AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಅಮೆರಿಕದಲ್ಲಿ ಭಾರತೀಯ ಪ್ರಜೆಯನ್ನು ಗುರಿಯಾಗಿಸಿ ಕೊಲ್ಲುವ ಯತ್ನ ನಡೆದಿದೆ. 24 ವರ್ಷದ ವಿದ್ಯಾರ್ಥಿಯೊಬ್ಬನನ್ನು ಜಿಮ್​ನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸದ್ಯ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಳೆದ ಭಾನುವಾರ ವರುಣ್ ಇಂಡಿಯಾನಾದ ವಾಲ್ಪಾರೈಸೊದಲ್ಲಿ ಸಾರ್ವಜನಿಕ ಜಿಮ್‌ನಲ್ಲಿದ್ದಾಗ ಈ ಘಟನೆ ನಡೆದಿದೆ.

ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Nov 01, 2023 | 9:44 AM

Share

ಅಮೆರಿಕದಲ್ಲಿ ಭಾರತೀಯ ಪ್ರಜೆಯನ್ನು ಗುರಿಯಾಗಿಸಿ ಕೊಲ್ಲುವ ಯತ್ನ ನಡೆದಿದೆ. 24 ವರ್ಷದ ವಿದ್ಯಾರ್ಥಿಯೊಬ್ಬನನ್ನು ಜಿಮ್​ನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸದ್ಯ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಳೆದ ಭಾನುವಾರ ವರುಣ್ ಇಂಡಿಯಾನಾದ ವಾಲ್ಪಾರೈಸೊದಲ್ಲಿ ಸಾರ್ವಜನಿಕ ಜಿಮ್‌ನಲ್ಲಿದ್ದಾಗ ಈ ಘಟನೆ ನಡೆದಿದೆ.

ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ಜೋರ್ಡಾನ್ ಆಂಡ್ರೇಡ್ ಎಂದು ಗುರುತಿಸಲಾಗಿದೆ. ಆಂಡ್ರೇಡ್ ಸಾರ್ವಜನಿಕ ಜಿಮ್​ನಲ್ಲಿ ವರುಣ್​ಗೆ ಹಲವು ಬಾರಿ ಇರಿದಿದ್ದಾನೆ, ದಾಳಿಯ ನಂತರ, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪವನ್ನು ಹೊರಿಸಲಾಗಿದೆ.

ಗಾಯಗೊಂಡ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ

ದಾಳಿ ನಡೆದ ತಕ್ಷಣ ವರುಣ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಭಾರತೀಯ ವಿದ್ಯಾರ್ಥಿ ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದಾರೆ.

ದಾಳಿಯ ಹಿಂದಿನ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ದಿನ ಮಸಾಜ್​ ಮಾಡಿಸಿಕೊಳ್ಳಲು ಕೋಣೆಗೆ ಮಸಾಜ್​ ಕೋಣೆಗೆ ಹೋದಾಗ ಅಲ್ಲಿ ಅಪರಿಚಿತ ವ್ಯಕ್ತಿಯನ್ನು ನೋಡಿದೆ ನನಗೇನೋ ವಿಚಿತ್ರ ಎನಿಸಿತು , ಆ ವ್ಯಕ್ತಿಯಿಂದ ಅಪಾಯವಿದೆ ಎಂದೆನಿಸಿತು ಹಾಗಾಗಿ ಹಲ್ಲೆ ಮಾಡಿದೆ ಎಂದು ದಾಳಿಕೋರ ತಿಳಿಸಿದ್ದಾನೆ.

ಆದರೆ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದು, ಕೊಲೆ ಪ್ರಕರಣದ ಹಿಂದಿನ ಉದ್ದೇಶವನ್ನು ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಅದೇ ಸಮಯದಲ್ಲಿ, ವರುಣ್ ಸ್ಥಿತಿ ಗಂಭೀರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ