AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Volcano: ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟ; 13 ಮಂದಿ ಸಾವು

ಜ್ವಾಲಾಮುಖಿ ಸ್ಫೋಟದ ಪರಿಣಾಮ ಜಾವಾ ಪ್ರಾಂತ್ಯದ ಹತ್ತಿರದ ನಗರಗಳಾದ ಲಮಾಂಗ್ ಮತ್ತು ಮಲಂಗ್ ನಡುವಿನ ಸೇತುವೆ ಕುಸಿತಗೊಂಡಿದೆ. ದುರಂತದಲ್ಲಿ ಸಾವನ್ನಪ್ಪಿದ 13 ಜನರಲ್ಲಿ ಇಬ್ಬರನ್ನು ಮಾತ್ರ ಗುರುತಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ತಂಡದ ಅಧಿಕಾರಿ ಅಬ್ದುಲ್ ಮುಹಾರಿ ತಿಳಿಸಿದ್ದಾರೆ.

Indonesia Volcano: ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟ; 13 ಮಂದಿ ಸಾವು
ಇಂಡೋನೇಷ್ಯಾ ಜ್ವಾಲಾಮುಖಿ (ಪಿಟಿಐ ಚಿತ್ರ)
TV9 Web
| Edited By: |

Updated on:Dec 05, 2021 | 11:36 AM

Share

 ಇಂಡೋನೇಷ್ಯಾದ ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜ್ವಾಲಾಮುಖಿ ಸ್ಪೋಟಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಿಪತ್ತು ನಿರ್ವಹಣಾ ತಂಡ 900ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ. ಶನಿವಾರ ಈ ಘಟನೆ ನಡೆದಿದೆ.  ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಜಾವಾ ದ್ವೀಪದ ಅತೀ ಎತ್ತರದ ಪರ್ವತವಾದ ಸೆಮೇರು ಪರ್ವತದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಇದರಿಂದ ಲಾವಾರಸವು ಹತ್ತಿರದಲ್ಲಿದ್ದ ಪೂರ್ವ ಜಾವಾ ಪ್ರಾಂತ್ಯದ ಹಳ್ಳಿಗಳನ್ನು ಆವರಿಸಿದ್ದು ಜನರು ಭಯಭೀತರಾಗಿ ಓಡಿಹೋಗಿದ್ದಾರೆ.

ಜ್ವಾಲಾಮುಖಿ ಸ್ಫೋಟದ ಪರಿಣಾಮ ಜಾವಾ ಪ್ರಾಂತ್ಯದ ಹತ್ತಿರದ ನಗರಗಳಾದ ಲಮಾಂಗ್ ಮತ್ತು ಮಲಂಗ್ ನಡುವಿನ ಸೇತುವೆ ಕುಸಿತಗೊಂಡಿದೆ. ದುರಂತದಲ್ಲಿ ಸಾವನ್ನಪ್ಪಿದ 13 ಜನರಲ್ಲಿ ಇಬ್ಬರನ್ನು ಮಾತ್ರ ಗುರುತಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ತಂಡದ ಅಧಿಕಾರಿ ಅಬ್ದುಲ್ ಮುಹಾರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದುರಂತದಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ 902 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆಮೇರು ಸುಮಾರು 3,600 ಮೀ ಎತ್ತರದ ಪರ್ವತವಾಗಿದೆ. ಇದು ಇಂಡೋನೇಷ್ಯಾದ 130 ಸಕ್ರಿಯ ಜ್ವಾಲಾಮುಖಿಗಳಲ್ಲಿ ಒಂದಾಗಿದೆ. ಕಳೆದ ಜನವರಿಯಲ್ಲಿಯೂ ಈ ಜ್ವಾಲಾಮುಖಿ ಸ್ಫೋಟಗೊಂಡಿತ್ತು. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಆದರೆ ಈ ಬಾರಿ 13 ಜನ ಸಾವನ್ನಪ್ಪಿದ್ದು 35ಕ್ಕೂ ಅಧಿಕ ಮಂದಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಇಂಡೋನೇಷ್ಯಾ ಅತೀ ಹೆಚ್ಚು ಜ್ವಾಲಾಮುಖಿಗಳು ಸಕ್ರಿಯವಾಗಿರುವ ದೇಶವಾಗಿದೆ.

ಮಧ್ಯ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸೆಮೇರು ಪರ್ವತದಲ್ಲಿ ಜವಾಲಾಮುಖಿ ಸ್ಪೋಟಗೊಂಡ ಒಂದು ದಿನದ ನಂತರ ಅಂದರೆ ಇಂದು (ಭಾನುವಾರ ಡಿ.5)  ಮಧ್ಯ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ. ಮಧ್ಯ ಇಂಡೋನೇಷ್ಯಾದ ಉತ್ತರ ಸುಲವೇಸಿ ಪ್ರಾಂತ್ಯದಲ್ಲಿ 6.2ರಷ್ಟು ತೀವ್ರವಾಗಿ ಭೂಮಿ ಕಂಪಿಸಿದೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಜತೆಗೆ ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಹವಾಮಾನ ಮತ್ತು ಭೂಶಾಸ್ತ್ರ ವಿಭಾಗದ ಮುಖ್ಯಸ್ಥ ಡಾರಿಯೊನೋ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Mohammed Siraj: ನ್ಯೂಜಿಲೆಂಡ್ 62 ರನ್​ಗೆ ಆಲೌಟ್ ಮಾಡಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ಮೊಹಮ್ಮದ್ ಸಿರಾಜ್: ಏನಂದ್ರು ಕೇಳಿ

Published On - 11:14 am, Sun, 5 December 21

Follow Us
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ