AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ವಿದ್ಯಾರ್ಥಿನಿಯರನ್ನು ರೇಪ್​ ಮಾಡಿದ್ದ ಧರ್ಮ ಗುರುವಿಗೆ ಜೀವಾವಧಿ ಶಿಕ್ಷೆ; 8 ಬಾಲಕಿಯರು ಗರ್ಭಿಣಿಯರೂ ಆಗಿದ್ದರು

ಹೆರ್ರಿ ವಿರಾವಾನ್​ ತನ್ನ ವಸತಿ ಶಾಲೆಗೆ ಬರುವ ಹೆಣ್ಣುಮಕ್ಕಳಿಗೆ ನಿರ್ಬಂಧ ವಿಧಿಸುತ್ತಿದ್ದ. ಅವರ ಮೊಬೈಲ್​​ಗಳನ್ನು ವಶಪಡಿಸಿಕೊಳ್ಳುತ್ತಿದ್ದ. ಮನೆಯವರೊಂದಿಗೆ ಸಂಪರ್ಕದಲ್ಲಿರಲು ಬಿಡುತ್ತಿರಲಿಲ್ಲ.

13 ವಿದ್ಯಾರ್ಥಿನಿಯರನ್ನು ರೇಪ್​ ಮಾಡಿದ್ದ ಧರ್ಮ ಗುರುವಿಗೆ ಜೀವಾವಧಿ ಶಿಕ್ಷೆ; 8 ಬಾಲಕಿಯರು ಗರ್ಭಿಣಿಯರೂ ಆಗಿದ್ದರು
ಬಂಧಿತ ಶಿಕ್ಷಕ
TV9 Web
| Edited By: |

Updated on:Feb 16, 2022 | 10:55 AM

Share

13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿದ್ದ ವಸತಿ ಶಾಲೆ ಶಿಕ್ಷಕನಿಗೆ ಇಂಡೋನೇಷ್ಯಾ ನ್ಯಾಯಾಲಯ (Indonesian Court) ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಯ ಹೆಸರು ಹೆರ್ರಿ ವಿರಾವಾನ್​. ಬೋರ್ಡಿಂಗ್​ ಶಾಲೆಯ (Boarding School) ಮಾಲೀಕನೂ ಹೌದು ಈತ. ಅಷ್ಟೇ ಅಲ್ಲ ಧಾರ್ಮಿಕ ಗುರು. ಅಲ್ಲಿರುವ 11-16ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. 2016ರಿಂದ ಸುಮಾರು 13 ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ್ದ. ಅದರಲ್ಲಿ ಎಂಟು ಬಾಲಕಿಯರು ಗರ್ಭಿಣಿಯರೂ ಆಗಿ, ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕಳೆದ ವರ್ಷ ಈತ ಕಾಮಕಾಂಡ ಬಯಲಿಗೆ ಬಂದು, ಇಡೀ ಇಂಡೋನೇಷ್ಯಾವನ್ನೇ ಬೆಚ್ಚಿಬೀಳಿಸಿತ್ತು. ವಿರಾವಾನ್​​ಗೆ ಮರಣದಂಡನೆ ವಿಧಿಸಬೇಕು, ಅದಿಲ್ಲದೆ ಇದ್ದರೆ, ರಾಸಾಯನಿಕವನ್ನು ಇಂಜೆಕ್ಟ್ ಮಾಡುವ ಮೂಲಕ ಪುರುಷತ್ವ ಹರಣ ಮಾಡಬೇಕು ಎಂದು ಪ್ರಾಸಿಕ್ಯೂಟರ್​ ಆಗ್ರಹಿಸಿದ್ದರು. ಅದೆರಡನ್ನೂ ಕೋರ್ಟ್ ತಿರಸ್ಕರಿಸಿ, ಜೀವಾವಧಿ ಶಿಕ್ಷೆ ವಿಧಿಸಿದೆ.

2016ರಲ್ಲಿ ಈ ವಿರಾವಾನ್ ಪಶ್ಚಿಮ ಜಾವಾದ ಬಂಡಂಗ್ ನಗರದಲ್ಲಿ ಇಸ್ಲಾಮಿಕ್​ ವಸತಿ ಶಾಲೆ ತೆರೆದಿದ್ದ. ತನ್ನ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಸ್ಕಾಲರ್​ಶಿಪ್​ ಸೇರಿ ಇನ್ನಿತರ ಆಮಿಷ ಒಡ್ಡುತ್ತಿದ್ದ. ಹೀಗಾಗಿ ಸ್ವಲ್ಪ ಬಡವರಾದವರು ತಮ್ಮ ಮಕ್ಕಳನ್ನು ಅಲ್ಲಿಯೇ ಸೇರಿಸಲು ಮುಂದಾಗುತ್ತಿದ್ದರು. 2016ರಿಂದ 2021ರವರೆಗೆ ಈತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ. ಕಳೆದ ವರ್ಷ ಮೇ ತಿಂಗಳಲ್ಲಿ ಈತನಿಂದ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಯೊಬ್ಬಳು ಗರ್ಭ ಧರಿಸಿದ್ದಳು. ಅದನ್ನು ಗಮನಿಸಿದ ಪಾಲಕರು ದೂರು ಕೊಟ್ಟಾಗ ತನಿಖೆ ನಡೆಯಿತು. ಆಗಲೇ ವಿರಾವಾನ್ ಕಾಮ ಪ್ರಕರಣಗಳು ಬಯಲಿಗೆ ಬಂದಿದ್ದು.

ಹೆರ್ರಿ ವಿರಾವಾನ್​ ತನ್ನ ವಸತಿ ಶಾಲೆಗೆ ಬರುವ ಹೆಣ್ಣುಮಕ್ಕಳಿಗೆ ನಿರ್ಬಂಧ ವಿಧಿಸುತ್ತಿದ್ದ. ಅವರ ಮೊಬೈಲ್​​ಗಳನ್ನು ವಶಪಡಿಸಿಕೊಳ್ಳುತ್ತಿದ್ದ. ಮನೆಯವರೊಂದಿಗೆ ಸಂಪರ್ಕದಲ್ಲಿರಲು ಬಿಡುತ್ತಿರಲಿಲ್ಲ. ವರ್ಷಕ್ಕೊಮ್ಮೆ ಮಾತ್ರ ಹೆಣ್ಣುಮಕ್ಕಳು ಮನೆಗೆ ಹೋಗಬಹುದಾಗಿತ್ತು. ಹೀಗಾಗಿ ತಮಗಾಗುತ್ತಿರುವ ಕಷ್ಟವನ್ನು ಯಾರ ಬಳಿಯೂ ಹೇಳಿಕೊಳ್ಳಲಾಗದೆ ಕಷ್ಟಪಡುತ್ತಿದ್ದರು. ಆದರೆ 2021ರ ಮೇ ತಿಂಗಳಲ್ಲಿ ಈತ ಸಿಕ್ಕಿಬಿದ್ದಿದ್ದಾನೆ. ಆಗಿನಿಂದಲೂ ಇಂಡೋನೇಷ್ಯಾದಲ್ಲಿ ಪ್ರಕರಣದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ಲೈಂಗಿಕ ದೌರ್ಜನ್ಯ ನಿರ್ಮೂಲನಾ ಕಾಯ್ದೆ ಜಾರಿಯಾಗಲೇಬೇಕು ಎಂಬ ಆಗ್ರಹವೂ ಜಾಸ್ತಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ: ಸಂಜಯ್ ರಾವುತ್

Published On - 9:38 am, Wed, 16 February 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ