AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​​ನಲ್ಲಿ ಭೀಕರ ಅಪಘಾತ; ಬಸ್ ಪಲ್ಟಿಯಾಗಿ 21 ಜನರು ಸಾವು, 34 ಜನರಿಗೆ ಗಾಯ

ಇರಾನ್​​ನಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆಗಳು ಪೂರ್ಣಗೊಂಡ ನಂತರ ಮತ್ತು ವಿವರವಾದ ತನಿಖೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಮತ್ತು ಅಂತಿಮ ಸಾವಿನ ಸಂಖ್ಯೆಯನ್ನು ಘೋಷಿಸಲಾಗುತ್ತದೆ. ಈ ಅಪಘಾತದ ಕಾರಣ ಇನ್ನೂ ತನಿಖೆಯಲ್ಲಿದೆ. ಅಪಘಾತವು ಬೆಳಿಗ್ಗೆ 11.05ರ ಸುಮಾರಿಗೆ ಸಂಭವಿಸಿದೆ.

ಇರಾನ್​​ನಲ್ಲಿ ಭೀಕರ ಅಪಘಾತ; ಬಸ್ ಪಲ್ಟಿಯಾಗಿ 21 ಜನರು ಸಾವು, 34 ಜನರಿಗೆ ಗಾಯ
Iran Bus Accident
ಸುಷ್ಮಾ ಚಕ್ರೆ
|

Updated on: Jul 19, 2025 | 9:12 PM

Share

ಟೆಹ್ರಾನ್, ಜುಲೈ 19: ದಕ್ಷಿಣ ಇರಾನ್‌ನಲ್ಲಿ (Iran) ಬಸ್ ಉರುಳಿಬಿದ್ದ ನಂತರ 21 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಂತ್ಯದ ರಾಜಧಾನಿಯಾದ ದಕ್ಷಿಣ ಶಿರಾಜ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ 34 ಜನರು ಗಾಯಗೊಂಡಿದ್ದಾರೆ ಎಂದು ಫಾರ್ಸ್ ಪ್ರಾಂತ್ಯದ ತುರ್ತು ಸಂಸ್ಥೆಯ ಮುಖ್ಯಸ್ಥ ಮಸೌದ್ ಅಬೆದ್ ಹೇಳಿದ್ದಾರೆ. ಈಗ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆ ಪೂರ್ಣಗೊಂಡ ನಂತರ ಮತ್ತು ವಿವರವಾದ ತನಿಖೆ ನಡೆಸಿದ ನಂತರ ಹೆಚ್ಚುವರಿ ಮಾಹಿತಿ ಮತ್ತು ಅಂತಿಮ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದ ಕಾರಣ ಇನ್ನೂ ತನಿಖೆಯಲ್ಲಿದೆ. ಅಪಘಾತವು ಬೆಳಿಗ್ಗೆ 11.05ರ ಸುಮಾರಿಗೆ ಸಂಭವಿಸಿದೆ. ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಲಾಗಿದ್ದು, ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಅಬೆದ್ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಕ್ಕೆ ಇರಾನ್​ನ ಸಂಪೂರ್ಣ ಪರಮಾಣು ಸಾಮರ್ಥ್ಯ ನಾಶಮಾಡಲು ಸಾಧ್ಯವಾಗಿಲ್ಲ: ಗುಪ್ತಚರ ವರದಿ

ವಾರ್ಷಿಕವಾಗಿ ಸುಮಾರು 17,000 ಸಾವು-ನೋವುಗಳೊಂದಿಗೆ ಇರಾನ್ ರಸ್ತೆ ಅಪಘಾತಗಳಿಗೆ ಅಗ್ರ ದೇಶಗಳಲ್ಲಿ ಒಂದಾಗಿದೆ ಎಂದು ವರದಿಯಾಗಿದೆ. ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸುವುದು, ಹಳೆಯ ವಾಹನಗಳ ಬಳಕೆ ಮತ್ತು ಅಸಮರ್ಪಕ ತುರ್ತು ಸೇವೆಗಳು ಇಲ್ಲಿನ ಅಪಘಾತ ಹೆಚ್ಚಳಕ್ಕೆ ಕಾರಣವಾಗಿವೆ.

ಇನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!