AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ

ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.

Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ
ಕೈದಿಗಳ ಶವದ ಬ್ಯಾಗ್​ಗಳು
TV9 Web
| Edited By: |

Updated on: Sep 08, 2021 | 3:31 PM

Share

ಜಕಾರ್ತ: ಇಂಡೋನೇಷ್ಯಾದ ಜೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, 41 ಕೈದಿಗಳು ಸಾವನ್ನಪ್ಪಿದ್ದಾರೆ. ಸಾಕಷ್ಟು ಕೈದಿಗಳು ಗಾಯಗೊಂಡಿದ್ದಾರೆ. ಬುಧವಾರ ನಸುಕಿನ ಜಾವ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಕೈದಿಗಳೆಲ್ಲ ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ಆರಿಸಲು ಪ್ರಯತ್ನಿಸಿವೆ. ಆದರೆ, ಅಷ್ಟರಲ್ಲಾಗಲೇ ಜೈಲಿನ ಬಹುತೇಕ ಭಾಗ ಸುಟ್ಟುಹೋಗಿತ್ತು.

ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ ಕಟ್ಟಡದಲ್ಲಿದ್ದವರು ಬೆಂಕಿ ಹೊತ್ತಿಕೊಂಡಿರುವುದನ್ನು ವಿಡಿಯೋ ಮಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಬೆಂಕಿ ದುರಂತದಲ್ಲಿ 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ದುರಂತ ಸಂಭವಿಸಿರುವ ಸಾಧ್ಯತೆಯೂ ಇದೆ. ಈ ವೇಳೆ ಜೈಲಿನಲ್ಲಿ ಸುಮಾರು 2,000 ಕೈದಿಗಳು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರಲ್ಲಿ ಕೂಡ ಇದೇ ರೀತಿಯ ಘಟನೆ ಸಂಭವಿಸಿತ್ತು. ಆ ಬೆಂಕಿ ದುರಂತದಲ್ಲಿ 100 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದರು. 2019ರಲ್ಲಿ ಇಂಡೋನೇಷ್ಯಾದ ಬೆಂಕಿ ಪೊಟ್ಟಣದ ಕಾರ್ಖಾನೆಯಲ್ಲಿ ಬೆಂಕಿ ದುರಂತ ಸಂಭವಿಸಿ 7 ಮಕ್ಕಳು ಸೇರಿದಂತೆ 30 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Crime News: ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ದ ಕಳ್ಳರು; 6 ತಿಂಗಳಲ್ಲಿ ಕದ್ದ ಹಣ ವಾಪಾಸ್ ಕೊಡುತ್ತೇವೆಂದು ಪರಾರಿ!

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

(Indonesia Prison Fire Accident Kills At Least 41 Prisoners Dozens Injured)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್