AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಎಂಬ ಕಾರಣಕ್ಕೆ ಲಂಡನ್ ಸ್ಕೂಲ್ ಆಫ್​ ಎಕನಾಮಿಕ್ಸ್​ ಚುನಾವಣೆಯಿಂದ ಅನರ್ಹಗೊಳಿಸಿದರು; ಭಾರತೀಯ ವಿದ್ಯಾರ್ಥಿ ಅಳಲು

ಲಂಡನ್​ ಸ್ಕೂಲ್ ಆಫ್​ ಎಕನಾಮಿಕ್ಸ್​​ನಲ್ಲಿ ಭಾರತ ವಿರೋಧಿ ಅಭಿಯಾನ ನಡೆಯುತ್ತಿದೆ ಎಂದು ಭಾರತ ಮೂಲದ ವಿದ್ಯಾರ್ಥಿಯೊಬ್ಬರು ಆರೋಪಿಸಿದ್ದಾರೆ.

ಹಿಂದೂ ಎಂಬ ಕಾರಣಕ್ಕೆ ಲಂಡನ್ ಸ್ಕೂಲ್ ಆಫ್​ ಎಕನಾಮಿಕ್ಸ್​ ಚುನಾವಣೆಯಿಂದ ಅನರ್ಹಗೊಳಿಸಿದರು; ಭಾರತೀಯ ವಿದ್ಯಾರ್ಥಿ ಅಳಲು
ಕರಣ್ ಕಟಾರಿಯಾImage Credit source: Twitter
ಗಣಪತಿ ಶರ್ಮಾ
|

Updated on: Apr 04, 2023 | 3:58 PM

Share

ಮುಖ್ಯಾಂಶಗಳು

  • ಲಂಡನ್​ ಸ್ಕೂಲ್ ಆಫ್​ ಎಕನಾಮಿಕ್ಸ್​​ನಲ್ಲಿ ಹಿಂದು ವಿರೋಧಿ ನಡೆ; ವಿದ್ಯಾರ್ಥಿ ಆರೋಪ.
  • ಹಿಂದೂ ಎಂಬ ಕಾರಣಕ್ಕೆ ವಿದ್ಯಾರ್ಥಿ ಸಂಘದ ಚುನಾವಣೆ ಸ್ಪರ್ಧಿಸದಂತೆ ತಡೆ.
  • ಹರಿಯಾಣ ಮೂಲದ ವಿದ್ಯಾರ್ಥಿ ಕರಣ್ ಕಟಾರಿಯಾ ಆರೋಪ.

ಲಂಡನ್: ಲಂಡನ್​ ಸ್ಕೂಲ್ ಆಫ್​ ಎಕನಾಮಿಕ್ಸ್​​ನಲ್ಲಿ (London School Of Economics) ಭಾರತ ವಿರೋಧಿ ಅಭಿಯಾನ ನಡೆಯುತ್ತಿದೆ ಎಂದು ಭಾರತ ಮೂಲದ ವಿದ್ಯಾರ್ಥಿಯೊಬ್ಬರು (Indian Student) ಆರೋಪಿಸಿದ್ದಾರೆ. ಭಾರತದ ವ್ಯಕ್ತಿ ಮತ್ತು ಹಿಂದೂ ಎಂಬ ಕಾರಣಕ್ಕಾಗಿ ಲಂಡನ್​ ಸ್ಕೂಲ್ ಆಫ್​ ಎಕನಾಮಿಕ್ಸ್​​ನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಕರಣ್ ಕಟಾರಿಯಾ ಎಂಬ ಹರಿಯಾಣ ಮೂಲದ ವಿದ್ಯಾರ್ಥಿ ದೂರಿದ್ದಾರೆ. ಕಟಾರಿಯಾ ಸದ್ಯ ಲಂಡನ್​ ಸ್ಕೂಲ್ ಆಫ್​ ಎಕನಾಮಿಕ್ಸ್​​ನಲ್ಲಿ ಕಾನೂನು ವಿಯಷದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾರೆ. ಪಾಲಕರ ಪ್ರೋತ್ಸಾಹದಿಂದ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಲು ಮುಂದಾಗಿದ್ದೆ. ಆದರೆ, ಆಧಾರರಹಿತ ಆರೋಪಗಳನ್ನು ಪರಿಗಣಿಸಿ ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದುರದೃಷ್ಟವಶಾತ್, ಭಾರತೀಯ-ಹಿಂದೂಗಳು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್​ನ ವಿದ್ಯಾರ್ಥಿ ಸಂಘದ ನೇತೃತ್ವ ವಹಿಸುವುದನ್ನು ಕೆಲವು ವ್ಯಕ್ತಿಗಳು ಸಹಿಸಲಿಲ್ಲ. ಪರಿಣಾಮವಾಗಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದರು ಎಂದು ಕಟಾರಿಯಾ ಹೇಳಿದ್ದಾರೆ.

ಸ್ನಾತಕೋತ್ತರ ಅಧ್ಯಯನವನ್ನು ಪ್ರಾರಂಭಿಸಿದ ಸಂದರ್ಭದಲ್ಲಿ, ವಿದ್ಯಾರ್ಥಿ ಕಲ್ಯಾಣಕ್ಕಾಗಿ ಶ್ರಮಿಸಲು ಹಾಗೂ ಮತ್ತಷ್ಟು ಕೊಡುಗೆ ನೀಡಲು ಪ್ರಾಮಾಣಿಕವಾಗಿ ಆಶಿಸಿದ್ದೆ. ಆದರೆ ಭಾರತೀಯ ಮತ್ತು ಹಿಂದೂ ಎಂಬ ಗುರುತಿನಿಂದಾಗಿ ನನ್ನ ವಿರುದ್ಧ ಉದ್ದೇಶಪೂರ್ವಕವಾಗಿ ಯೋಜಿತ ಅಭಿಯಾನವನ್ನು ಮಾಡಲಾಯಿತು. ಇದರಿಂದ ನನ್ನ ಕನಸುಗಳು ಭಗ್ನಗೊಂಡವು ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮಧ್ಯಂತರ ಜಾಮೀನು

22 ವರ್ಷದ ಕರಣ್ ಕಟಾರಿಯಾ ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯುಳ್ಳಬವರಾಗಿದ್ದು, ಅವರ ಕುಟುಂಬದಲ್ಲೇ ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣ ಪಡೆಯುತ್ತಿರುವ ಮೊದಲಿಗರಾಗಿದ್ದಾರೆ.

ದೇಶದ ಎಲ್ಲ ವಿದ್ಯಾರ್ಥಿಗಳಿಂದ ಹೆಚ್ಚಿನ ಬೆಂಬಲವನ್ನು ಪಡೆದಿದ್ದರೂ ಸಹ, ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚುನಾವಣೆಯಿಂದ ನನ್ನನ್ನು ಅನರ್ಹಗೊಳಿಸಲಾಯಿತು. ನನ್ನ ವಿರುದ್ಧ ಹೋಮೋಫೋಬಿಕ್, ಇಸ್ಲಾಮೋಫೋಬಿಕ್, ಕ್ವೀರ್ಫೋಬಿಕ್ ಮತ್ತು ಹಿಂದೂ ರಾಷ್ಟ್ರೀಯವಾದಿ ಎಂಬುದಾಗಿ ನನ್ನ ವಿರುದ್ಧ ಆರೋಪಗಳನ್ನು ಮಾಡಲಾಯಿತು ಎಂದು ಅವರು ಹೇಳಿದ್ದಾರೆ. ಈ ದ್ವೇಷದ ಅಭಿಯಾನವನ್ನು ಆರಂಭಿಸಿದ ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷಿಸುವ ಬದಲು ನನ್ನನ್ನೇ ಬಲಿಪಶು ಮಾಡಲಾಯಿತು ಎಂದು ಅವರು ಅಲವತ್ತುಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು