AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Crisis: ಕೀವ್​ನಿಂದ ಆಗಮಿಸುತ್ತಿದ್ದ ಭಾರತದ ವಿದ್ಯಾರ್ಥಿಗೆ ಗುಂಡು; ಆಸ್ಪತ್ರೆಗೆ ದಾಖಲು: ವಿಕೆ ಸಿಂಗ್ ಮಾಹಿತಿ

Russia Ukraine Crisis: ಕೀವ್​ನಿಂದ ಮರಳುತ್ತಿದ್ದ ಭಾರತದ ವಿದ್ಯಾರ್ಥಿಯೋರ್ವರಿಗೆ ಗುಂಡು ತಗುಲಿರುವ ಮಾಹಿತಿ ಲಭ್ಯವಾಗಿದೆ. ಅವರನ್ನು ಮರಳಿ ಕರೆದೊಯ್ಯಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಸಚಿವ ವಿಕೆ ಸಿಂಗ್ ತಿಳಿಸಿದ್ದಾರೆ.

Ukraine Crisis: ಕೀವ್​ನಿಂದ ಆಗಮಿಸುತ್ತಿದ್ದ ಭಾರತದ ವಿದ್ಯಾರ್ಥಿಗೆ ಗುಂಡು; ಆಸ್ಪತ್ರೆಗೆ ದಾಖಲು: ವಿಕೆ ಸಿಂಗ್ ಮಾಹಿತಿ
ವಿಕೆ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Mar 04, 2022 | 9:24 AM

Share

ರಷ್ಯಾ ಮತ್ತು ಉಕ್ರೇನ್ ಯುದ್ಧ (Russia Ukraine War) ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಭಾರತ ಯುದ್ಧಪೀಡಿತ ಸ್ಥಳಗಳಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ರಷ್ಯಾದ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದ. ಈ ಘಟನೆಯ ಬೆನ್ನಲ್ಲೇ ಇಂದು ಮತ್ತೋರ್ವ ವಿದ್ಯಾರ್ಥಿಗೆ ಗುಂಡು ತಗುಲಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರಾಗಿರುವ ಜನರಲ್ (ನಿವೃತ್ತ) ವಿಕೆ ಸಿಂಗ್ (General VK Singh) ಮಾಹಿತಿ ನೀಡಿದ್ದಾರೆ. ಪೋಲಂಡ್​ನಲ್ಲಿ ಅವರು ಎಎನ್​ಐನೊಂದಿಗೆ ಮಾತನಾಡಿದರು. ‘ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದ್ದು, ಆತ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ. ಅವರನ್ನು ಕೀವ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ’ ಎಂದು ವಿಕೆ ಸಿಂಗ್ ಹೇಳಿದ್ದಾರೆ.

‘ಭಾರತದ ರಾಯಭಾರ ಕಚೇರಿಯು ಈ ಹಿಂದೆ ಕೀವ್ ತೊರೆಯಬೇಕು ಎಂದು ತಿಳಿಸಿತ್ತು. ಯುದ್ಧದ ಸಂದರ್ಭದಲ್ಲಿ ಧರ್ಮ, ಜಾತೀಯತೆಯನ್ನು ನೋಡುವುದಿಲ್ಲ’ ಎಂದು ವಿಕೆ ಸಿಂಗ್ ಹೇಳಿದ್ದಾರೆ. ಪ್ರಸ್ತುತ ಉಕ್ರೇನ್​ನಲ್ಲಿನ ವಿದ್ಯಾರ್ಥಿಗಳು ಗಡಿ ಪ್ರದೇಶಗಳತ್ತ ತೆರಳಲು ಯತ್ನಿಸುತ್ತಿದ್ದಾರೆ. ನಾಲ್ವರು ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಎಂ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ — ಉಕ್ರೇನ್‌ ಗಡಿ ದೇಶಗಳಲ್ಲಿ ಆಪರೇಷನ್ ಗಂಗಾದ ಜವಾಬ್ದಾರಿ ಹೊತ್ತಿದ್ದಾರೆ.

ಈ ಕುರಿತು ಎಎನ್​ಐ ಟ್ವೀಟ್ ಇಲ್ಲಿದೆ:

ನಿನ್ನೆ ಭಾರತವು ಮಾಹಿತಿ ನೀಡಿ ಉಕ್ರೇನ್​ನಲಿದ್ದ 20,000 ಭಾರತದ ನಾಗರಿಕರಲ್ಲಿ 17,000 ಜನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಿದ್ದಾರೆ ಎಂದು ಹೇಳಿತ್ತು. ಗಡಿ ಪ್ರದೇಶ ತಲುಪಿದ ಭಾರತದ ವಿದ್ಯಾರ್ಥಿಗಳನ್ನು ‘ಆಪರೇಷನ್ ಗಂಗಾ’ ಯೋಜನೆಯ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. ಇದಕ್ಕೆ ಭಾರತೀಯ ವಾಯುಪಡೆಯೂ ಕೈಜೋಡಿಸಿದೆ.

ರಷ್ಯಾ- ಉಕ್ರೇನ್ ಕದನದ ಲೈವ್ ಅಪ್ಡೇಟ್ಸ್ ಇಲ್ಲಿ ಲಭ್ಯವಿದೆ: Russia Ukraine War Live: ಯುರೋಪ್​ ಸುರಕ್ಷತೆಗೆ ಪುಟಿನ್ ಬೆದರಿಕೆ; ಪರಮಾಣು ಸ್ಥಾವರದ ಮೇಲೆ ದಾಳಿ ಬೆನ್ನಲ್ಲೇ ಇಂಗ್ಲೆಂಡ್ ಪ್ರಧಾನಿ ಆಕ್ರೋಶ

ಇದನ್ನೂ ಓದಿ:

Zaporizhzhia NPP: ರಷ್ಯಾ ದಾಳಿಯಿಂದ ಜಪೋರಿಝಿಯಾ ಪರಮಾಣು ಸ್ಥಾವರಕ್ಕೆ ಬೆಂಕಿ; ಸ್ಫೋಟಗೊಂಡರೆ ಸಂಪೂರ್ಣ ಯುರೋಪ್​ಗೆ ಅಪಾಯ

ಫ್ರೆಂಚ್ ಅಧ್ಯಕ್ಷರ ಪ್ರಕಾರ ಪುಟಿನ್ ಯುದ್ಧ ನಿಲ್ಲಿಸುವ ಸೂಚನೆಯೇ ಇಲ್ಲ, ಮುಂಬರುವ ದಿನಗಳು ಇನ್ನಷ್ಟು ಭೀಕರವಾಗಿರಲಿವೆ!

Published On - 9:07 am, Fri, 4 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ