AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ವಿದ್ಯಾರ್ಥಿನಿಯರನ್ನು ರೇಪ್​ ಮಾಡಿದ್ದ ಧರ್ಮ ಗುರುವಿಗೆ ಜೀವಾವಧಿ ಶಿಕ್ಷೆ; 8 ಬಾಲಕಿಯರು ಗರ್ಭಿಣಿಯರೂ ಆಗಿದ್ದರು

ಹೆರ್ರಿ ವಿರಾವಾನ್​ ತನ್ನ ವಸತಿ ಶಾಲೆಗೆ ಬರುವ ಹೆಣ್ಣುಮಕ್ಕಳಿಗೆ ನಿರ್ಬಂಧ ವಿಧಿಸುತ್ತಿದ್ದ. ಅವರ ಮೊಬೈಲ್​​ಗಳನ್ನು ವಶಪಡಿಸಿಕೊಳ್ಳುತ್ತಿದ್ದ. ಮನೆಯವರೊಂದಿಗೆ ಸಂಪರ್ಕದಲ್ಲಿರಲು ಬಿಡುತ್ತಿರಲಿಲ್ಲ.

13 ವಿದ್ಯಾರ್ಥಿನಿಯರನ್ನು ರೇಪ್​ ಮಾಡಿದ್ದ ಧರ್ಮ ಗುರುವಿಗೆ ಜೀವಾವಧಿ ಶಿಕ್ಷೆ; 8 ಬಾಲಕಿಯರು ಗರ್ಭಿಣಿಯರೂ ಆಗಿದ್ದರು
ಬಂಧಿತ ಶಿಕ್ಷಕ
TV9 Web
| Edited By: |

Updated on:Feb 16, 2022 | 10:55 AM

Share

13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿದ್ದ ವಸತಿ ಶಾಲೆ ಶಿಕ್ಷಕನಿಗೆ ಇಂಡೋನೇಷ್ಯಾ ನ್ಯಾಯಾಲಯ (Indonesian Court) ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಯ ಹೆಸರು ಹೆರ್ರಿ ವಿರಾವಾನ್​. ಬೋರ್ಡಿಂಗ್​ ಶಾಲೆಯ (Boarding School) ಮಾಲೀಕನೂ ಹೌದು ಈತ. ಅಷ್ಟೇ ಅಲ್ಲ ಧಾರ್ಮಿಕ ಗುರು. ಅಲ್ಲಿರುವ 11-16ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. 2016ರಿಂದ ಸುಮಾರು 13 ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ್ದ. ಅದರಲ್ಲಿ ಎಂಟು ಬಾಲಕಿಯರು ಗರ್ಭಿಣಿಯರೂ ಆಗಿ, ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕಳೆದ ವರ್ಷ ಈತ ಕಾಮಕಾಂಡ ಬಯಲಿಗೆ ಬಂದು, ಇಡೀ ಇಂಡೋನೇಷ್ಯಾವನ್ನೇ ಬೆಚ್ಚಿಬೀಳಿಸಿತ್ತು. ವಿರಾವಾನ್​​ಗೆ ಮರಣದಂಡನೆ ವಿಧಿಸಬೇಕು, ಅದಿಲ್ಲದೆ ಇದ್ದರೆ, ರಾಸಾಯನಿಕವನ್ನು ಇಂಜೆಕ್ಟ್ ಮಾಡುವ ಮೂಲಕ ಪುರುಷತ್ವ ಹರಣ ಮಾಡಬೇಕು ಎಂದು ಪ್ರಾಸಿಕ್ಯೂಟರ್​ ಆಗ್ರಹಿಸಿದ್ದರು. ಅದೆರಡನ್ನೂ ಕೋರ್ಟ್ ತಿರಸ್ಕರಿಸಿ, ಜೀವಾವಧಿ ಶಿಕ್ಷೆ ವಿಧಿಸಿದೆ.

2016ರಲ್ಲಿ ಈ ವಿರಾವಾನ್ ಪಶ್ಚಿಮ ಜಾವಾದ ಬಂಡಂಗ್ ನಗರದಲ್ಲಿ ಇಸ್ಲಾಮಿಕ್​ ವಸತಿ ಶಾಲೆ ತೆರೆದಿದ್ದ. ತನ್ನ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಸ್ಕಾಲರ್​ಶಿಪ್​ ಸೇರಿ ಇನ್ನಿತರ ಆಮಿಷ ಒಡ್ಡುತ್ತಿದ್ದ. ಹೀಗಾಗಿ ಸ್ವಲ್ಪ ಬಡವರಾದವರು ತಮ್ಮ ಮಕ್ಕಳನ್ನು ಅಲ್ಲಿಯೇ ಸೇರಿಸಲು ಮುಂದಾಗುತ್ತಿದ್ದರು. 2016ರಿಂದ 2021ರವರೆಗೆ ಈತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ. ಕಳೆದ ವರ್ಷ ಮೇ ತಿಂಗಳಲ್ಲಿ ಈತನಿಂದ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಯೊಬ್ಬಳು ಗರ್ಭ ಧರಿಸಿದ್ದಳು. ಅದನ್ನು ಗಮನಿಸಿದ ಪಾಲಕರು ದೂರು ಕೊಟ್ಟಾಗ ತನಿಖೆ ನಡೆಯಿತು. ಆಗಲೇ ವಿರಾವಾನ್ ಕಾಮ ಪ್ರಕರಣಗಳು ಬಯಲಿಗೆ ಬಂದಿದ್ದು.

ಹೆರ್ರಿ ವಿರಾವಾನ್​ ತನ್ನ ವಸತಿ ಶಾಲೆಗೆ ಬರುವ ಹೆಣ್ಣುಮಕ್ಕಳಿಗೆ ನಿರ್ಬಂಧ ವಿಧಿಸುತ್ತಿದ್ದ. ಅವರ ಮೊಬೈಲ್​​ಗಳನ್ನು ವಶಪಡಿಸಿಕೊಳ್ಳುತ್ತಿದ್ದ. ಮನೆಯವರೊಂದಿಗೆ ಸಂಪರ್ಕದಲ್ಲಿರಲು ಬಿಡುತ್ತಿರಲಿಲ್ಲ. ವರ್ಷಕ್ಕೊಮ್ಮೆ ಮಾತ್ರ ಹೆಣ್ಣುಮಕ್ಕಳು ಮನೆಗೆ ಹೋಗಬಹುದಾಗಿತ್ತು. ಹೀಗಾಗಿ ತಮಗಾಗುತ್ತಿರುವ ಕಷ್ಟವನ್ನು ಯಾರ ಬಳಿಯೂ ಹೇಳಿಕೊಳ್ಳಲಾಗದೆ ಕಷ್ಟಪಡುತ್ತಿದ್ದರು. ಆದರೆ 2021ರ ಮೇ ತಿಂಗಳಲ್ಲಿ ಈತ ಸಿಕ್ಕಿಬಿದ್ದಿದ್ದಾನೆ. ಆಗಿನಿಂದಲೂ ಇಂಡೋನೇಷ್ಯಾದಲ್ಲಿ ಪ್ರಕರಣದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ಲೈಂಗಿಕ ದೌರ್ಜನ್ಯ ನಿರ್ಮೂಲನಾ ಕಾಯ್ದೆ ಜಾರಿಯಾಗಲೇಬೇಕು ಎಂಬ ಆಗ್ರಹವೂ ಜಾಸ್ತಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ: ಸಂಜಯ್ ರಾವುತ್

Published On - 9:38 am, Wed, 16 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್