AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ

ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.

Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ
ಕೈದಿಗಳ ಶವದ ಬ್ಯಾಗ್​ಗಳು
TV9 Web
| Updated By: ಸುಷ್ಮಾ ಚಕ್ರೆ|

Updated on: Sep 08, 2021 | 3:31 PM

Share

ಜಕಾರ್ತ: ಇಂಡೋನೇಷ್ಯಾದ ಜೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, 41 ಕೈದಿಗಳು ಸಾವನ್ನಪ್ಪಿದ್ದಾರೆ. ಸಾಕಷ್ಟು ಕೈದಿಗಳು ಗಾಯಗೊಂಡಿದ್ದಾರೆ. ಬುಧವಾರ ನಸುಕಿನ ಜಾವ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಕೈದಿಗಳೆಲ್ಲ ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ಆರಿಸಲು ಪ್ರಯತ್ನಿಸಿವೆ. ಆದರೆ, ಅಷ್ಟರಲ್ಲಾಗಲೇ ಜೈಲಿನ ಬಹುತೇಕ ಭಾಗ ಸುಟ್ಟುಹೋಗಿತ್ತು.

ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ ಕಟ್ಟಡದಲ್ಲಿದ್ದವರು ಬೆಂಕಿ ಹೊತ್ತಿಕೊಂಡಿರುವುದನ್ನು ವಿಡಿಯೋ ಮಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಬೆಂಕಿ ದುರಂತದಲ್ಲಿ 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ದುರಂತ ಸಂಭವಿಸಿರುವ ಸಾಧ್ಯತೆಯೂ ಇದೆ. ಈ ವೇಳೆ ಜೈಲಿನಲ್ಲಿ ಸುಮಾರು 2,000 ಕೈದಿಗಳು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರಲ್ಲಿ ಕೂಡ ಇದೇ ರೀತಿಯ ಘಟನೆ ಸಂಭವಿಸಿತ್ತು. ಆ ಬೆಂಕಿ ದುರಂತದಲ್ಲಿ 100 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದರು. 2019ರಲ್ಲಿ ಇಂಡೋನೇಷ್ಯಾದ ಬೆಂಕಿ ಪೊಟ್ಟಣದ ಕಾರ್ಖಾನೆಯಲ್ಲಿ ಬೆಂಕಿ ದುರಂತ ಸಂಭವಿಸಿ 7 ಮಕ್ಕಳು ಸೇರಿದಂತೆ 30 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Crime News: ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ದ ಕಳ್ಳರು; 6 ತಿಂಗಳಲ್ಲಿ ಕದ್ದ ಹಣ ವಾಪಾಸ್ ಕೊಡುತ್ತೇವೆಂದು ಪರಾರಿ!

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

(Indonesia Prison Fire Accident Kills At Least 41 Prisoners Dozens Injured)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ