Sign In

By signing in or creating an account, you agree with Associated Broadcasting Company's Terms & Conditions and Privacy Policy.

Iowa School Shootout: ಅಯೋವಾ ಶಾಲೆಯಲ್ಲಿ ಗುಂಡಿನ ದಾಳಿ; ವಿದ್ಯಾರ್ಥಿ ಸಾವು, ಆರೋಪಿ ಆತ್ಮಹತ್ಯೆ

ಅಮೆರಿಕದ ಅಯೋವಾ ನಗರದ ಶಾಲೆಯಲ್ಲಿ ಗುಂಡಿನ ದಾಳಿ ನಡೆದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೃತ್ಯದ ನಂತರ ಆರೋಪಿ ವಿದ್ಯಾರ್ಥಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Iowa School Shootout: ಅಯೋವಾ ಶಾಲೆಯಲ್ಲಿ ಗುಂಡಿನ ದಾಳಿ; ವಿದ್ಯಾರ್ಥಿ ಸಾವು, ಆರೋಪಿ ಆತ್ಮಹತ್ಯೆ
ಅಯೋವಾ ಶಾಲೆಯಲ್ಲಿ ಗುಂಡಿನ ದಾಳಿ; ವಿದ್ಯಾರ್ಥಿ ಸಾವು, ಆರೋಪಿ ಆತ್ಮಹತ್ಯೆ Image Credit source: Christian Monterrosa / AFP - Getty Images
Follow us
TV9 Web
| Updated By: Rakesh Nayak Manchi

Updated on:Jan 05, 2024 | 6:57 AM

ಪೆರ್ರಿ, ಅಯೋವಾ, ಜನವರಿ 5: ಅಮೆರಿಕದ ಅಯೋವಾ ನಗರದ ಶಾಲೆಯಲ್ಲಿ ಗುಂಡಿನ ದಾಳಿ (Iowa School Shootout) ನಡೆದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೃತ್ಯದ ನಂತರ ಆರೋಪಿ 17 ವರ್ಷದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಾರಿ ಅಧಿಕಾರಿಗಳು, ಚಳಿಗಾಲದ ರಜೆ ಮುಗಿದು ತರಗತಿಗಳು ಆರಂಭವಾದ ಮೊದಲ ದಿನವೇ ಶಾಲೆಗೆ ನುಗ್ಗಿ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಐವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Video: ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಬಂಧಿತ ಕೈದಿ

ಆರೋಪಿಯನ್ನು ಪೆರ್ರಿ ಹೈಸ್ಕೂಲ್‌ನ ವಿದ್ಯಾರ್ಥಿ ಡೈಲನ್ ಬಟ್ಲರ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃತ್ಯದ ನಂತರ ಸ್ವಯಂ ಪ್ರೇರಿತ ಗುಂಡೇಟಿನಿಂದ ಆತ ಮೃತಪಟ್ಟಿರುವುದು ಕಂಡುಬಂದಿದೆ ಎಂದರು. ಪೆರ್ರಿ ಹೈಸ್ಕೂಲ್‌ನಲ್ಲಿ ನಡೆದ ಗುಂಡಿನ ದಾಳಿಯು ಬೆಳಗ್ಗೆ 7:30 ರ ನಂತರ ನಡೆಯಿತು ಎಂದು ಡಲ್ಲಾಸ್ ಕೌಂಟಿ ಶೆರಿಫ್ ಆಡಮ್ ಇನ್‌ಫಾಂಟೆ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Fri, 5 January 24

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ