AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ಇರಾನ್-ಇಸ್ರೇಲ್-ಅಮೆರಿಕದ ನಡುವಿನ ಸಂಘರ್ಷ ಕೊನೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಅಮೆರಿಕದ ಜೊತೆ ಇರಾನ್ ಒಪ್ಪಂದ ಮಾಡಿಕೊಂಡಿದ್ದರೂ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿದೆ. ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿರುವುದರಿಂದ ಇರಾನ್ ಸೇನೆಯು ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿರುವುದಾಗಿ ಘೋಷಿಸಿದೆ. ಇದರಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮತ್ತೆ ಬಿಕ್ಕಟ್ಟು ಎದುರಾಗಿದೆ.

ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್
Khamenei And Trump
ಸುಷ್ಮಾ ಚಕ್ರೆ
|

Updated on: Jun 20, 2026 | 8:23 PM

Share

ಟೆಹ್ರಾನ್, ಜೂನ್ 20: ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳನ್ನು ವಿರೋಧಿಸಿ ಇರಾನ್ ಮಿಲಿಟರಿ ಜಾಗತಿಕ ಮಟ್ಟದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೊಮ್ಮೆ ಸಂಪೂರ್ಣವಾಗಿ ಮುಚ್ಚಿದೆ. ಇತ್ತೀಚೆಗೆ ಮಾಡಿಕೊಳ್ಳಲಾಗಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಕೂಡ ಇರಾನ್ ಆರೋಪ ಮಾಡಿದೆ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸುತ್ತಿರುವ ತೀವ್ರ ದಾಳಿಗಳ ಹಿಂದೆ ಅಮೆರಿಕದ ಕುಮ್ಮಕ್ಕಿದೆ ಎಂದು ಇರಾನ್ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಾದೇಶಿಕ ಭದ್ರತೆಗೆ ಧಕ್ಕೆ ಬಂದಿರುವುದರಿಂದ ನಮ್ಮ ಸಾರ್ವಭೌಮತ್ವ ಮತ್ತು ಹಿತಾಸಕ್ತಿಗಳನ್ನು ರಕ್ಷಿಸಲು ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಿರುವುದಾಗಿ ಇರಾನ್ ಮಿಲಿಟರಿ ಪ್ರಕಟಿಸಿದೆ. ಇತ್ತೀಚೆಗಷ್ಟೇ ನಡೆದಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಅಮೆರಿಕ ಗಾಳಿಗೆ ತೂರಿದೆ ಎಂದು ಇರಾನ್ ಮುಖಂಡರು ಆರೋಪಿಸಿದ್ದಾರೆ. “ಒಂದೆಡೆ ಶಾಂತಿ ಮಾತುಕತೆ ನಡೆಸಿ, ಮತ್ತೊಂದೆಡೆ ಇಸ್ರೇಲ್‌ನ ಆಕ್ರಮಣಕಾರಿ ದಾಳಿಗಳಿಗೆ ಅಮೆರಿಕ ಬೆಂಬಲ ನೀಡುತ್ತಿರುವುದು ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಇರಾನ್ ಟೀಕಿಸಿದೆ.

ಇದನ್ನೂ ಓದಿ: ‘ಇರಾನ್ ಕತೆ ಮುಗಿಯಿತು, ಅವರಿಗೆ ಒಂದು ಪೈಸೆಯೂ ಸಿಗುವುದಿಲ್ಲ’; ಕಿಡಿಕಾರಿದ ಟ್ರಂಪ್

ವಿಶ್ವದ ಒಟ್ಟು ತೈಲ ಪೂರೈಕೆಯ ಸುಮಾರು ಶೇ. 20ಕ್ಕಿಂತ ಹೆಚ್ಚು ಭಾಗವು ಈ ಹಾರ್ಮುಜ್ ಜಲಸಂಧಿಯ ಮಾರ್ಗದ ಮೂಲಕವೇ ಸಾಗುತ್ತದೆ. ಇದು ಮುಚ್ಚಲ್ಪಟ್ಟಿರುವುದರಿಂದ ಕಚ್ಚಾ ತೈಲ ಸರಬರಾಜಿಗೆ ಭಾರಿ ಅಡ್ಡಿಯಾಗಲಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರುವ ಆತಂಕ ಮೂಡಿದೆ. ಭಾರತವು ತನ್ನ ಕಚ್ಚಾ ತೈಲದ ಬಹುಪಾಲು ಭಾಗವನ್ನು ಮಧ್ಯಪ್ರಾಚ್ಯ ದೇಶಗಳಿಂದ ಈ ಮಾರ್ಗದ ಮೂಲಕವೇ ಆಮದು ಮಾಡಿಕೊಳ್ಳುವುದರಿಂದ, ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲೆ ಇದು ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್

ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಸಾಗಣೆ ಕೇಂದ್ರಗಳಲ್ಲಿ ಒಂದಾಗಿದೆ. ಇದು ಜಾಗತಿಕ ತೈಲ ಮತ್ತು ಅನಿಲ ರವಾನೆಗೆ ಮುಖ್ಯ ಮಾರ್ಗವಾಗಿ ನಿರ್ವಹಿಸುತ್ತದೆ. ಈ ಜಲಮಾರ್ಗದಲ್ಲಿ ಕಡಲ ಸಂಚಾರಕ್ಕೆ ಯಾವುದೇ ಅಡಚಣೆಯುಂಟಾದರೂ ಅದು ಅಂತಾರಾಷ್ಟ್ರೀಯ ಇಂಧನ ಮತ್ತು ಹಡಗು ಮಾರುಕಟ್ಟೆಗಳಲ್ಲಿ ಭಾರಿ ಆತಂಕವನ್ನು ಉಂಟುಮಾಡುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ