AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Earthquake: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸಾವಿನ ಸಂಖ್ಯೆ 310ಕ್ಕೆ ಏರಿಕೆ

ನವೆಂಬರ್ 21ರ ಮಧ್ಯಾಹ್ನ ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ 5.6 ತೀವ್ರತೆಯ ಭೂಕಂಪವು ಸಂಭವಿಸಿತ್ತು. ಈ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 310ಕ್ಕೆ ಏರಿಕೆಯಾಗಿದೆ.

Indonesia Earthquake: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸಾವಿನ ಸಂಖ್ಯೆ 310ಕ್ಕೆ ಏರಿಕೆ
ಇಂಡೋನೇಷ್ಯಾದಲ್ಲಿ ಭೂಕಂಪ
TV9 Web
| Edited By: |

Updated on: Nov 26, 2022 | 8:44 AM

Share

ಸಿಯಾಂಜೂರ್: ಇಂಡೋನೇಷ್ಯಾದ (Indonesia Earthquake) ಪಶ್ಚಿಮ ಜಾವಾದಲ್ಲಿ ನವೆಂಬರ್ 21ರಂದು ಪ್ರಬಲ ಭೂಕಂಪ ಸಂಭವಿಸಿತ್ತು. ಈ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 310ಕ್ಕೆ ಏರಿಕೆಯಾಗಿದೆ. ಈ ಭೂಕಂಪದ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ರಕ್ಷಣಾ ಕಾರ್ಯಾಚರಣೆ (Rescue Operation) ನಡೆಯುತ್ತಲೇ ಇದೆ. ಇದೀಗ 7 ವರ್ಷದ ಇಂಡೋನೇಷ್ಯಾದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಮೃತ ಬಾಲಕಿಯ ದೇಹವನ್ನು ತಕ್ಷಣವೇ ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸೋಮವಾರದ ಭೂಕಂಪದಿಂದ ಉಂಟಾದ ಭೂಕುಸಿತಗಳು ಟನ್‌ಗಟ್ಟಲೆ ಮಣ್ಣು, ಬಂಡೆಗಳು ಮತ್ತು ಮುರಿದ ಮರಗಳನ್ನು ತಂದ ಪರ್ವತಮಯ ಸಿಯಾಂಜೂರ್ ಜಿಲ್ಲೆಯ 2 ಪ್ರದೇಶಗಳಲ್ಲಿ ಶುಕ್ರವಾರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಹೆನ್ರಿ ಅಲ್ಫಿಯಾಂಡಿ ತಿಳಿಸಿದ್ದಾರೆ.

ಇದನ್ನೂ ಓದಿ: Indonesia Earthquake: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 162ಕ್ಕೆ ಏರಿಕೆ!

2,000ಕ್ಕೂ ಹೆಚ್ಚು ಜನರು ಗಾಯಗೊಂಡಿರುವ 5.6 ತೀವ್ರತೆಯ ಭೂಕಂಪದ ನಂತರ 1,400ಕ್ಕೂ ಹೆಚ್ಚು ರಕ್ಷಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ಇನ್ನೂ ಹುಡುಕುತ್ತಿದ್ದಾರೆ. ಈ ಭೂಕಂಪದಿಂದ ಕನಿಷ್ಠ 56,000 ಮನೆಗಳಿಗೆ ಹಾನಿಯಾಗಿದೆ. ಸುಮಾರು 36,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ನವೆಂಬರ್ 21ರ ಮಧ್ಯಾಹ್ನ ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ 5.6 ತೀವ್ರತೆಯ ಭೂಕಂಪವು ಸಂಭವಿಸಿತ್ತು. ಈ ಭೂಕಂಪವು ರಾಜಧಾನಿ ಜಕಾರ್ತಾದಿಂದ ಆಗ್ನೇಯಕ್ಕೆ 75 ಕಿ.ಮೀ ದೂರದಲ್ಲಿರುವ ಸಿಯಾಂಜೂರ್‌ನಲ್ಲಿ ಮತ್ತು 10 ಕಿ.ಮೀ ಆಳದಲ್ಲಿ ಸಂಭವಿಸಿತ್ತು. ಅದರ ಪರಿಣಾಮ ಇನ್ನೂ ಕಡಿಮೆಯಾಗಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?