AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರ್ಡಾನ್‌ ವಾಯುನೆಲೆಯಲ್ಲಿ ಇರಾನ್​ನಿಂದ ಅಮೆರಿಕದ ಹಲವು ಯುದ್ಧ ವಿಮಾನಗಳು ಧ್ವಂಸ

ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವು ಭೀಕರ ಸ್ವರೂಪ ಪಡೆದುಕೊಂಡಿದೆ. ಅಮೆರಿಕ ನಡೆಸಿದ ರಾತ್ರಿ ಅವಧಿಯ ಬಾಂಬ್ ದಾಳಿಗೆ ಪ್ರತಿಕಾರವಾಗಿ, ಜೋರ್ಡಾನ್‌ನಲ್ಲಿ ಬೀಡುಬಿಟ್ಟಿರುವ ಅಮೆರಿಕ ಸೇನೆಯ ಹಲವು ಯುದ್ಧ ವಿಮಾನಗಳು ಮತ್ತು ಇಂಧನ ರೀಫಿಲ್ಲಿಂಗ್ ವಿಮಾನಗಳನ್ನು ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಮೂಲಕ ಧ್ವಂಸಗೊಳಿಸಿರುವುದಾಗಿ ಇರಾನ್ ಹೇಳಿಕೊಂಡಿದೆ. ಅಲ್ಲದೆ ವಾಯುನೆಲೆಯಲ್ಲಿ ಪಾರ್ಕ್ ಮಾಡಲಾಗಿದ್ದ ಇನ್ನು ಹಲವು ಯುದ್ಧ ವಿಮಾನಗಳಿಗೆ ತೀವ್ರ ಹಾನಿ ಉಂಟುಮಾಡಲಾಗಿದೆ ಎಂದು ಇರಾನ್ ಹೇಳಿದೆ.

ಜೋರ್ಡಾನ್‌ ವಾಯುನೆಲೆಯಲ್ಲಿ ಇರಾನ್​ನಿಂದ ಅಮೆರಿಕದ ಹಲವು ಯುದ್ಧ ವಿಮಾನಗಳು ಧ್ವಂಸ
Iran Attack On Jordan BaseImage Credit source: x
ಸುಷ್ಮಾ ಚಕ್ರೆ
|

Updated on:Jul 17, 2026 | 4:30 PM

Share

ಮುಖ್ಯಾಂಶಗಳು

  • ಇರಾನ್-ಅಮೆರಿಕದ ನಡುವೆ ಹೆಚ್ಚಿದ ಸಂಘರ್ಷ
  • ಜೋರ್ಡಾನ್ ವಾಯುನೆಲೆಯಲ್ಲಿ ಇರಾನ್ ಭೀಕರ ದಾಳಿ
  • ಅಮೆರಿಕದ ಯುದ್ಧ ವಿಮಾನಗಳನ್ನು ಧ್ವಂಸಗೊಳಿಸಿದ ಇರಾನ್

ಟೆಹ್ರಾನ್, ಜುಲೈ 17: ಜೋರ್ಡಾನ್‌ನಲ್ಲಿ ಅಮೆರಿಕದ (United States) ಯುದ್ಧ ವಿಮಾನಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಪ್ರತಿಪಾದಿಸಿದೆ. ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಮಧ್ಯೆ, ಜೋರ್ಡಾನ್‌ನಲ್ಲಿ ಬೀಡುಬಿಟ್ಟಿರುವ ಅಮೆರಿಕದ ಯುದ್ಧ ವಿಮಾನಗಳು ಮತ್ತು ಇಂಧನ ಮರುಪೂರಣ ವಿಮಾನಗಳ ಮೇಲೆ ಭಾರಿ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ (Iran) ಅಧಿಕೃತವಾಗಿ ಘೋಷಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಜೋರ್ಡಾನ್‌ನ ಅಲ್-ಅಜ್ರಾಕ್ ವಾಯುನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ.

ಇರಾನ್ ಸೇನೆಯ ಹೇಳಿದ್ದೇನು?:

ಜೋರ್ಡಾನ್‌ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಹಲವು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಅಸಂಖ್ಯಾತ ಡ್ರೋನ್‌ಗಳ ಮೂಲಕ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅಮೆರಿಕದ ಹಲವು ಯುದ್ಧ ವಿಮಾನಗಳು ಮತ್ತು ಇಂಧನ ತುಂಬಿಸುವ ಟ್ಯಾಂಕರ್ ವಿಮಾನಗಳು ಸಂಪೂರ್ಣವಾಗಿ ನಾಶವಾಗಿವೆ. ಇನ್ನೂ ಹಲವು ವಿಮಾನಗಳಿಗೆ ತೀವ್ರ ಹಾನಿಯಾಗಿದೆ ಎಂದು ಇರಾನ್ ಹೇಳಿಕೊಂಡಿದೆ.

ಇದನ್ನೂ ಓದಿ: ‘ಟ್ರಂಪ್‌ನನ್ನು ಕೊಲ್ಲುತ್ತೇವೆ’; ಇರಾನ್‌ನಲ್ಲಿ ಬೃಹತ್ ಬ್ಯಾನರ್!

ಇರಾನ್‌ನ ಒಳಗಿನ ಸೇತುವೆಗಳು ಮತ್ತು ಮೂಲಸೌಕರ್ಯಗಳ ಮೇಲೆ ಅಮೆರಿಕ ಇತ್ತೀಚೆಗೆ ನಡೆಸಿದ ರಾತ್ರಿ ಅವಧಿಯ ಬಾಂಬ್ ದಾಳಿಗೆ ಪ್ರತೀಕಾರವಾಗಿ ಈ ದಾಳಿಯನ್ನು ನಡೆಸಿರುವುದಾಗಿ ಇರಾನ್ ತಿಳಿಸಿದೆ. ಇದೇ ವೇಳೆ, ಜೋರ್ಡಾನ್‌ನಲ್ಲಿರುವ ಅಮೆರಿಕದ ವಿರೋಧಿ ಹಿತಾಸಕ್ತಿಗಳನ್ನು ಗುರಿಯಾಗಿಸಿಕೊಳ್ಳುವಂತೆ ಇರಾನ್ ಅಲ್ಲಿನ ಸ್ಥಳೀಯ ಜನರಿಗೂ ಕರೆ ನೀಡಿದೆ.

ಆಸ್ಪತ್ರೆಯ ಮೇಲಿನ ದಾಳಿಗೆ ಪ್ರತೀಕಾರ:

ಖುಜೆಸ್ತಾನ್ ಪ್ರಾಂತ್ಯದ ಅಹ್ವಾಜ್‌ನಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ಅಮೆರಿಕದ ರಾತ್ರಿ ಅವಧಿಯ ದಾಳಿಗಳು ಧ್ವಂಸಗೊಳಿಸಿದ್ದು, ಇದಕ್ಕೆ ಪ್ರತಿಕಾರವಾಗಿಯೇ ಈ ದಾಳಿ ನಡೆಸಲಾಗಿದೆ ಎಂದು ಇರಾನ್ ತಿಳಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ತನ್ನ ಹೇಳಿಕೆಯಲ್ಲಿ ಜೋರ್ಡಾನ್ ದೇಶದ ನಾಗರಿಕರು ತಮ್ಮ ದೇಶದಲ್ಲಿರುವ “ಆಕ್ರಮಣಕಾರಿ ಮತ್ತು ಇಸ್ಲಾಂ ವಿರೋಧಿ ಅಮೆರಿಕನ್ನರ ಹಿತಾಸಕ್ತಿಗಳನ್ನು” ಗುರಿಯಾಗಿಸಿಕೊಂಡು ದಾಳಿ ನಡೆಸಬೇಕು ಎಂದು ಕರೆ ನೀಡಿದೆ.

ಇದನ್ನೂ ಓದಿ: ನಾವು ಯಾವುದೇ ಒಪ್ಪಂದ, ಮಾತುಕತೆಗೆ ಸಿದ್ಧವಿಲ್ಲ, ಯುಎಸ್ ಜೊತೆಗಿನ ಶಾಂತಿ ಒಪ್ಪಂದ ರದ್ದು ಎಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಫೆಬ್ರವರಿ 28ರಿಂದ ಯುದ್ಧ ಆರಂಭವಾದಾಗಿನಿಂದ ಇರಾನ್ ಪ್ರಾದೇಶಿಕವಾಗಿರುವ ಹಲವು ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ನಡೆಸುತ್ತಾ ಬಂದಿದೆ. ಗಲ್ಫ್ ರಾಷ್ಟ್ರಗಳು ಇದನ್ನು ತೀವ್ರವಾಗಿ ಖಂಡಿಸಿವೆ. ಇರಾನ್ ಪ್ರಮುಖವಾಗಿ ಕುವೈತ್, ಬಹ್ರೇನ್ ಮತ್ತು ಕತಾರ್​ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದು, ಈ ಮೂರೂ ದೇಶಗಳು ಇರಾನ್‌ನ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ವರದಿ ಮಾಡಿವೆ. ಇದರೊಂದಿಗೆ ಸಿರಿಯಾದಲ್ಲಿರುವ ಅಮೆರಿಕ ನೆಲೆಯ ಮೇಲೆಯೂ ಇರಾನ್ ದಾಳಿ ಮಾಡಿದೆ ಎಂದು ಹೇಳಿಕೊಂಡಿದೆಯಾದರೂ, ವಾಷಿಂಗ್ಟನ್ ಅಥವಾ ಸಿರಿಯಾ ಸರ್ಕಾರ ಇದನ್ನು ಖಚಿತಪಡಿಸಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:28 pm, Fri, 17 July 26

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!