AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಭ್ಯಾಸ ಮುಗಿದರೂ ಸಿಗದ ಕೆಲಸ, ಸಾಲಬಾಧೆ, ಅಮೆರಿಕದಲ್ಲಿ ಭಾರತೀಯ ಯುವಕ ಆತ್ಮಹತ್ಯೆ

ಅಮೆರಿಕದಲ್ಲಿ ವಿದ್ಯಾಭ್ಯಾಸ ಮುಗಿಸಿದರೂ ಉದ್ಯೋಗ ಸಿಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಭಾರತೀಯ ಯುವಕ ಇರಗನಬೋಯಿನ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದ ಸಾಲದ ಹೊರೆ ಮತ್ತು ನಿರಂತರ ಒತ್ತಡವೇ ಈ ದುರಂತಕ್ಕೆ ಕಾರಣ. ಚಂದು ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಅಮೆರಿಕದ ಭಾರತೀಯ ಸಮುದಾಯ ನಿಧಿಸಂಗ್ರಹಣೆ ನಡೆಸಿದ್ದು, ಸರ್ಕಾರದಿಂದಲೂ ನೆರವು ದೊರೆತಿದೆ.

ವಿದ್ಯಾಭ್ಯಾಸ ಮುಗಿದರೂ ಸಿಗದ ಕೆಲಸ, ಸಾಲಬಾಧೆ,  ಅಮೆರಿಕದಲ್ಲಿ ಭಾರತೀಯ ಯುವಕ ಆತ್ಮಹತ್ಯೆ
ಮೃತ ಯುವಕ ಚಂದುImage Credit source: NDTV
ನಯನಾ ರಾಜೀವ್
|

Updated on: May 01, 2026 | 1:36 PM

Share

ಕರ್ನೂಲ್, ಮೇ 1: ದೊಡ್ಡ ದೊಡ್ಡ ಕನಸ್ಸುಗಳನ್ನು ಹೊತ್ತು ಅಮೆರಿಕ(America)ಕ್ಕೆ ಓದಲು ಹೋಗಿದ್ದ ಭಾರತೀಯ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ  ಚಂದು ಮೃತ ಯುವಕ. ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕಾಗಿ  ಅರಸುತ್ತಿದ್ದ ಯುವಕನ ಅಕಾಲಿಕ ಸಾವು ಆತನ ಕುಟುಂಬವನ್ನು ಅಕ್ಷರಶಃ ಬೀದಿಗೆ ತಳ್ಳಿದೆ. ಚಂದು ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಿಂದ ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಕಳೆದ ಹಲವು ವಾರಗಳಿಂದ ಉದ್ಯೋಗ ಹುಡುಕುತ್ತಿದ್ದರೂ ಸಿಕ್ಕಿರಲಿಲ್ಲ.

ಕರ್ನೂಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಅವರ ತಂದೆ ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳು ಮತ್ತು ಕುಟುಂಬವು ಹೊಂದಿದ್ದ ಸಾಲದ ಹೊರೆಯು ಚಂದು ಅವರ ಮೇಲೆ ತೀವ್ರ ಭಾವನಾತ್ಮಕ ಒತ್ತಡ ಹೇರಿತ್ತು. ಈ ನಿರಂತರ ಒತ್ತಡ ತಾಳಲಾರದೆ ಅವರು ಅಮೆರಿಕದಲ್ಲಿರುವ ತಮ್ಮ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದು ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸುಮಾರು 20 ಲಕ್ಷ ರೂ. ವೆಚ್ಚವಾಗಲಿದ್ದು, ಬಡ ಕುಟುಂಬಕ್ಕೆ ಇದನ್ನು ಭರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಮೆರಿಕದಲ್ಲಿರುವ ಭಾರತೀಯ ಸಮುದಾಯವು ಹಣವನ್ನು ಸಂಗ್ರಹಿಸುವ ಗುರಿಯೊಂದಿಗೆ ನಿಧಿಸಂಗ್ರಹಣೆಯನ್ನು ಪ್ರಾರಂಭಿಸಿದೆ. ಕಳೆದ ಎರಡು ದಿನಗಳಲ್ಲಿ ಈಗಾಗಲೇ 76,000 ಡಾಲರ್​ಗೂ ಹೆಚ್ಚು ಹಣ ಸಂಗ್ರಹವಾಗಿದ್ದು, ಇದರಲ್ಲಿ ಚಂದು ಅವರ ಕುಟುಂಬ ಮಾಡಿರುವ ಸಾಲವನ್ನು ತೀರಿಸಲು 25,000 ಡಾಲರ್​ ಹಣವನ್ನು ಅವರ ಹೆತ್ತವರಿಗೆ ನೀಡಲು ನಿರ್ಧರಿಸಲಾಗಿದೆ.

ಮತ್ತಷ್ಟು ಓದಿ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಈ ಘಟನೆಯ ಕುರಿತು ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಅವರು ಸಂತಾಪ ಸೂಚಿಸಿದ್ದು, ಮೃತದೇಹವನ್ನು ತಾಯ್ನಾಡಿಗೆ ತರಲು ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರ ಸಹಾಯ ಕೋರಿದ್ದಾರೆ. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ಸಚಿವ ರಾಮ್ ಮೋಹನ್ ನಾಯ್ಡು ಅವರು, ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಸಮುದಾಯದ ಸದಸ್ಯರ ಪ್ರಕಾರ, ಚಂದು ಕೇವಲ ಒಬ್ಬ ವಿದ್ಯಾರ್ಥಿಯಲ್ಲದೆ ತನ್ನ ಕಿರಿಯ ಸಹೋದರ ಮತ್ತು ಸ್ನೇಹಿತರಿಗೆ ಆಧಾರಸ್ತಂಭವಾಗಿದ್ದರು. ಆದರೆ ವಿಧಿಯಾಟದಿಂದ ಆತನ ಬದುಕಿನ ಮಹತ್ವಾಕಾಂಕ್ಷೆಗಳು ಅರ್ಧಕ್ಕೇ ಮೊಟಕುಗೊಂಡಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್