AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಿಂದ ವೈಮಾನಿಕ ದಾಳಿ; ಇರಾನ್​ನ ಮೇಜರ್ ಜನರಲ್​ಗಳು, ಪರಮಾಣು ವಿಜ್ಞಾನಿಗಳು ಸೇರಿ 78 ಜನ ಸಾವು, 329 ಮಂದಿಗೆ ಗಾಯ

ಇರಾನ್ ಮೇಲೆ ಇಸ್ರೇಲ್ ಮಾರಣಾಂತಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇರಾನ್ ದೇಶದ ಜನರಲ್ ಅಮೀರ್ ಅಲಿ ಹಾಜಿಜಾದೆ, ಮೇಜರ್ ಜನರಲ್ ಮೊಹಮ್ಮದ್ ಬಾಘೇರಿ, ಮೇಜರ್ ಜನರಲ್ ಹೊಸೇನ್ ಸಲಾಮಿ ಮತ್ತು ಮೇಜರ್ ಜನರಲ್ ಘೋಲಮ್ ಅಲಿ ರಶೀದ್ ಸೇರಿದಂತೆ ಹಲವಾರು ಹಿರಿಯ ಮಿಲಿಟರಿ ಕಮಾಂಡರ್‌ಗಳು ಮತ್ತು ಪರಮಾಣು ವಿಜ್ಞಾನಿಗಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇರಾನ್ ಖಚಿತಪಡಿಸಿದೆ.

ಇಸ್ರೇಲ್​ನಿಂದ ವೈಮಾನಿಕ ದಾಳಿ; ಇರಾನ್​ನ ಮೇಜರ್ ಜನರಲ್​ಗಳು, ಪರಮಾಣು ವಿಜ್ಞಾನಿಗಳು ಸೇರಿ 78 ಜನ ಸಾವು, 329 ಮಂದಿಗೆ ಗಾಯ
Amir Ali Hajizadeh
ಸುಷ್ಮಾ ಚಕ್ರೆ
|

Updated on: Jun 13, 2025 | 9:52 PM

Share

ಜೆರುಸಲೇಂ, ಜೂನ್ 13: ಇರಾನ್ ಮೇಲೆ ಇಸ್ರೇಲ್ ಇಂದು ನಡೆಸಿದ ವೈಮಾನಿಕ ದಾಳಿಯಲ್ಲಿ (Israel Air Strike) 78 ಜನರು ಮೃತಪಟ್ಟಿದ್ದು, 329 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ ಇರಾನ್‌ನ (Iran) ಪರಮಾಣು ಇಂಧನ ಸಂಸ್ಥೆಯ ಮಾಜಿ ಮುಖ್ಯಸ್ಥ ಫೆರೆಡೌನ್ ಅಬ್ಬಾಸಿ ಸೇರಿದಂತೆ 6 ಪರಮಾಣು ವಿಜ್ಞಾನಿಗಳು ಸಹ ಸೇರಿದ್ದಾರೆ. ಟೆಹರಾನ್​ ಸೇರಿ ಹಲವೆಡೆ ಕ್ಷಿಪಣಿ​ ದಾಳಿ ನಡೆಸಿದ್ದ ಇಸ್ರೇಲ್ ‘ಸ್ಟ್ರೆಂತ್ ಆಫ್​ ಎ ಲಯನ್’ ಕಾರ್ಯಾಚರಣೆಯಡಿ ಕ್ಷಿಪಣಿ​ ದಾಳಿ ನಡೆಸಿತ್ತು. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಜನರಲ್ ಅಮೀರ್ ಅಲಿ ಹಾಜಿಜಾದೆ ಹತ್ಯೆಯಾಗಿರುವುದನ್ನು ಇರಾನ್ ದೃಢಪಡಿಸಿದೆ.

ಇಸ್ರೇಲ್ ಇಂದು ಇರಾನ್‌ನಾದ್ಯಂತ ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದ್ದು, ಪರಮಾಣು ಸೌಲಭ್ಯಗಳು ಮತ್ತು ಮಿಲಿಟರಿ ನಾಯಕತ್ವವನ್ನು ಕೇಂದ್ರೀಕರಿಸಿತ್ತು. ತನ್ನ ದಾಳಿಯ ಸಮಯದಲ್ಲಿ ಇಸ್ರೇಲ್ ಕೆಲವು ಪರಮಾಣು ವಿಜ್ಞಾನಿಗಳು ಮತ್ತು ಮಿಲಿಟರಿ ನಾಯಕರನ್ನು ಕೊಂದಿದೆ. ಇರಾನ್ ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಜನರಲ್ ಅಮೀರ್ ಅಲಿ ಹಾಜಿಜಾದೆ ಸಾವನ್ನಪ್ಪಿದ್ದಾರೆ ಎಂದು ಇರಾನ್ ದೃಢಪಡಿಸಿದೆ ಎಂದು ಎಪಿ ವರದಿ ಮಾಡಿದೆ. ಇಂದು ಇಸ್ರೇಲ್ ಪ್ರಮುಖ ಇರಾನಿನ ಪರಮಾಣು ಮತ್ತು ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿತ್ತು.

ಇದನ್ನೂ ಓದಿ: ಇಸ್ರೇಲ್-ಇರಾನ್ ಉದ್ವಿಗ್ನತೆ; ಪ್ರಧಾನಿ ಮೋದಿಗೆ ಕರೆ ಮಾಡಿದ ಪಿಎಂ ಬೆಂಜಮಿನ್ ನೆತನ್ಯಾಹು

ತನ್ನ ದಾಳಿಯ ಸಮಯದಲ್ಲಿ, ಇರಾನ್​ನ ಕ್ರಾಂತಿಕಾರಿ ಗಾರ್ಡ್‌ನ ಕ್ಷಿಪಣಿ ಕಾರ್ಯಕ್ರಮದ ಮುಖ್ಯಸ್ಥ ಜನರಲ್ ಹಾಜಿಜಾದೆ ಹತ್ಯೆಯಾಗಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ. ಇರಾನ್ ಈ ಹಿಂದೆ ಈ ಹೇಳಿಕೆಯನ್ನು ನಿರಾಕರಿಸಿತ್ತು. ಆದರೆ ಈಗ ಅದನ್ನು ದೃಢಪಡಿಸಿದೆ. ಈ ದಾಳಿಯ ಸಮಯದಲ್ಲಿ 6 ಪ್ರಮುಖ ಪರಮಾಣು ವಿಜ್ಞಾನಿಗಳು ಮತ್ತು ಹಲವಾರು ಹಿರಿಯ ಮಿಲಿಟರಿ ನಾಯಕರು ಸಹ ಸಾವನ್ನಪ್ಪಿದ್ದರು. ಇಂದು ನಡೆದ ಇಸ್ರೇಲ್ ವಾಯುದಾಳಿಯಲ್ಲಿ ಇರಾನ್‌ನ ಉನ್ನತ ಮಿಲಿಟರಿ ಅಧಿಕಾರಿ ಮತ್ತು ಸಶಸ್ತ್ರ ಪಡೆಗಳ ಮುಖ್ಯಸ್ಥ ಮೇಜರ್ ಜನರಲ್ ಮೊಹಮ್ಮದ್ ಬಾಘೇರಿ ಸಾವನ್ನಪ್ಪಿದರು.

ಇದನ್ನೂ ಓದಿ: ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್

ಈ ನಡುವೆ, ಇಸ್ರೇಲ್ ದಾಳಿ ನಡೆದ ಕೆಲವು ಗಂಟೆಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ಇಸ್ರೇಲ್ ಜೊತೆ ಪರಮಾಣು ಒಪ್ಪಂದ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಮಿಲಿಟರಿ ಕ್ರಮದ ಸಾಧ್ಯತೆಯ ಬಗ್ಗೆ ಎಚ್ಚರಿಸಿದ್ದಾರೆ. “ನಾನು ಇರಾನ್‌ಗೆ ಒಪ್ಪಂದ ಮಾಡಿಕೊಳ್ಳಲು ಇರುವ ಅವಕಾಶದ ಬಗ್ಗೆ ಹೇಳಿದ್ದೇನೆ. ಈ ಮೂಲಕ ಇನ್ನಷ್ಟು ಹತ್ಯಾಕಾಂಡವನ್ನು ನಿಲ್ಲಿಸಬಹುದು ಎಂದು ಸೂಚಿಸಿದ್ದೇನೆ” ಎಂದು ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ