AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Earthquake: ಇಂಡೋನೇಷ್ಯಾದಲ್ಲಿ ಒಂದೇ ವಾರದಲ್ಲಿ 2ನೇ ಬಾರಿಗೆ 6.2 ತೀವ್ರತೆಯ ಪ್ರಬಲ ಭೂಕಂಪ

ಒಂದು ವಾರದ ಹಿಂದೆ ಕೂಡ ಭಾರೀ ಪ್ರಮಾಣದ ಭೂಕಂಪ ಉಂಟಾಗಿತ್ತು. ಇಲ್ಲಿನ ತನಿಂಬಾರ್ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆ ದಾಖಲಾಗಿತ್ತು. ಇದೀಗ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ.

Indonesia Earthquake: ಇಂಡೋನೇಷ್ಯಾದಲ್ಲಿ ಒಂದೇ ವಾರದಲ್ಲಿ 2ನೇ ಬಾರಿಗೆ 6.2 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 16, 2023 | 8:46 AM

ಜಕಾರ್ತ: ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪ (Indonesia Earthquake) ಸಂಭವಿಸಿದೆ. ಕಳೆದ ಒಂದೇ ವಾರದ ಅಂತರದಲ್ಲಿ 2 ಬಾರಿ ಭೂಮಿ ಕಂಪಿಸಿದೆ. ಇಂದು ಬೆಳಗಿನ ಜಾವ ಇಂಡೋನೇಷ್ಯಾದಲ್ಲಿ 6.2 ತೀವ್ರತೆಯ ಭಾರೀ ಭೂಕಂಪವಾಗಿದೆ. ಇದರಿಂದ ಮಲಗಿದ್ದ ಜನರೆಲ್ಲ ಮನೆಯಿಂದ ಹೊರಗೆ ಓಡಿಬಂದಿದ್ದು, ಇದುವರೆಗೂ ಯಾವುದೇ ಆಸ್ತಿಪಾಸ್ತಿ ಹಾನಿ, ಸಾವಿನ ಬಗ್ಗೆ ವರದಿಯಾಗಿಲ್ಲ.

ಸಿಂಗಿಲ್ ನಗರದ ದಕ್ಷಿಣ-ಆಗ್ನೇಯಕ್ಕೆ 48 ಕಿಲೋಮೀಟರ್ (30 ಮೈಲುಗಳು) ದೂರದಲ್ಲಿ 37 ಕಿಲೋಮೀಟರ್ ಈ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಸರ್ವೆ ತಿಳಿಸಿದೆ. ಇಂದು ಮುಂಜಾನೆ ಸ್ಥಳೀಯ ಸಮಯ ಬೆಳಗ್ಗೆ 6:30ರ ಸುಮಾರಿಗೆ ಈ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದಲ್ಲಿ ಒಟ್ಟು 17,000ಕ್ಕೂ ಹೆಚ್ಚು ದ್ವೀಪಗಳಿವೆ.

ಇದನ್ನೂ ಓದಿ: Earthquake: ಹಿಮಾಚಲ ಪ್ರದೇಶದ ಧರ್ಮಶಾಲಾ ವ್ಯಾಪ್ತಿಯಲ್ಲಿ ಭೂಕಂಪ

ಒಂದು ವಾರದ ಹಿಂದೆ ಕೂಡ ಭಾರೀ ಪ್ರಮಾಣದ ಭೂಕಂಪ ಉಂಟಾಗಿತ್ತು. ಇಲ್ಲಿನ ತನಿಂಬಾರ್ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆ ದಾಖಲಾಗಿತ್ತು. ಇದೀಗ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಇಂದು ಬೆಳಗ್ಗೆ ಉಂಟಾದ ಭೂಕಂಪನವು ಜನರನ್ನು ಭಯಭೀತಗೊಳಿಸಿತು. ಉತ್ತರ ಸುಮಾತ್ರಾ ಪ್ರಾಂತ್ಯದ 4 ಜಿಲ್ಲೆಗಳಲ್ಲಿ 3ರಿಂದ 10 ಸೆಕೆಂಡುಗಳ ನಡುವೆ ಭೂಕಂಪದ ಅನುಭವವಾಯಿತು ಎಂದು ಬಿಎನ್‌ಪಿಬಿ ವಿಪತ್ತು ತಗ್ಗಿಸುವ ಏಜೆನ್ಸಿಯ ವಕ್ತಾರ ಅಬ್ದುಲ್ ಮುಹಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Kashmir Earthquake: ಕಣಿವೆ ರಾಜ್ಯ ಕಾಶ್ಮೀರ, ದೆಹಲಿಯಲ್ಲಿ ಭೂಕಂಪ: 5.9 ರಷ್ಟು ತೀವ್ರತೆ ದಾಖಲು

2004ರ ಡಿಸೆಂಬರ್ 26ರಂದು ಸುಮಾತ್ರಾ ದ್ವೀಪದ ಅತ್ಯಂತ ಭೀಕರ ಭೂಕಂಪಗಳು ಸಂಭವಿಸಿದವು. ಇದು ಹಿಂದೂ ಮಹಾಸಾಗರದಲ್ಲಿ ಸುನಾಮಿಯನ್ನು ಹುಟ್ಟುಹಾಕಿತು. ಇದು ಶ್ರೀಲಂಕಾ, ಭಾರತ ಮತ್ತು ಥೈಲ್ಯಾಂಡ್‌ನ 2,30,000ಕ್ಕೂ ಹೆಚ್ಚು ಜನರನ್ನು ಕೊಂದಿತು. 2021ರ ನವೆಂಬರ್​​ನಲ್ಲಿ ಇಂಡೋನೇಷ್ಯಾದಲ್ಲಿ ಉಂಟಾದ ಭೂಕಂಪದಲ್ಲಿ 331 ಜನ ಸಾವನ್ನಪ್ಪಿದ್ದರು. 2018ರಲ್ಲಿ ಉಂಟಾದ ಭೂಕಂಪ ಮತ್ತು ಸುನಾಮಿಯಲ್ಲಿ ಸುಲಾವೇಸಿಯಲ್ಲಿ 4,340 ಜನ ಮೃತಪಟ್ಟಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ