AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​​ನಲ್ಲಿ ಭೀಕರ ಅಪಘಾತ; ಬಸ್ ಪಲ್ಟಿಯಾಗಿ 21 ಜನರು ಸಾವು, 34 ಜನರಿಗೆ ಗಾಯ

ಇರಾನ್​​ನಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆಗಳು ಪೂರ್ಣಗೊಂಡ ನಂತರ ಮತ್ತು ವಿವರವಾದ ತನಿಖೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಮತ್ತು ಅಂತಿಮ ಸಾವಿನ ಸಂಖ್ಯೆಯನ್ನು ಘೋಷಿಸಲಾಗುತ್ತದೆ. ಈ ಅಪಘಾತದ ಕಾರಣ ಇನ್ನೂ ತನಿಖೆಯಲ್ಲಿದೆ. ಅಪಘಾತವು ಬೆಳಿಗ್ಗೆ 11.05ರ ಸುಮಾರಿಗೆ ಸಂಭವಿಸಿದೆ.

ಇರಾನ್​​ನಲ್ಲಿ ಭೀಕರ ಅಪಘಾತ; ಬಸ್ ಪಲ್ಟಿಯಾಗಿ 21 ಜನರು ಸಾವು, 34 ಜನರಿಗೆ ಗಾಯ
Iran Bus Accident
ಸುಷ್ಮಾ ಚಕ್ರೆ
|

Updated on: Jul 19, 2025 | 9:12 PM

Share

ಟೆಹ್ರಾನ್, ಜುಲೈ 19: ದಕ್ಷಿಣ ಇರಾನ್‌ನಲ್ಲಿ (Iran) ಬಸ್ ಉರುಳಿಬಿದ್ದ ನಂತರ 21 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಂತ್ಯದ ರಾಜಧಾನಿಯಾದ ದಕ್ಷಿಣ ಶಿರಾಜ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ 34 ಜನರು ಗಾಯಗೊಂಡಿದ್ದಾರೆ ಎಂದು ಫಾರ್ಸ್ ಪ್ರಾಂತ್ಯದ ತುರ್ತು ಸಂಸ್ಥೆಯ ಮುಖ್ಯಸ್ಥ ಮಸೌದ್ ಅಬೆದ್ ಹೇಳಿದ್ದಾರೆ. ಈಗ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಕಾರ್ಯಾಚರಣೆ ಪೂರ್ಣಗೊಂಡ ನಂತರ ಮತ್ತು ವಿವರವಾದ ತನಿಖೆ ನಡೆಸಿದ ನಂತರ ಹೆಚ್ಚುವರಿ ಮಾಹಿತಿ ಮತ್ತು ಅಂತಿಮ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದ ಕಾರಣ ಇನ್ನೂ ತನಿಖೆಯಲ್ಲಿದೆ. ಅಪಘಾತವು ಬೆಳಿಗ್ಗೆ 11.05ರ ಸುಮಾರಿಗೆ ಸಂಭವಿಸಿದೆ. ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಲಾಗಿದ್ದು, ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಅಬೆದ್ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಕ್ಕೆ ಇರಾನ್​ನ ಸಂಪೂರ್ಣ ಪರಮಾಣು ಸಾಮರ್ಥ್ಯ ನಾಶಮಾಡಲು ಸಾಧ್ಯವಾಗಿಲ್ಲ: ಗುಪ್ತಚರ ವರದಿ

ವಾರ್ಷಿಕವಾಗಿ ಸುಮಾರು 17,000 ಸಾವು-ನೋವುಗಳೊಂದಿಗೆ ಇರಾನ್ ರಸ್ತೆ ಅಪಘಾತಗಳಿಗೆ ಅಗ್ರ ದೇಶಗಳಲ್ಲಿ ಒಂದಾಗಿದೆ ಎಂದು ವರದಿಯಾಗಿದೆ. ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸುವುದು, ಹಳೆಯ ವಾಹನಗಳ ಬಳಕೆ ಮತ್ತು ಅಸಮರ್ಪಕ ತುರ್ತು ಸೇವೆಗಳು ಇಲ್ಲಿನ ಅಪಘಾತ ಹೆಚ್ಚಳಕ್ಕೆ ಕಾರಣವಾಗಿವೆ.

ಇನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ