AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ವಿಮೆ ಹಣ ಸಿಗಲಿ ಎಂದು ಸತ್ತಂತೆ ನಾಟಕವಾಡಿದ ಪತಿ, ಅಗಲುವಿಕೆಯ ನೋವು ತಾಳಲಾರದೆ ಮಕ್ಕಳ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಸಾಲದಿಂದ ತಪ್ಪಿಸಿಕೊಳ್ಳಲು ಹಾಗೂ ವಿಮೆ ಹಣಕ್ಕಾಗಿ ಚೀನಾದಲ್ಲಿ ಪತಿಯೊಬ್ಬ ತನ್ನ ಸಾವಿನ ನಾಟಕವಾಡಿದ್ದಾನೆ. ಆದರೆ, ಪತಿಯ ನಿಜವಾದ ಸಾವೆಂದು ನಂಬಿ ತೀವ್ರ ನೋವಿನಿಂದ ಕುಗ್ಗಿದ ಪತ್ನಿ, ಅನಾರೋಗ್ಯ ಪೀಡಿತ ಮಗಳ ಜವಾಬ್ದಾರಿ, ಆರ್ಥಿಕ ಹೊರೆಯಿಂದ ಹತಾಶಳಾಗಿ ತನ್ನಿಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಳು. ಈ ಭೀಕರ ಕೌಟುಂಬಿಕ ದುರಂತಕ್ಕೆ ಪತಿಯ ನಾಟಕ ಕಾರಣವಾಗಿತ್ತು. ನಂತರ ಪತಿ ಪೊಲೀಸರಿಗೆ ಶರಣಾಗಿದ್ದಾನೆ.

ಪತ್ನಿಗೆ ವಿಮೆ ಹಣ ಸಿಗಲಿ ಎಂದು ಸತ್ತಂತೆ ನಾಟಕವಾಡಿದ ಪತಿ, ಅಗಲುವಿಕೆಯ ನೋವು ತಾಳಲಾರದೆ ಮಕ್ಕಳ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ
ಪ್ರೀತಿImage Credit source: Beyond the Panorama
ನಯನಾ ರಾಜೀವ್
|

Updated on: Mar 02, 2026 | 11:34 AM

Share

ಬೀಜಿಂಗ್, ಮಾರ್ಚ್​ 02: ಎಂಥಾ ವಿಪರ್ಯಾಸ ನೋಡಿ, ಹೆಂಡತಿ ಮಕ್ಕಳು ಸುಖವಾಗಿರಬೇಕು ಎಂದು ಪತಿ ಸತ್ತಂತೆ ನಾಟವಾಡಿದರೆ, ಅದೇ ನಿಜವೆಂದು ನಂಬಿ ಮನನೊಂದು ಪತ್ನಿ ಹಾಗೂ ಮಕ್ಕಳು ನಿಜವಾಗಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಆಗ್ನೇಯ ಚೀನಾದ ಹುನಾನ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತುಂಬಾ ಸಾಲ ಮಾಡಿಕೊಂಡಿದ್ದ, ಅದರಿಂದ ತಪ್ಪಿಸಿಕೊಳ್ಳಲು ಸತ್ತಂತೆ ನಾಟಕವಾಡಿದ್ದ.

ತನ್ನ ಪತಿಯ ಹಠಾತ್ ಸಾವಿನ ಸುದ್ದಿಯಿಂದ ಆ ವ್ಯಕ್ತಿಯ ಪತ್ನಿ ದಂಗಾಗಿದ್ದಳು. ಆಕೆಯ ಪತಿಯ ಕಾರು ನದಿಯಲ್ಲಿ ಪತ್ತೆಯಾಗಿತ್ತು. ಆದರೂ ಶವ ಸಿಕ್ಕಿರಲಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ನಂಬಿದ್ದರು. ಆದರೆ ಸತ್ಯ ಬೇರೆಯದೇ ಆಗಿತ್ತು. ಆ ವ್ಯಕ್ತಿಗೆ 100,000 ಯುವಾನ್ ಅಥವಾ ಸುಮಾರು 1.2 ಮಿಲಿಯನ್ ರೂಪಾಯಿಗಳ ಸಾಲವಿತ್ತು, ಇದನ್ನು ಅವರು ತಮ್ಮ ಮೂರು ವರ್ಷದ ಮಗಳ ವೈದ್ಯಕೀಯ ಬಿಲ್‌ಗಳನ್ನು ಪಾವತಿಸಲು ಆನ್‌ಲೈನ್‌ನಲ್ಲಿ ವಿವಿಧ ಜನರಿಂದ ಸಾಲ ಪಡೆದಿದ್ದರು.

ಆ ವ್ಯಕ್ತಿಯ ಸಾವಿನ ಬಗ್ಗೆ ಅವರ ಪತ್ನಿಗೆ ತಿಳಿದಾಗ, ಅವರು ಚಿಂತಿತರಾಗಿದ್ದರು, ಏಕೆಂದರೆ ಅವರ ಅನಾರೋಗ್ಯ ಪೀಡಿತ ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಸಂಪೂರ್ಣವಾಗಿ ಅವರ ಮೇಲೆ ಬಿದ್ದಿತ್ತು. ಆತ ಪತ್ನಿಗೆ ತಿಳಿಯದಂತೆ 1 ಮಿಲಿಯನ್ ಯುವಾನ್ ವಿಮಾ ಯೋಜನೆ ಮಾಡಿದ್ದರು, ಆ ಹಣವು ಆಕೆಯ ಕೈ ಸೇರಿತ್ತು, ಅದರಿಂದ ಆಕೆ ಸಾಲ ತೀರಿಸಬಹುದು ಎಂಬುದು ವ್ಯಕ್ತಿಯ ಆಸೆ ಕೂಡ ಆಗಿತ್ತು.

ಮತ್ತಷ್ಟು ಓದಿ: ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ

ಆದರೆ ಪತಿ ಇಲ್ಲ ಎಂಬ ಕೊರಗು ತಪ್ಪು ಹೆಜ್ಜೆಯನ್ನು ಇಡುವಂತೆ ಮಾಡಿತ್ತು, ಆಕೆ ನಾಲ್ಕು ವರ್ಷದ ಮಗ ಹಾಗೂ ಮಗಳನ್ನು ಕೊಂದು ತಾನೂ ಕೂಡ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ ಎನ್ನುವ ವಿಚಾರ ಬೆಳಕಿಗೆ ಬಂದಿತ್ತು. ಮೊದಲು ಮಗನನ್ನು ಮುಳುಗಿಸಿ ಕೊನೆಗೆ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೀನಾದ ಸಾಮಾಜಿಕ ಮಾಧ್ಯಮ ತಾಣವಾದ ವಿಚಾಟ್​​ನಲ್ಲಿ ಆತ್ಮಹತ್ಯೆ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

ನಾನು ಒಬ್ಬಂಟಿಯಾಗಿ ಹೋಗಲು ಬಯಸಿದ್ದೆ, ಆದರೆ ನನ್ನ ಹೆತ್ತವರಿಲ್ಲದಿದ್ದರೆ, ನನ್ನ ಮಗ ಮತ್ತು ಮಗಳು ನನ್ನಂತೆಯೇ ಬಳಲುತ್ತಾರೆ ಮತ್ತು ಕಿರುಕುಳಕ್ಕೊಳಗಾಗುತ್ತಾರೆ ಹಾಗಾಗಿ ಅವರನ್ನು ಕೊಲ್ಲುವುದಾಗಿ ಬರೆದಿದ್ದಾರೆ.

ಈ ಪೋಸ್ಟ್ ಚೀನಾದಲ್ಲಿ ಬೇಗನೆ ವೈರಲ್ ಆಗಿ, ಪ್ರಕರಣವನ್ನು ರಾಷ್ಟ್ರೀಯ ಸಂಚಲನವನ್ನಾಗಿ ಮಾಡಿತು. ಮಹಿಳೆಯ ಪತಿ ಪೊಲೀಸರಿಗೆ ಶರಣಾದರು ಸಾಲದಿಂದ ತಪ್ಪಿಸಿಕೊಳ್ಳಲು ತಾನು ನಾಟಕವಾಡಿದ್ದಾಗಿ ಹೇಳಿದ್ದಾರೆ.ವಿಮಾ ಪಾಲಿಸಿಯು ತನ್ನ ಮಗಳ ವೈದ್ಯಕೀಯ ಚಿಕಿತ್ಸೆಗೆ ಹಣ ನೀಡಲು ಸಹಾಯ ಮಾಡುತ್ತದೆ ಎಂದು ನಂಬಿದ್ದರು. ನಾನು ನನ್ನ ಪ್ಲ್ಯಾನ್ ಅನ್ನು ಆಕೆಗೆ ಹೇಳಿರಲಿಲ್ಲ ಅದೇ ತನ್ನ ದೊಡ್ಡ ತಪ್ಪು ಎಂದು ಕಣ್ಣೀರಿಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ