AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜ್ಬುಲ್ಲಾ ಮುಖ್ಯಸ್ಥನ ಸಾವು: ಭದ್ರತಾ ಮಂಡಳಿ ಸಭೆ ಕರೆದ ಇರಾನ್

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ವಿಶೇಷವಾಗಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆಯ ನಂತರ, ಇರಾನ್ ಯಹೂದಿ ರಾಷ್ಟ್ರದ ಮೇಲೆ ಸೇಡು ತೀರಿಸಿಕೊಳ್ಳಲು ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ.

ಹಿಜ್ಬುಲ್ಲಾ ಮುಖ್ಯಸ್ಥನ ಸಾವು: ಭದ್ರತಾ ಮಂಡಳಿ ಸಭೆ ಕರೆದ ಇರಾನ್
Image Credit source: India Today
ನಯನಾ ರಾಜೀವ್
|

Updated on: Sep 29, 2024 | 8:56 AM

Share

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ವಿಶೇಷವಾಗಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆಯ ನಂತರ, ಇರಾನ್ ಯಹೂದಿ ರಾಷ್ಟ್ರದ ಮೇಲೆ ಸೇಡು ತೀರಿಸಿಕೊಳ್ಳಲು ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ.

ಲೆಬನಾನ್‌ನಲ್ಲಿ ಇಸ್ರೇಲಿ ನಡೆಸಿದ ದಾಳಿಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 195 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ಎರಡು ವಾರಗಳಲ್ಲಿ ಇಸ್ರೇಲಿ ದಾಳಿಯ ಪರಿಣಾಮವಾಗಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 6,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ ಮತ್ತು ಸುಮಾರು ಒಂದು ಮಿಲಿಯನ್ ಲೆಬನಾನ್ ಜನರು ಸ್ಥಳಾಂತರಗೊಂಡಿದ್ದಾರೆ.

ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಯನ್ನು ಖಂಡಿಸಿ ಮತ್ತು ಲೆಬನಾನ್ ವಿರುದ್ಧ ಇಸ್ರೇಲ್ ದಾಳಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ಟೆಹ್ರಾನ್ ಮತ್ತು ದೇಶದಾದ್ಯಂತ ಶನಿವಾರ ಸಾವಿರಾರು ಇರಾನಿಯನ್ನರು ಬೀದಿಗಿಳಿದರು.

ಮತ್ತಷ್ಟು ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮುಖ್ಯಸ್ಥರನ್ನು ಹತ್ಯೆ ಮಾಡಲು ಇಸ್ರೇಲ್ ಯಾವ ರೀತಿ ಕಾರ್ಯಾಚರಣೆ ನಡೆಸಿತು?

ನಸ್ರಲ್ಲಾ ಹತ್ಯೆಯನ್ನು ಇಸ್ರೇಲ್ ದೃಢಪಡಿಸಿದ ನಂತರ ಸಿರಿಯಾದಲ್ಲಿ ಸಂಭ್ರಮಾಚರಣೆಗಳು ನಡೆದವು. ಉಗ್ರಗಾಮಿ ಗುಂಪು ಸಿರಿಯನ್ ಕ್ರಾಂತಿಯನ್ನು ನಿಗ್ರಹಿಸಲು ಅಧ್ಯಕ್ಷ ಬಶರ್ ಅಲ್-ಅಸ್ಸಾದ್‌ಗೆ ಸಹಾಯ ಮಾಡಿದ್ದರಿಂದ ಹಿಜ್ಬುಲ್ಲಾವನ್ನು ಜನರು ಶತ್ರುವಾಗಿ ನೋಡುತ್ತಾರೆ.

ಗಾಜಾ ಮತ್ತು ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯಿಂದ ಇರಾನ್ ಕೋಪಗೊಂಡಿದೆ. ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಇಸ್ರೇಲ್ ನಡೆದ ದಾಳಿಗೆ ಬಾಂಬ್​ಗಳನ್ನು ಅಮೆರಿಕವು ಇಸ್ರೇಲ್​ಗೆ ಉಡುಗೊರೆಯಾಗಿ ನೀಡಿದೆ ಎಂದು ಇರಾನ್ ಆರೋಪಿಸಿದೆ. ಈ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಅಮೆರಿಕ ನೀಡಿದ 5,000 ಪೌಂಡ್ ತೂಕದ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿದೆ ಎಂದು ಇರಾನ್ ಹೇಳಿದೆ. ಆದಾಗ್ಯೂ, ಈ ದಾಳಿಯ ಬಗ್ಗೆ ನಮಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ ಎಂದು ಹಿಜ್ಬುಲ್ಲಾ ಮುಖ್ಯಸ್ಥರ ಮೇಲಿನ ದಾಳಿಯ ಕುರಿತು ಅಮೆರಿಕ ಹೇಳಿದೆ. ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರನ್ನು ಕೊಂದಿರುವುದಾಗಿ ಐಡಿಎಫ್  ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ