AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಡಿತನದ ಕೃತ್ಯ; ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೋ ಕೊಲೆ ಪ್ರಯತ್ನಕ್ಕೆ ಪಿಎಂ ನರೇಂದ್ರ ಮೋದಿ ಖಂಡನೆ

ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೋ ಅವರ ಹತ್ಯೆ ಯತ್ನವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ಇದೊಂದು ಹೇಡಿತನದ ಕೃತ್ಯವಾಗಿದೆ ಎಂದು ಹೇಳಿದ್ದಾರೆ. ಬುಧವಾರ ಸ್ಲೋವಾಕ್ ಪಿಎಂ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಹೇಡಿತನದ ಕೃತ್ಯ; ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೋ ಕೊಲೆ ಪ್ರಯತ್ನಕ್ಕೆ ಪಿಎಂ ನರೇಂದ್ರ ಮೋದಿ ಖಂಡನೆ
ಸ್ಲೊವೊಕಿಯಾ ಪ್ರಧಾನಿ ಮೇಲೆ ಗುಂಡು ಹಾರಿಸಿದವನನ್ನು ಹಿಡಿದಿರುವ ಪೊಲೀಸರು
ಸುಷ್ಮಾ ಚಕ್ರೆ
|

Updated on: May 16, 2024 | 12:24 PM

Share

ನವದೆಹಲಿ: “ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ (Robert Fico) ಅವರ ಮೇಲೆ ನಡೆದ ಗುಂಡಿನ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಾನು ಈ ಹೇಡಿತನದ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಬರ್ಟ್ ಫಿಕೋ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಭಾರತವು ಸ್ಲೋವಾಕ್ ಗಣರಾಜ್ಯದ ಜನರೊಂದಿಗೆ ಸದಾ ಇರಲಿದೆ” ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್ ಮಾಡಿದ್ದಾರೆ.

ಸ್ಲೋವಾಕಿಯಾದಲ್ಲಿ 4 ಬಾರಿ ಪ್ರಧಾನ ಮಂತ್ರಿಯಾಗಿದ್ದ ರಾಬರ್ಟ್ ಫಿಕೊ ಅವರ ಮೇಲೆ ಬುಧವಾರ ಹ್ಯಾಂಡ್ಲೋವಾದಲ್ಲಿ ಗುಂಡು ಹಾರಿಸಿದ ನಂತರ ತೀವ್ರವಾಗಿ ಗಾಯಗೊಂಡಿದ್ದರು. 59 ವರ್ಷದ ರಾಬರ್ಟ್ ಫಿಕೋ ಅವರ ಹೊಟ್ಟೆಗೆ ತೀವ್ರವಾದ ಗಾಯವಾಗಿದ್ದು, ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ಸ್ಥಳದಲ್ಲಿದ್ದ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ

ನಿನ್ನೆ ಕ್ಯಾಬಿನೆಟ್ ಸಭೆ ಬಳಿಕ ಕಾರು ಹತ್ತಲು ಹೊರಗೆ ಬಂದ ರಾಬರ್ಟ್ ಫಿಕೊ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಅವರ ಮೇಲೆ ಅನೇಕ ಬಾರಿ ಗುಂಡು ಹಾರಿಸಲಾಯಿತು. ಇದರಿಂದ ಅವರು ಗಂಭೀರವಾಗಿ ಗಾಯಗೊಂಡರು. ಇದೀಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಗೆ ಯುರೋಪ್ ಬೆಚ್ಚಿಬಿದ್ದಿದೆ.

ಈ ಘಟನೆಯು ಹ್ಯಾಂಡ್ಲೋವಾ ಪಟ್ಟಣದ ಸಾಂಸ್ಕೃತಿಕ ಕೇಂದ್ರದ ಹೊರಗೆ ನಡೆದಿದ್ದು, 5 ಬಾರಿ ಗುಂಡು ಹಾರಿಸಿದ ಕೂಡಲೆ ಪ್ರಧಾನಿ ರಾಬರ್ಟ್ ಫಿಕೋ ನೆಲದ ಮೇಲೆ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೂಡಲೆ ಅವರನ್ನು ಅಂಗರಕ್ಷಕರು ಕಾರಿನಲ್ಲಿ ಕೂರಿಸಿಕೊಂಡು ಹೋದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ಕರೆದೊಯ್ಯಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು