AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrs World 2022: 21 ವರ್ಷಗಳ ಬಳಿಕ ಭಾರತೀಯ ಮಹಿಳೆಗೆ ಒಲಿದ ಮಿಸೆಸ್ ವರ್ಲ್ಡ್ ಪಟ್ಟ

ಮಿಸೆಸ್​ ವರ್ಲ್ಡ್​ 2022 ಸ್ಪರ್ಧೆಯಲ್ಲಿ ಭಾರತದ ಮಹಿಳೆ ವಿಜೇತರಾಗಿದ್ದು, ಇದರೊಂದಿಗೆ 21 ವರ್ಷಗಳ ಬಳಿಕ ಭಾರತಕ್ಕೆ ಮತ್ತೆ ಮಿಸೆಸ್ ವರ್ಲ್ಡ್ ಪಟ್ಟ ಒಲಿದುಬಂದಿದೆ.

Mrs World 2022: 21 ವರ್ಷಗಳ ಬಳಿಕ ಭಾರತೀಯ ಮಹಿಳೆಗೆ ಒಲಿದ ಮಿಸೆಸ್ ವರ್ಲ್ಡ್ ಪಟ್ಟ
ಮಿಸೆಸ್​ ವರ್ಲ್ಡ್​ 2022 ಆಗಿ ಭಾರತದ ಸರ್ಗಂ ಕೌಶಲ್ ಆಯ್ಕೆ
TV9 Web
| Edited By: |

Updated on: Dec 18, 2022 | 11:55 PM

Share

ನವದೆಹಲಿ: ಮಿಸೆಸ್​ ವರ್ಲ್ಡ್​ 2022 (Mrs World 2022) ಆಗಿ ಭಾರತದ ಸರ್ಗಮ್ ಕೌಶಲ್ ಆಯ್ಕೆ ಆಗಿದ್ದು, 21 ವರ್ಷಗಳ ಬಳಿಕ ಭಾರತಕ್ಕೆ ಮತ್ತೆ ಮಿಸೆಸ್ ವರ್ಲ್ಡ್ ಪಟ್ಟ ಒಲಿದುಬಂದಂತಾಗಿದೆ. ಅಮೆರಿಕದ (United States of America) ಲಾಸ್ ವೇಗಾಸ್‌ನಲ್ಲಿ (Las Vegas) ನಡೆದ ಗಾಲಾ ಸಮಾರಂಭದಲ್ಲಿ 63 ದೇಶಗಳನ್ನು ಹಿಂದಿಕ್ಕಿ ಜಮ್ಮು-ಕಾಶ್ಮೀರದ ಸರ್ಗಮ್ ಕೌಶಲ್ ವಿಜೇತರಾಗಿದ್ದಾರೆ.

ಇದನ್ನೂ ಓದಿ: ಮಿಸ್ ಯೂನಿವರ್ಸ್​ ಮತ್ತು ಮಿಸ್ ವರ್ಲ್ಡ್​ ಏನು ವ್ಯತ್ಯಾಸ? ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ?

ಮಿಸೆಸ್​ ವರ್ಲ್ಡ್ 2021 ಆಗಿದ್ದ ಶಾಯ್ಲಿನ್ ಫೋರ್ಡ್ ಅವರು ಸರ್ಗಂ ಕೌಶಲ್​ಗೆ ಮಿಸ್ ವರ್ಲ್ಡ್ ಕಿರೀಟವನ್ನು ತೊಡಿಸಿದರು. ಮಿಸೆಸ್ ಪಾಲಿನೇಷ್ಯಾ ಮತ್ತು ಮಿಸೆಸ್ ಕೆನಡಾ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ರನ್ನರ್ ಅಪ್​ ಆದರು. ಇನ್ನು 21 ವರ್ಷಗಳ ಬಳಿಕ ಮಿಸೆಸ್​ ವರ್ಲ್ಡ್ ಕಿರೀಟ ಮರಳಿ ನಮಗೆ ಸಿಕ್ಕಿದೆ ಎಂದು ಸರ್ಗಂ ಸೋಷಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

2001ರಲ್ಲಿ ನಟಿ-ರೂಪದರ್ಶಿ ಅದಿತಿ ಗೋವಿತ್ರಿಕರ್ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸಿ ಮಿಸೆಸ್ ವರ್ಲ್ಡ್ ಗರಿ ಗಳಿಸಿದ್ದರು. ಅದಾಗ ಬಳಿಕ ಈಗಲೇ ಮಿಸೆಸ್ ವರ್ಲ್ಡ್ ಭಾರತಕ್ಕೆ ಸಿಕ್ಕಿರುವುದು. ಜಮ್ಮು-ಕಾಶ್ಮೀರದ ಸರ್ಗಂ ಈ ತಿಂಗಳ ಜೂನ್​ನಲ್ಲಿ ಮಿಸೆಸ್ ಇಂಡಿಯಾ ವರ್ಲ್ಡ್​ 2022-23 ಆಗಿ ಆಯ್ಕೆ ಆಗಿದ್ದರು. ಈ ಮೂಲಕ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಮಿಸೆಸ್ ವರ್ಲ್ಡ್ 2022 ಆಗಿ ಹೊರಹೊಮ್ಮಿದ್ದಾರೆ.

ಶ್ರೀಮತಿ ಸರ್ಗಮ್ ಕೌಶಲ್ ಅವರ ಇನ್ಸ್ಟಾಗ್ರಾಮ್‌ ಪೋಸ್ಟ್‌ಗಳ ಪ್ರಕಾರ, ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. ಅವರು ಈ ಹಿಂದೆ ವಿಶಾಖಪಟ್ಟಣದಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ ಮತ್ತು ಅವರ ಪತಿ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಹ ಹಂಚಿಕೊಂಡಿದ್ದಾರೆ.

ವಿವಾಹಿತೆಯರಿಗೆಂದೇ ಆಯೋಜಿಸಲಾಗುವ ಈ ಮಿಸೆಸ್ ವರ್ಲ್ಡ್ ಸ್ಪರ್ಧೆ 1984ರಲ್ಲಿ ಆರಂಭಗೊಂಡಿತ್ತು. ಆರಂಭದಲ್ಲಿ ಇದನ್ನು ಮಿಸೆಸ್​ ವುಮನ್ ಆಫ್​ ದ ವರ್ಲ್ಡ್ ಎಂದು ಕರೆಯಲಾಗುತ್ತಿತ್ತು. ಬಳಿಕ 1988ರಲ್ಲಿ ಇದನ್ನು ಮಿಸೆಸ್ ವರ್ಲ್ಡ್ ಎಂದು ಮರು ನಾಮಕರಣ ಮಾಡಲಾಯಿತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?