ನಡೆದ ಗಲಭೆ ಸಂದರ್ಭದಲ್ಲೂ ಡ್ಯಾನಿಶ್ ಸಿದ್ಧಿಕಿ ಸೆರೆಹಿಡಿದಿದ್ದ ಫೋಟೋಗಳು ಮೆಚ್ಚುಗೆಗೆ ಪಾತ್ರವಾಗಿದ್ದವು.

(Indian photojournalist Danish Siddiqui killed in Afghanistan’s Kandahar Clashes)

Published On - 2:21 pm, Fri, 16 July 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್