AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Vaccine: ಕೊರೊನಾ ಲಸಿಕೆ ತೆಗೆದುಕೊಂಡವರು ಸಲಿಂಗಕಾಮಿಗಳಾಗ್ತಾರೆ: ಇರಾನ್ ಧರ್ಮಗುರು

Corona Vaccine: 2 ಲಕ್ಷಕ್ಕೂ ಅಧಿಕ ಹಿಂಬಾಲಕರಿರುವ ಟೆಲಿಗ್ರಾಂ ಗುಂಪಿನಲ್ಲಿ, ಕೊರೊನಾ ಲಸಿಕೆ ಪಡೆದವರ ಹತ್ತಿರಕ್ಕೆ ಯಾರೂ ಹೋಗಬೇಡಿ. ಅವರು ಸಲಿಂಗಿಗಳಾಗಿ ಪರಿವರ್ತನೆ ಹೊಂದಿರುತ್ತಾರೆ ಎಂದು ಧರ್ಮಗುರು ಹೇಳಿಕೆ ನೀಡಿದ್ದಾರೆ.

Covid-19 Vaccine: ಕೊರೊನಾ ಲಸಿಕೆ ತೆಗೆದುಕೊಂಡವರು ಸಲಿಂಗಕಾಮಿಗಳಾಗ್ತಾರೆ: ಇರಾನ್ ಧರ್ಮಗುರು
ಇರಾನಿನ ಧರ್ಮಗುರು ಅಯಾತೊಲ್ಲಾ ಅಬ್ಬಾಸ್ ತಬ್ರೀಜಿಯನ್
Skanda
|

Updated on:Feb 10, 2021 | 3:41 PM

Share

ಕೊರೊನಾ ಲಸಿಕೆಯ (Corona Vaccine) ಬಗ್ಗೆ ಒಂದೊಂದು ದೇಶಗಳಲ್ಲಿ ಒಂದೊಂದು ತೆರನಾದ ಊಹಾಪೋಹಗಳಿವೆ. ಲಸಿಕೆಯನ್ನು ವೈಜ್ಞಾನಿಕವಾಗಿ ತಯಾರಿಸಿದ್ದರೂ ಅದಕ್ಕೆ ಹತ್ತಾರು ರೀತಿಯ ಧಾರ್ಮಿಕ ಕಾರಣಗಳು ಅಂಟಿಕೊಂಡು ಅವಾಂತರ ಸೃಷ್ಟಿಸಿವೆ. ಇದೇ ಕಾರಣಕ್ಕಾಗಿ ಎಷ್ಟೋ ಕಡೆಗಳಲ್ಲಿ ಜನರು ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕಿದ ಉದಾಹರಣೆಗಳೂ ಇವೆ. ಇದೀಗ ಇರಾನಿನ ಧರ್ಮಗುರು ಅಯಾತೊಲ್ಲಾ ಅಬ್ಬಾಸ್ ತಬ್ರೀಜಿಯನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕೊರೊನಾ ಲಸಿಕೆ ಪಡೆದವರು ಸಲಿಂಗಿಗಳಾಗುತ್ತಾರೆ (Homosexual) ಎನ್ನುವ ಮೂಲಕ ಲಸಿಕೆ ಬಗ್ಗೆ ಅಪಪ್ರಚಾರ ಎಬ್ಬಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟೆಲಿಗ್ರಾಂ ಮೂಲಕ ಇಂತಹ ತಪ್ಪು ಸಂದೇಶವನ್ನು ಹರಿಬಿಟ್ಟಿರುವ ಧರ್ಮಗುರುವಿನ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. 2 ಲಕ್ಷಕ್ಕೂ ಅಧಿಕ ಹಿಂಬಾಲಕರಿರುವ ಗುಂಪಿನಲ್ಲಿ, ಕೊರೊನಾ ಲಸಿಕೆ ಪಡೆದವರ ಹತ್ತಿರಕ್ಕೆ ಯಾರೂ ಹೋಗಬೇಡಿ. ಅವರು ಸಲಿಂಗಿಗಳಾಗಿ ಪರಿವರ್ತನೆ ಹೊಂದಿರುತ್ತಾರೆ ಎಂದು ಬರೆದಿರುವ ಅಯಾತೊಲ್ಲಾ ಅಬ್ಬಾಸ್ ತಬ್ರೀಜಿಯನ್ ಈ ಹಿಂದೆಯೂ ಅನೇಕ ಸುಳ್ಳುಸುದ್ದಿ ಮತ್ತು ವಿವಾದಾತ್ಮಕ ವಿಚಾರಗಳನ್ನು ಹರಿಬಿಟ್ಟು ಜನರ ದಾರಿ ತಪ್ಪಿಸಿದ ಅಪಕೀರ್ತಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: ವಿವಾದಿತ ಗಾಯಕಿ ರಿಹಾನ್ನಾ ಮಾತೃದೇಶಕ್ಕೆ ಭಾರತದ ಕೊರೊನಾ ಲಸಿಕೆ ಸರಬರಾಜಾಯ್ತು!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಪ್ರಮುಖ ರಾಜಕೀಯ ಮುಖಂಡರು ಹೀಗೆ ಸುಳ್ಳುಸುದ್ದಿ ಹರಿಬಿಡುವ ಧರ್ಮಗುರುವಿನ ವಿರುದ್ಧ ಕಿಡಿಕಾರಿದ್ದಾರೆ. ಇರಾನಿನ ಕೆಲ ಧರ್ಮಗುರುಗಳಿಗೆ ಸಾಮಾನ್ಯ ಜ್ಞಾನದ ಕೊರತೆ ಇದೆ. ಅವರು ತಮ್ಮ ಮೂಗಿನ ನೇರಕ್ಕೆ ಹೇಳಿಕೆ ನೀಡುವ ಮೂಲಕ ಜನರನ್ನು ದಾರಿತಪ್ಪಿಸಿ ಭಯಗೊಳಿಸುತ್ತಿದ್ದಾರೆ. ಅಲ್ಲದೇ, ಕೊರೊನಾ ಲಸಿಕೆ ಪಡೆಯಬೇಡಿ ಎನ್ನುವ ಮೂಲಕ ಜನಸಾಮಾನ್ಯರ ಜೀವವನ್ನು ಅಪಾಯಕ್ಕೆ ನೂಕುತ್ತಿದ್ದಾರೆ. ಜನರು ಇಂಥವರ ಮಾತುಗಳನ್ನು ಕೇಳಬಾರದು ಎಂದು ತಿಳಿಸಿದ್ದಾರೆ.

ಈ ಹಿಂದೆಯೂ ವಿವಿಧ ಧರ್ಮದ ಮುಖಂಡರು ಕೊರೊನಾ ಲಸಿಕೆಗೆ ಹಂದಿ ಕೊಬ್ಬು ಸೇರಿಸಲಾಗಿದೆ, ದನದ ರಕ್ತ ಬೆರೆಸಲಾಗಿದೆ ಎಂದು ಹೇಳುವ ಮೂಲಕ ಜನರ ಧಾರ್ಮಿಕ ಭಾವನೆ ಕದಡುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಈ ರೀತಿಯ ಮೌಢ್ಯ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಜಗತ್ತಿನ ಮುಂದುವರಿದ ದೇಶಗಳಲ್ಲೂ ಇದೆ ಎನ್ನುವುದು ನಿಜಕ್ಕೂ ಅಚ್ಚರಿಯ ಸಂಗತಿ.

Published On - 8:18 pm, Tue, 9 February 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?