AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ

ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.

Fire Accident: ಇಂಡೋನೇಷ್ಯಾ ಜೈಲಿನಲ್ಲಿ ಬೆಂಕಿ ಅವಘಡ; 41 ಕೈದಿಗಳು ಸಾವು, 72 ಜನರಿಗೆ ಗಾಯ
ಕೈದಿಗಳ ಶವದ ಬ್ಯಾಗ್​ಗಳು
TV9 Web
| Edited By: |

Updated on: Sep 08, 2021 | 3:31 PM

Share

ಜಕಾರ್ತ: ಇಂಡೋನೇಷ್ಯಾದ ಜೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, 41 ಕೈದಿಗಳು ಸಾವನ್ನಪ್ಪಿದ್ದಾರೆ. ಸಾಕಷ್ಟು ಕೈದಿಗಳು ಗಾಯಗೊಂಡಿದ್ದಾರೆ. ಬುಧವಾರ ನಸುಕಿನ ಜಾವ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಕೈದಿಗಳೆಲ್ಲ ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ಆರಿಸಲು ಪ್ರಯತ್ನಿಸಿವೆ. ಆದರೆ, ಅಷ್ಟರಲ್ಲಾಗಲೇ ಜೈಲಿನ ಬಹುತೇಕ ಭಾಗ ಸುಟ್ಟುಹೋಗಿತ್ತು.

ಇಂದು ಮುಂಜಾನೆ 3 ಗಂಟೆ ವೇಳೆಗೆ ಇಂಡೋನೇಷ್ಯಾದ ಜೈಲಿನೊಳಗೆ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ ಕಟ್ಟಡದಲ್ಲಿದ್ದವರು ಬೆಂಕಿ ಹೊತ್ತಿಕೊಂಡಿರುವುದನ್ನು ವಿಡಿಯೋ ಮಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಬೆಂಕಿ ದುರಂತದಲ್ಲಿ 41 ಕೈದಿಗಳು ಸಾವನ್ನಪ್ಪಿದ್ದು, 72 ಕೈದಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ದುರಂತ ಸಂಭವಿಸಿರುವ ಸಾಧ್ಯತೆಯೂ ಇದೆ. ಈ ವೇಳೆ ಜೈಲಿನಲ್ಲಿ ಸುಮಾರು 2,000 ಕೈದಿಗಳು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರಲ್ಲಿ ಕೂಡ ಇದೇ ರೀತಿಯ ಘಟನೆ ಸಂಭವಿಸಿತ್ತು. ಆ ಬೆಂಕಿ ದುರಂತದಲ್ಲಿ 100 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದರು. 2019ರಲ್ಲಿ ಇಂಡೋನೇಷ್ಯಾದ ಬೆಂಕಿ ಪೊಟ್ಟಣದ ಕಾರ್ಖಾನೆಯಲ್ಲಿ ಬೆಂಕಿ ದುರಂತ ಸಂಭವಿಸಿ 7 ಮಕ್ಕಳು ಸೇರಿದಂತೆ 30 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Crime News: ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ದ ಕಳ್ಳರು; 6 ತಿಂಗಳಲ್ಲಿ ಕದ್ದ ಹಣ ವಾಪಾಸ್ ಕೊಡುತ್ತೇವೆಂದು ಪರಾರಿ!

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

(Indonesia Prison Fire Accident Kills At Least 41 Prisoners Dozens Injured)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ